Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದ್ದು, ನಾಗಾಲ್ಯಾಂಡ್‌ನ ಮೊಕೊಕ್‌ಚುಂಗ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಬೈಕ್ ಸವಾರರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಇದಲ್ಲದೆ ಮೋದಿ ವಿರುದ್ದ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೋದಿ ನಾಗಾಲ್ಯಾಂಡ್‌ ಜನತೆಗೆ 9 ವರ್ಷಗಳ ಹಿಂದೆ ನಾಗಾ ಒಪ್ಪಂದ ಬಗ್ಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನ ಬೈಕ್‌ ಸವಾರ ಶಹವರ್ ಹುಸೇನ್ ಅವರು ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿರುವ ಬಗ್ಗೆ ಹೇಳಿಕೊಂಡಿದ್ದಾರೆ. ನಾವು ಇಬ್ಬರು ಬೈಕ್‌ಗಳ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಅವರು ಬೈಕ್‌ ಸವಾರಿ ಮಾಡುತ್ತಾರೆ. ನಾನು ಬೈಕ್‌ ರೈಡರ್‌, ನಾವು ಅವರ ಲಡಾಖ್ ರೈಡಿಂಗ್‌ ಬಗ್ಗೆಯೂ ಮಾತನಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆಗಸ್ಟ್ 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ಕಳೆದ ವರ್ಷ ಲಡಾಖ್‌ನ ಪಾಂಗಾಂಗ್ ಸರೋವರಕ್ಕೆ ಬೈಕ್ ರೈಡ್ ಕೈಗೊಂಡಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಯ 4ನೇ ದಿನ ಮೊಕೊಕ್‌ಚುಂಗ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈಶಾನ್ಯ ರಾಜ್ಯಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಭಾರತದ ಇತರ ಭಾಗಗಳಂತೆ ಈಶಾನ್ಯ ರಾಜ್ಯಗಳು ಮುಖ್ಯವಾಗಿದೆ ಎಂಬ ಸಂದೇಶವನ್ನು ನಾವು ಕಳುಹಿಸಲು ಬಯಸಿದ್ದೇವೆ. ಜನಸಂಖ್ಯೆ ಕಡಿಮೆಯಿದ್ದರೂ ಪರವಾಗಿಲ್ಲ, ಆದರೆ ಪ್ರಾಮುಖ್ಯತೆಯು ಒಂದೇ ಆಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗಾ ಒಪ್ಪಂದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಾಗಾಲ್ಯಾಂಡ್ ಜನತೆಗೆ ನೀಡಿದ ಭರವಸೆಗಳನ್ನು ಪ್ರಧಾನಿ ಈಡೇರಿಸಿಲ್ಲ. ನಾಗಾ ಶಾಂತಿ ಒಪ್ಪಂದದ ಕುರಿತಂತೆ ಪ್ರಧಾನಿ ಮೋದಿ ನಾಗಾಲ್ಯಾಂಡ್ ಜನರಿಗೆ ಸುಳ್ಳು ಭರವಸೆ ನೀಡಿ ದ್ರೋಹ ಮಾಡಿದ್ದಾರೆ. ನಿಮ್ಮ ಬಳಿ ಸಮಸ್ಯೆಗೆ ಪರಿಹಾರವಿಲ್ಲದಿದ್ದರೆ ಇದೆ ಎನ್ನುವ ಹಾಗೆ ನಾಟಕ ಮಾಡಬೇಡಿ. ನಮ್ಮ ಪ್ರಧಾನಿ ಮಣಿಪುರಕ್ಕೆ ಹೋಗದಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂ ಅಭಿವೃದ್ಧಿಯಿಂದ ದೂರ ಉಳಿದಿವೆ. ಇವುಗಳನ್ನು ಮುನ್ನೆಲೆಗೆ ತರುವುದೇ ಕಾಂಗ್ರೆಸ್‌ನ ಆಶಯವಾಗಿದೆ ಎಂದು ಹೇಳಿದರು.

ನಾಗಾಲ್ಯಾಂಡ್‌ನ ಕೈಗಾರಿಕೆಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ವಿದ್ಯುತ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಒಂದು ಮಗುವಿನ ಜೊತೆ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ನಾಗಾಲ್ಯಾಂಡ್‌ನ ಒಂದು ಮಗು ಸ್ಪರ್ಧಿಸಲು ಸಾಧ್ಯವೇ? ಇಬ್ಬರು ಮಾತ್ರ ದೇಶವನ್ನು ನಡೆಸುತ್ತಿದ್ದಾರೆ. ದೇಶದಲ್ಲಿರುವ 500 ದೊಡ್ಡ ಕಂಪನಿಗಳಲ್ಲಿ ಒಂದೇ ಒಂದು ನಾಗಾಲ್ಯಾಂಡ್‌ನ ಜನರಿಗೆ ಸೇರಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಆಚಾರಗಳನ್ನು ಅಗೌರವಿಸುತ್ತಿದ್ದಾರೆ. ನೀವು (ನಾಗಾಲ್ಯಾಂಡ್‌ನ ಜನರು) ಏನು ತಿನ್ನುತ್ತೀರಿ ಮತ್ತು ನೀವು ಯಾವ ಧರ್ಮವನ್ನು ನಂಬುತ್ತೀರಿ ಎಂಬುದು ನಿಮ್ಮ ವೈಯಕ್ತಿಕ ಆಯ್ಕೆಯಾಗಿದೆ. ಅದರ ಮೇಲೆ ದಾಳಿ ಮಾಡುವುದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂಬತ್ತು ವರ್ಷಗಳ ಹಿಂದೆ ನಾಗಾಲ್ಯಾಂಡ್ ಮತ್ತು ನಾಗಾ ಜನರಿಗೆ ನೀಡಿದ ಒಂದೇ ಒಂದು ಭರವಸೆಯನ್ನು ನರೇಂದ್ರ ಮೋದಿ ಈಡೇರಿಸಿಲ್ಲ, ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಮಣಿಪುರ ಛಿಧ್ರವಾಗಿದೆ. ದಂಗೆ ಎಬ್ಬಿಸುವ ಮೂಲಕ ಇಡೀ ರಾಜ್ಯವನ್ನೇ ಸುಟ್ಟು ಹಾಕಲಾಯಿತು. ಆದರೆ ಆ ರಾಜ್ಯಕ್ಕೆ ಕಾಲಿಡಲು ಪ್ರಧಾನಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದ್ದೇವೆ.  ವಿಭಿನ್ನ ಧರ್ಮಗಳು, ವಿಭಿನ್ನ ಭಾಷೆಗಳು, ವಿಭಿನ್ನ ಸಂಸ್ಕೃತಿಗಳು ಮತ್ತು ವಿಭಿನ್ನ ಆಲೋಚನೆಗಳಿರುವ ಜನರನ್ನು ನಾವು ಒಟ್ಟಿಗೆ ಸೇರಿಸಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...