Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದ್ದು, ನಾಗಾಲ್ಯಾಂಡ್‌ನ ಮೊಕೊಕ್‌ಚುಂಗ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಬೈಕ್ ಸವಾರರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಇದಲ್ಲದೆ ಮೋದಿ ವಿರುದ್ದ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೋದಿ ನಾಗಾಲ್ಯಾಂಡ್‌ ಜನತೆಗೆ 9 ವರ್ಷಗಳ ಹಿಂದೆ ನಾಗಾ ಒಪ್ಪಂದ ಬಗ್ಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನ ಬೈಕ್‌ ಸವಾರ ಶಹವರ್ ಹುಸೇನ್ ಅವರು ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿರುವ ಬಗ್ಗೆ ಹೇಳಿಕೊಂಡಿದ್ದಾರೆ. ನಾವು ಇಬ್ಬರು ಬೈಕ್‌ಗಳ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಅವರು ಬೈಕ್‌ ಸವಾರಿ ಮಾಡುತ್ತಾರೆ. ನಾನು ಬೈಕ್‌ ರೈಡರ್‌, ನಾವು ಅವರ ಲಡಾಖ್ ರೈಡಿಂಗ್‌ ಬಗ್ಗೆಯೂ ಮಾತನಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆಗಸ್ಟ್ 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ಕಳೆದ ವರ್ಷ ಲಡಾಖ್‌ನ ಪಾಂಗಾಂಗ್ ಸರೋವರಕ್ಕೆ ಬೈಕ್ ರೈಡ್ ಕೈಗೊಂಡಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಯ 4ನೇ ದಿನ ಮೊಕೊಕ್‌ಚುಂಗ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈಶಾನ್ಯ ರಾಜ್ಯಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಭಾರತದ ಇತರ ಭಾಗಗಳಂತೆ ಈಶಾನ್ಯ ರಾಜ್ಯಗಳು ಮುಖ್ಯವಾಗಿದೆ ಎಂಬ ಸಂದೇಶವನ್ನು ನಾವು ಕಳುಹಿಸಲು ಬಯಸಿದ್ದೇವೆ. ಜನಸಂಖ್ಯೆ ಕಡಿಮೆಯಿದ್ದರೂ ಪರವಾಗಿಲ್ಲ, ಆದರೆ ಪ್ರಾಮುಖ್ಯತೆಯು ಒಂದೇ ಆಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗಾ ಒಪ್ಪಂದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಾಗಾಲ್ಯಾಂಡ್ ಜನತೆಗೆ ನೀಡಿದ ಭರವಸೆಗಳನ್ನು ಪ್ರಧಾನಿ ಈಡೇರಿಸಿಲ್ಲ. ನಾಗಾ ಶಾಂತಿ ಒಪ್ಪಂದದ ಕುರಿತಂತೆ ಪ್ರಧಾನಿ ಮೋದಿ ನಾಗಾಲ್ಯಾಂಡ್ ಜನರಿಗೆ ಸುಳ್ಳು ಭರವಸೆ ನೀಡಿ ದ್ರೋಹ ಮಾಡಿದ್ದಾರೆ. ನಿಮ್ಮ ಬಳಿ ಸಮಸ್ಯೆಗೆ ಪರಿಹಾರವಿಲ್ಲದಿದ್ದರೆ ಇದೆ ಎನ್ನುವ ಹಾಗೆ ನಾಟಕ ಮಾಡಬೇಡಿ. ನಮ್ಮ ಪ್ರಧಾನಿ ಮಣಿಪುರಕ್ಕೆ ಹೋಗದಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂ ಅಭಿವೃದ್ಧಿಯಿಂದ ದೂರ ಉಳಿದಿವೆ. ಇವುಗಳನ್ನು ಮುನ್ನೆಲೆಗೆ ತರುವುದೇ ಕಾಂಗ್ರೆಸ್‌ನ ಆಶಯವಾಗಿದೆ ಎಂದು ಹೇಳಿದರು.

ನಾಗಾಲ್ಯಾಂಡ್‌ನ ಕೈಗಾರಿಕೆಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ವಿದ್ಯುತ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಒಂದು ಮಗುವಿನ ಜೊತೆ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ನಾಗಾಲ್ಯಾಂಡ್‌ನ ಒಂದು ಮಗು ಸ್ಪರ್ಧಿಸಲು ಸಾಧ್ಯವೇ? ಇಬ್ಬರು ಮಾತ್ರ ದೇಶವನ್ನು ನಡೆಸುತ್ತಿದ್ದಾರೆ. ದೇಶದಲ್ಲಿರುವ 500 ದೊಡ್ಡ ಕಂಪನಿಗಳಲ್ಲಿ ಒಂದೇ ಒಂದು ನಾಗಾಲ್ಯಾಂಡ್‌ನ ಜನರಿಗೆ ಸೇರಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಆಚಾರಗಳನ್ನು ಅಗೌರವಿಸುತ್ತಿದ್ದಾರೆ. ನೀವು (ನಾಗಾಲ್ಯಾಂಡ್‌ನ ಜನರು) ಏನು ತಿನ್ನುತ್ತೀರಿ ಮತ್ತು ನೀವು ಯಾವ ಧರ್ಮವನ್ನು ನಂಬುತ್ತೀರಿ ಎಂಬುದು ನಿಮ್ಮ ವೈಯಕ್ತಿಕ ಆಯ್ಕೆಯಾಗಿದೆ. ಅದರ ಮೇಲೆ ದಾಳಿ ಮಾಡುವುದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂಬತ್ತು ವರ್ಷಗಳ ಹಿಂದೆ ನಾಗಾಲ್ಯಾಂಡ್ ಮತ್ತು ನಾಗಾ ಜನರಿಗೆ ನೀಡಿದ ಒಂದೇ ಒಂದು ಭರವಸೆಯನ್ನು ನರೇಂದ್ರ ಮೋದಿ ಈಡೇರಿಸಿಲ್ಲ, ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಮಣಿಪುರ ಛಿಧ್ರವಾಗಿದೆ. ದಂಗೆ ಎಬ್ಬಿಸುವ ಮೂಲಕ ಇಡೀ ರಾಜ್ಯವನ್ನೇ ಸುಟ್ಟು ಹಾಕಲಾಯಿತು. ಆದರೆ ಆ ರಾಜ್ಯಕ್ಕೆ ಕಾಲಿಡಲು ಪ್ರಧಾನಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದ್ದೇವೆ.  ವಿಭಿನ್ನ ಧರ್ಮಗಳು, ವಿಭಿನ್ನ ಭಾಷೆಗಳು, ವಿಭಿನ್ನ ಸಂಸ್ಕೃತಿಗಳು ಮತ್ತು ವಿಭಿನ್ನ ಆಲೋಚನೆಗಳಿರುವ ಜನರನ್ನು ನಾವು ಒಟ್ಟಿಗೆ ಸೇರಿಸಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...