Homeಮುಖಪುಟದೇಶವನ್ನುದ್ದೇಶಿಸಿದ ಭಾಷಣದಲ್ಲಿ ಚೀನಾ, ಲಡಾಖ್ ಬಗ್ಗೆ ಒಂದೂ ಮಾತಾಡದ ಮೋದಿ!

ದೇಶವನ್ನುದ್ದೇಶಿಸಿದ ಭಾಷಣದಲ್ಲಿ ಚೀನಾ, ಲಡಾಖ್ ಬಗ್ಗೆ ಒಂದೂ ಮಾತಾಡದ ಮೋದಿ!

ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದು "ಲಡಾಖ್‌ನಿಂದ ಚೀನಾದ ಸೇನೆಯನ್ನು ಯಾವಾಗ ಹೊರಹಾಕುತ್ತೀರಿ?" ಎಂದು ಕೇಳಿದ್ದಾರೆ.

- Advertisement -
- Advertisement -

ಇಂದು ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿದ್ದಾರೆ. ಆದರೆ ಅದರಲ್ಲಿ ಚೀನಾ, ಲಡಾಖ್ ಸಂಘ‍ರ್ಷ, ಸೈನಿಕರ ಸಾವಿನ ಕುರಿತು ಒಂದೂ ಮಾತನಾಡಿಲ್ಲ ಏಕೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಎಲ್ಲಾ ಸುದ್ದಿವಾಹಿನಿಗಳು ಸಹ ಇಂದು ಸಂಜೆ ನಾಲ್ಕು ಗಂಟೆಗೆ ಪ್ರಧಾನಿ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ ಎದುರಿಸುವಿಕೆ, ಅನ್ಲಾಕ್ ಮತ್ತು ಚೀನಾದೊಂದಿಗೆ ಸಂಘ‍ರ್ಷದ ಕುರಿತು ಚರ್ಚಿಸಲಿದ್ದಾರೆ ಎಂದು ವರದಿ ಮಾಡಿದ್ದವು. ಆದರೆ ಮೋದಿಯವರು ಇಂದಿನ ಭಾಷಣದಲ್ಲಿ ಚೀನಾದ ಕುರಿತು ಸೊಲ್ಲೆತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿಯವರು ತಮ್ಮ ಭಾಷಣವನ್ನು ಉಚಿತ ಆಹಾರ ಧಾನ್ಯ ವಿತರಣೆ ಮತ್ತು ಕೊರೊನಾ ಕುರಿತು ಮುಂಜಾಗ್ರತೆಗೆ ಸೀಮಿತಗೊಳಿಸಿದ್ದಾರೆ. ಭಾರತದ ಬಡ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಸರ್ಕಾರದ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಯೋಜನೆಯನ್ನು ನವೆಂಬರ್‌ವರೆಗೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

“ಮುಂದಿನ ಕೆಲವು ತಿಂಗಳುಗಳಲ್ಲಿ ಬರಲಿರುವ ಎಲ್ಲಾ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು, 80 ಕೋಟಿ ಜನರಿಗೆ 5 ಕೆಜಿ ಉಚಿತ ಪಡಿತರ ಮತ್ತು ತಿಂಗಳಿಗೆ 1 ಕೆಜಿ ಬೇಳೆ ನೀಡುವ ಈ ಯೋಜನೆಯನ್ನು ಈಗ ದೀಪಾವಳಿ ಮತ್ತು ಛತ್ತ ಪೂಜೆಯವರೆಗೆ ಅಥವಾ ನವೆಂಬರ್ ಕೊನೆಯವರೆಗೂ ವಿಸ್ತರಿಸಲಾಗುವುದು. ಇದಕ್ಕಾಗಿ 90,000 ಕೋಟಿ ಖರ್ಚಾಗಲಿದೆ ” ಎಂದು ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ.

ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದು “ಲಡಾಖ್‌ನಿಂದ ಚೀನಾದ ಸೇನೆಯನ್ನು ಯಾವಾಗ ಹೊರಹಾಕುತ್ತೀರಿ?” ಎಂದು ಕೇಳಿದ್ದಾರೆ.

ಇನ್ನು ಕಾತರದಿಂದ ಕಾಯುತ್ತಿದ್ದ ನರೇಂದ್ರ ಮೋದಿಯವರ ಭಾಷಣವು ಕೇವಲ 17 ನಿಮಿಷಗಳಲ್ಲಿ ಮುಗಿದುಹೋಗಿದೆ. ನಮ್ಮ ಸೈನಿಕರ ಪರಿಸ್ಥಿತಿ ಕುರಿತು ಅವರು ಮಾತನಾಡಲೇ ಇಲ್ಲ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

“5 ಕೆ.ಜಿ.ಧಾನ್ಯ! ಪ್ರಧಾನ ಮಂತ್ರಿಗಳಿಂದ ಘೋಷಣೆ. ದೇಶದೆಲ್ಲ ಚಾನಲ್ಲುಗಳ ನೇರ ಪ್ರಸಾರ.” ಎಂದು ಕನ್ನಡದ ಸಾಹಿತಿ ಬಿ ಪೀರ್‌ಭಾಷಾರವರು ಪ್ರತಿಕ್ರಿಯಿಸಿದ್ದಾರೆ.

ಸಿದ್ಧರಾಮಯ್ಯ ಫ್ರೀ ಅಕ್ಕಿ ಕೊಟ್ರೆ ಜನರು ಸೋಮಾರಿ ಆಗ್ತಾರೆ, ಮೋದಿ ಫ್ರೀ ಅಕ್ಕಿ ಕೊಟ್ರೆ ಜನರು ಆತ್ಮನಿರ್ಭರ್ ಆಗ್ತಾರೆ ಎಂದು ದೀಪಕ್‌ ನವುಂದರವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ನವೆಂಬರ್‌ವರೆಗೂ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...