Homeಮುಖಪುಟಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ

ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರಿಗೆ ಮಣಿಪುರಕ್ಕಿಂತ ಇಸ್ರೇಲ್ ಮೇಲೆಯೇ ಹೆಚ್ಚು ಆಸಕ್ತಿ ಇದ್ದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಮಿಜೋರಾಂನ ಐಜೋಲ್​ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ”ಮೋದಿಯವರಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕಿಂತ ಇಸ್ರೇಲ್​-ಹಮಾಸ್ ಯುದ್ಧದ ಬಗೆಗಿನ ಆಸಕ್ತಿಯೇ ಹೆಚ್ಚಿದ್ದಂತಿದೆ. ಪ್ರಧಾನಿ ಮತ್ತು ಭಾರತ ಸರ್ಕಾರವು ಇಸ್ರೇಲ್​ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ತುಂಬಾ ಆಸಕ್ತಿ ಹೊಂದಿದೆ, ಆದರೆ ಮಣಿಪುರದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಆಸಕ್ತಿ ಇಲ್ಲ ಎಂಬುದು ನನಗೆ ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

”ಬಿಜೆಪಿ ಮಣಿಪುರದ ಕಲ್ಪನೆಯನ್ನು ನಾಶಪಡಿಸಿದೆ ಮತ್ತು ಅದು ಭಾರತದ ಭಾಗವಾಗಿ ಉಳಿಯುವುದಿಲ್ಲ. ಈಶಾನ್ಯ ರಾಜ್ಯದಲ್ಲಿ ಜನರನ್ನು ಕೊಲ್ಲಲಾಯಿತು, ಮಹಿಳೆಯರಿಗೆ ಕಿರುಕುಳ ನೀಡಲಾಯಿತು ಮತ್ತು ಶಿಶುಗಳನ್ನು ಕೊಲ್ಲಲಾಯಿತು ಆದರೆ ಪ್ರಧಾನಿ ಮೋದಿಗೆ ಆ ರಾಜ್ಯಕ್ಕೆ ಭೇಟಿ ನೀಡುವುದು ಮುಖ್ಯ ಎಂದು ಎನಿಸಲಿಲ್ಲ ಎಂದು ಅವರು ಹೇಳಿದರು.

ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆಯಲಿದ್ದು, ತಮ್ಮ ಪಕ್ಷದ ಪ್ರಚಾರಕ್ಕಾಗಿ ಎರಡು ದಿನಗಳ ಭೇಟಿಗಾಗಿ ಗಾಂಧಿ ಸೋಮವಾರ ಮಿಜೋರಾಂಗೆ ಆಗಮಿಸಿದರು. ಅವರು ಚನ್ಮಾರಿಯಿಂದ ಐಜ್ವಾಲ್‌ನ ರಾಜಭವನದವರೆಗೆ ಪಾದಯಾತ್ರೆಯೊಂದಿಗೆ ಪ್ರಚಾರವನ್ನು ಪ್ರಾರಂಭಿಸಿದರು.

ಸಣ್ಣ ಹಾಗೂ ಮಧ್ಯಮ ವರ್ಗದ ಕುಟುಂಬಗಳನ್ನು ಹಾಳು ಮಾಡಲು ಜಿಎಸ್​ಟಿ ರಚಿಸಲಾಗಿದೆ. ಇದು ಭಾರತದ ರೈತರನ್ನು ದುರ್ಬಲಗೊಳಿಸಲು ವಿನ್ಯಾಸಗೊಳಿಸಲಾಗಿದೆ. ನೋಟು ಅಮಾನ್ಯೀಕರಣದಿಂದ ಏನಾಯಿತು ಎಂಬುದು ನಿಮಗೆ ತಿಳಿದಿದೆ ಎಂದು ಹೇಳಿದರು.

ನೋಟು ಅಮಾನ್ಯೀಕರಣದಿಂದಾಗಿ ಇನ್ನೂ ಚೇತರಿಸಿಕೊಂಡಿಲ್ಲ, ಭಾರತದ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಧಾನಿಯವರ ಕಾರ್ಯತಂತ್ರವನ್ನು ನೀವು ಅರ್ಥಮಾಡಿಕೊಳ್ಳಲು ಬಯಸಿದರೆ ಅದನ್ನು ಅದಾನಿ ಎಂದು ಒಂದೇ ಪದದಲ್ಲಿ ಸಂಕ್ಷಿಪ್ತಗೊಳಿಸಬಹುದು, ಎಲ್ಲವನ್ನೂ ಉದ್ಯಮಿಗಳಿಗೆ ಸಹಾಯ ಮಾಡುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

ನಾನು 1986ರಲ್ಲಿ ನನ್ನ ತಂದೆಯೊಂದಿಗೆ ಇಲ್ಲಿಗೆ ಬಂದಾಗ ನನಗೆ 16 ವರ್ಷ, ಮಿಜೋರಾಂನ ಜನರು ಸೌಮ್ಯ, ದಯೆ ಕರುಣೆಯಿಂದ ತುಂಬಿದ್ದಾರೆ ಎಂದು ಹೇಳಿದರು.

ಮೇ ತಿಂಗಳಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಪ್ರಾರಂಭವಾದಾಗಿನಿಂದ ಪ್ರಧಾನಿ ಮೋದಿ ಇನ್ನೂ ಮಣಿಪುರಕ್ಕೆ ಭೇಟಿ ನೀಡದಿರುವುದು ನಾಚಿಕೆಗೇಡಿನ ಸಂಗತಿ, ಮಣಿಪುರದಲ್ಲಿ ನಡೆದಿರುವುದು ಭಾರತದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ಗಾಂಧಿ ಹೇಳಿದರು. ಇದಕ್ಕೆ ವ್ಯತಿರಿಕ್ತವಾಗಿ, ಅವರು ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಈ ದೇಶದ ಪ್ರತಿಯೊಂದು ಧರ್ಮ, ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯವನ್ನು ರಕ್ಷಿಸಲಿದೆ ಎಂದರು.

ಮಿಜೋರಾಂ ವಿಧಾನಸಭೆಗೆ ನವೆಂಬರ್ 7 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮಿಜೋರಾಂ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...