Homeಮುಖಪುಟಗಿರ್‌ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ ಹೆಚ್ಚಳಕ್ಕೆ ಅಭಿನಂಧನೆ ಸಲ್ಲಿಸಿದ ಪ್ರಧಾನಿ ಮೋದಿ

ಗಿರ್‌ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ ಹೆಚ್ಚಳಕ್ಕೆ ಅಭಿನಂಧನೆ ಸಲ್ಲಿಸಿದ ಪ್ರಧಾನಿ ಮೋದಿ

- Advertisement -
- Advertisement -

ಗುಜರಾತಿನ ಸೌರಾಷ್ಟ್ರದ ಗಿರ್ ಅಭಯಾರಣ್ಯದಲ್ಲಿ ಏಷಿಯಾಟಿಕ್ ಸಿಂಹಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇದಕ್ಕಾಗಿ ಕೆಲಸ ಮಾಡಿರುವ ಎಲ್ಲರಿಗೂ ಅಭಿನಂಧನೆ ಸಲ್ಲಿಸಿದ್ದಾರೆ. ಭಾರತದಲ್ಲಿ ಸಿಂಹಗಳು ಕಂಡು ಬರುವ ಒಂದೇ ಪ್ರದೇಶ ಅದಾಗಿದೆ.

ಈ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ 29% ಹೆಚ್ಚಳಗೊಂಡಿದ್ದು ಒಟ್ಟು 674 ಸಿಂಹಗಳಿವೆ ಎಂದು ಗುಜರಾತ್ ಅರಣ್ಯ ಇಲಾಖೆ ಬುಧವಾರ ಹೇಳಿದೆ. ಜೂನ್ 5 ಮತ್ತು ಜೂನ್ 6 ರ ರಾತ್ರಿ ಹುಣ್ಣಿಮೆಯಲ್ಲಿ ಸಿಂಹಗಳ ಎಣಿಕೆ ಕಾರ್ಯವನ್ನು ಅರಣ್ಯ ಇಲಾಖೆ ನಡೆಸಿದೆ. 2015 ರ ಗಣತಿ ಪ್ರಕಾರ ಗಿರ್ ನಲ್ಲಿ 523 ಏಷಿಯಾಟಿಕ್ ಸಿಂಹಗಳು ಇದ್ದವು.

ಇದರ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು “ಎರಡು ಒಳ್ಳೆಯ ಸುದ್ದಿಗಳು. ಗುಜರಾತಿನ ಗಿರ್ ಅರಣ್ಯದಲ್ಲಿ ವಾಸಿಸುವ ಭವ್ಯ ಏಷಿಯಾಟಿಕ್ ಸಿಂಹಗಳ ಸಂಖ್ಯೆ ಸುಮಾರು 29% ಹೆಚ್ಚಳಗೊಂಡಿದೆ. ಅಲ್ಲದೆ ಅಭಯಾರಣ್ಯದ ಭೂ ವಿಸ್ತೀರ್ಣ 36% ಹೆಚ್ಚಳಗೊಂಡಿದೆ. ಇಂತಹ ಅದ್ಭುತ ಕೆಲಸಕ್ಕೆ ಶ್ರಮ ವಹಿಸಿದ ಎಲ್ಲರಿಗೂ ಹಾಗೂ ಗುಜರಾತ್ ನ ನಾಗರಿಕರಿಗೂ ಅಭಿನಂದನೆಗಳು” ಎಂದು ಬರೆದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ “ಕಳೆದ ಕೆಲವು ವರ್ಷಗಳಿಂದ ಗುಜರಾತಿನಲ್ಲಿ ಸಿಂಹಗಳ ಸಂಖ್ಯೆ ಏರುಗತಿಯಲ್ಲಿ ಇದೆ. ಸಮುದಾಯ ಶ್ರಮ, ತಂತ್ರಜ್ಞಾನದ ಬಳಕೆ, ವನ್ಯಜೀವಿಗಳ ಆರೋಗ್ಯ ಸೇವೆ, ಮನುಷ್ಯ-ಸಿಂಹಗಳ ಘರ್ಷಣೆಯನ್ನು ತಡೆಯಲು ಸರಿಯಾದ ಕ್ರಮಗಳಿಂದ ಇದು ಸಾಧ್ಯವಾಗಿದೆ. ಈ ಒಳ್ಳೆಯ ಬೆಳವಣಿಗೆ ಮುಂದುವರೆಯುವ ಭರವಸೆ ಇದೆ” ಎಂದು ಕೂಡ ಅವರು ಬರೆದಿದ್ದಾರೆ.

1965 ರಲ್ಲಿ ಸೌರಾಷ್ಟ್ರದ ಗಿರ್ ಅರಣ್ಯದ 1412.21 ಚದರ ಕಿ.ಮಿ. ಅನ್ನು ಸಂರಕ್ಷಿತ ಅಭಯಾರಣ್ಯ ಎಂದು ಘೋಷಿಸಲಾಗಿತ್ತು.


ಓದಿ: ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...