Homeಮುಖಪುಟಗಿರ್‌ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ ಹೆಚ್ಚಳಕ್ಕೆ ಅಭಿನಂಧನೆ ಸಲ್ಲಿಸಿದ ಪ್ರಧಾನಿ ಮೋದಿ

ಗಿರ್‌ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ ಹೆಚ್ಚಳಕ್ಕೆ ಅಭಿನಂಧನೆ ಸಲ್ಲಿಸಿದ ಪ್ರಧಾನಿ ಮೋದಿ

- Advertisement -
- Advertisement -

ಗುಜರಾತಿನ ಸೌರಾಷ್ಟ್ರದ ಗಿರ್ ಅಭಯಾರಣ್ಯದಲ್ಲಿ ಏಷಿಯಾಟಿಕ್ ಸಿಂಹಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇದಕ್ಕಾಗಿ ಕೆಲಸ ಮಾಡಿರುವ ಎಲ್ಲರಿಗೂ ಅಭಿನಂಧನೆ ಸಲ್ಲಿಸಿದ್ದಾರೆ. ಭಾರತದಲ್ಲಿ ಸಿಂಹಗಳು ಕಂಡು ಬರುವ ಒಂದೇ ಪ್ರದೇಶ ಅದಾಗಿದೆ.

ಈ ಅಭಯಾರಣ್ಯದಲ್ಲಿ ಸಿಂಹಗಳ ಸಂಖ್ಯೆ 29% ಹೆಚ್ಚಳಗೊಂಡಿದ್ದು ಒಟ್ಟು 674 ಸಿಂಹಗಳಿವೆ ಎಂದು ಗುಜರಾತ್ ಅರಣ್ಯ ಇಲಾಖೆ ಬುಧವಾರ ಹೇಳಿದೆ. ಜೂನ್ 5 ಮತ್ತು ಜೂನ್ 6 ರ ರಾತ್ರಿ ಹುಣ್ಣಿಮೆಯಲ್ಲಿ ಸಿಂಹಗಳ ಎಣಿಕೆ ಕಾರ್ಯವನ್ನು ಅರಣ್ಯ ಇಲಾಖೆ ನಡೆಸಿದೆ. 2015 ರ ಗಣತಿ ಪ್ರಕಾರ ಗಿರ್ ನಲ್ಲಿ 523 ಏಷಿಯಾಟಿಕ್ ಸಿಂಹಗಳು ಇದ್ದವು.

ಇದರ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು “ಎರಡು ಒಳ್ಳೆಯ ಸುದ್ದಿಗಳು. ಗುಜರಾತಿನ ಗಿರ್ ಅರಣ್ಯದಲ್ಲಿ ವಾಸಿಸುವ ಭವ್ಯ ಏಷಿಯಾಟಿಕ್ ಸಿಂಹಗಳ ಸಂಖ್ಯೆ ಸುಮಾರು 29% ಹೆಚ್ಚಳಗೊಂಡಿದೆ. ಅಲ್ಲದೆ ಅಭಯಾರಣ್ಯದ ಭೂ ವಿಸ್ತೀರ್ಣ 36% ಹೆಚ್ಚಳಗೊಂಡಿದೆ. ಇಂತಹ ಅದ್ಭುತ ಕೆಲಸಕ್ಕೆ ಶ್ರಮ ವಹಿಸಿದ ಎಲ್ಲರಿಗೂ ಹಾಗೂ ಗುಜರಾತ್ ನ ನಾಗರಿಕರಿಗೂ ಅಭಿನಂದನೆಗಳು” ಎಂದು ಬರೆದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ “ಕಳೆದ ಕೆಲವು ವರ್ಷಗಳಿಂದ ಗುಜರಾತಿನಲ್ಲಿ ಸಿಂಹಗಳ ಸಂಖ್ಯೆ ಏರುಗತಿಯಲ್ಲಿ ಇದೆ. ಸಮುದಾಯ ಶ್ರಮ, ತಂತ್ರಜ್ಞಾನದ ಬಳಕೆ, ವನ್ಯಜೀವಿಗಳ ಆರೋಗ್ಯ ಸೇವೆ, ಮನುಷ್ಯ-ಸಿಂಹಗಳ ಘರ್ಷಣೆಯನ್ನು ತಡೆಯಲು ಸರಿಯಾದ ಕ್ರಮಗಳಿಂದ ಇದು ಸಾಧ್ಯವಾಗಿದೆ. ಈ ಒಳ್ಳೆಯ ಬೆಳವಣಿಗೆ ಮುಂದುವರೆಯುವ ಭರವಸೆ ಇದೆ” ಎಂದು ಕೂಡ ಅವರು ಬರೆದಿದ್ದಾರೆ.

1965 ರಲ್ಲಿ ಸೌರಾಷ್ಟ್ರದ ಗಿರ್ ಅರಣ್ಯದ 1412.21 ಚದರ ಕಿ.ಮಿ. ಅನ್ನು ಸಂರಕ್ಷಿತ ಅಭಯಾರಣ್ಯ ಎಂದು ಘೋಷಿಸಲಾಗಿತ್ತು.


ಓದಿ: ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...