Homeಅಂತರಾಷ್ಟ್ರೀಯಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

- Advertisement -
- Advertisement -

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೊಸ ಪ್ರಧಾನಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 13 ದೇಶಗಳ ನಾಯಕರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನುಸ್ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ, ಚೀನಾ, ಸೌದಿ ಅರೇಬಿಯಾ, ತುರ್ಕಿ, ಪಾಕಿಸ್ತಾನ, ಯುಎಇ, ಕತಾರ್, ಮಲೇಷ್ಯಾ, ಬ್ರೂನೈ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಬೂತಾನ್ ದೇಶಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ತಾರಿಖ್ ರೆಹಮಾನ್ ಸೇರಿದಂತೆ ಬಿಎನ್‌ಪಿ ನಾಯಕರ ಪ್ರಮಾಣವಚನ ಕಾರ್ಯಕ್ರಮ ಡಾಕಾದಲ್ಲಿರುವ ಬಾಂಗ್ಲಾದೇಶದ ರಾಷ್ಟೀಯ ಸಂಸತ್ತಿನ ಸೌತ್ ಪ್ಲಾಝಾದಲ್ಲಿ ನಡೆಯಲಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯ ಸಾಧಿಸಿದೆ.

ಬಿಎನ್‌ಪಿ ನಾಯಕ ಎಎನ್‌ಎಂ ಇಹ್ಸಾನುಲ್ ಹಕ್ ಮಿಲನ್ ಅವರು ಶನಿವಾರ ಮಾತನಾಡಿ, ನೂತನ ಸರ್ಕಾರದ ಪ್ರಮಾಣವಚನ ಸಮಾರಂಭಕ್ಕೆ ಭಾರತದ ಪ್ರಧಾನಿ ಮೋದಿಯವರನ್ನು ಆಹ್ವಾನಿಸುವ ಭರವಸೆ ವ್ಯಕ್ತಪಡಿಸಿದ್ದರು. ಇದೇ ವೇಳೆ ಅವರು “ಎಲ್ಲರೊಂದಿಗೆ ಸ್ನೇಹ, ಯಾರ ಮೇಲೂ ದ್ವೇಷವಿಲ್ಲ” ಎಂಬ ಪಕ್ಷದ ಅಂತರ್ಗತ ವಿದೇಶಾಂಗ ನೀತಿಯ ದೃಷ್ಟಿಕೋನವನ್ನು ಒತ್ತಿ ಹೇಳಿದ್ದರು.

ಢಾಕಾದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ್ದ ಮಿಲನ್, “ಕಾರ್ಯಕ್ರಮದ ಆಯೋಜಕರು ಏನು ಮಾಡುತ್ತಿದ್ದಾರೆಂದು ನನಗೆ ಸರಿಯಾಗಿ ತಿಳಿದಿಲ್ಲ, ಆದರೆ ಅವರು ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ಭರವಸೆ ನನಗಿದೆ. ನನಗಂತೂ ನಿಖರವಾಗಿ ಗೊತ್ತಿಲ್ಲ, ಆದರೆ ಅವರು (ಪ್ರಧಾನಿ ಮೋದಿ) ಆಹ್ವಾನಿತರಾಗಬೇಕು. ಇದು ಸಾಮಾನ್ಯ ಸೌಜನ್ಯ. ಆಯೋಜಕರು ಅದನ್ನು ಮಾಡುತ್ತಾರೆ. ಇಡೀ ಜಗತ್ತು ನಮ್ಮೊಂದಿಗಿರುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದರು.

ಬಿಎನ್‌ಪಿ ವಿಜಯದ ನಂತರ ಅಭಿನಂದನಾ ಸಂದೇಶ ಕಳುಹಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದೆ. “ಗೌರವಾನ್ವಿತ ನರೇಂದ್ರ ಮೋದಿಯವರೇ ನಿಮಗೆ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಚುನಾವಣೆಯಲ್ಲಿ ಬಿಎನ್‌ಪಿ ನಿರ್ಣಾಯಕ ಜಯ ಸಾಧಿಸುವಲ್ಲಿ ತಾರಿಖ್ ರೆಹಮಾನ್ ಅವರ ನಾಯಕತ್ವವನ್ನು ನೀವು ಗುರುತಿಸಿರುವುದನ್ನು ನಾವು ಅಪಾರವಾಗಿ ಪ್ರಶಂಸಿಸುತ್ತೇವೆ” ಎಂದು ಮೋದಿಯ ಪೋಸ್ಟ್‌ಗೆ ಬಿಎನ್‌ಪಿ ಪ್ರತಿಕ್ರಿಯಿಸಿತ್ತು.

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾ, ಮುಂಬರುವ ವರ್ಷಗಳಲ್ಲಿ ಭಾರತದೊಂದಿಗೆ ನಿಕಟವಾಗಿ ಕೆಲಸ ಮಾಡುವ ಇಚ್ಛೆಯನ್ನು ಬಿಎನ್‌ಪಿ ವ್ಯಕ್ತಪಡಿಸಿದೆ.

“ಪರಸ್ಪರ ಗೌರವ, ಪರಸ್ಪರರ ಕಾಳಜಿಗಳ ಬಗ್ಗೆ ಸಂವೇದನೆ ಹಾಗೂ ನಮ್ಮ ಪ್ರದೇಶದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ಹಿತದೃಷ್ಟಿಯಿಂದ, ಭಾರತದೊಂದಿಗೆ ನಾವು ರಚನಾತ್ಮಕವಾಗಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇವೆ. ಆ ಮೂಲಕ ನಮ್ಮ ಬಹುಮುಖಿ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಹೊಂದಿದ್ದೇವೆ” ಎಂದು ಹೇಳಿದೆ.

2026ರ ಫೆಬ್ರವರಿ 12ರಂದು ನಡೆದ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯು, ದೀರ್ಘಕಾಲದ ನಾಯಕಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ 2024ರ ವಿದ್ಯಾರ್ಥಿ ದಂಗೆಯ ನಂತರದ ಮೊದಲ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ 300 ಸ್ಥಾನಗಳ ಸಂಸತ್ತಿನಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ 151 ಸ್ಥಾನಗಳಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಎನ್‌ಪಿ ಭದ್ರಪಡಿಸಿಕೊಂಡಿದೆ. ಇದರಿಂದಾಗಿ ತಾರಿಖ್ ರೆಹಮಾನ್ ಅವರು ಭಾವಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರೆ, ಇಸ್ಲಾಮಿಸ್ಟ್ ಜಮಾತ್-ಎ-ಇಸ್ಲಾಮಿ ಮೈತ್ರಿಕೂಟವು ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...