Homeಮುಖಪುಟಹಳೆಯ ಸಂಸತ್‌ ಕಟ್ಟಡಕ್ಕೆ 'ಸಂವಿಧಾನ ಸದನ' ಎಂದು ಹೆಸರು ಘೋಷಣೆ

ಹಳೆಯ ಸಂಸತ್‌ ಕಟ್ಟಡಕ್ಕೆ ‘ಸಂವಿಧಾನ ಸದನ’ ಎಂದು ಹೆಸರು ಘೋಷಣೆ

- Advertisement -
- Advertisement -

ಹಳೆಯ ಸಂಸತ್ ಕಟ್ಟಡಕ್ಕೆ ಪ್ರಧಾನಿ ಮೋದಿ ಹೊಸ ಹೆಸರನ್ನು ಘೋಷಿಸಿದ್ದು, ಅದನ್ನು ‘ಸಂವಿಧಾನ ಸದನ’ ಎಂದು ನಾಮಕರಣ ಮಾಡಿದ್ದಾರೆ.

ಪ್ರಧಾನಿ ಮೋದಿ ಹಳೆಯ ಸಂಸತ್ತಿನಲ್ಲಿ ಮಾಡಿದ ಕೊನೆಯ ಭಾಷಣದಲ್ಲಿ ಹಳೆಯ ಸಂಸತ್ತಿನ ಕಟ್ಟಡಕ್ಕೆ ಈ ಹೆಸರನ್ನು ಘೊಷಿಸಿದ್ದಾರೆ. ಬಳಿಕ ಸಂಸದರ ಜೊತೆ ಕಾಲ್ನಡಿಗೆಯಲ್ಲೇ ಹೊಸ ಸಂಸತ್ತಿನ ಕಟ್ಟಡಕ್ಕೆ ತೆರಳಿದ್ದಾರೆ. ಈ ಹೊಸ ಕಟ್ಟಡ ಇಂದಿನಿಂದಲೇ ಭಾರತದ ಅಧೀಕೃತ ಸಂಸತ್ತು ಆಗಿರಲಿದೆ.

ಪ್ರಧಾನಿ ಮೋದಿ ಸಂಸತ್ತಿನ ಭಾಷಣದಲ್ಲಿ, ಇಂದು ನಾವು ಇಲ್ಲಿಂದ ಹೊಸ ಸಂಸತ್ ಭವನಕ್ಕೆ ಹೋಗುತ್ತಿದ್ದೇವೆ. ಇಂದು ಗಣೇಶ ಚತುರ್ಥಿಯಾಗಿರುವುದರಿಂದ ಒಳ್ಳೆಯ ದಿನವಾಗಿದೆ. ನಾನು ನಿಮಗೆ ಮನವಿ ಮಾಡುತ್ತೇನೆ ಮತ್ತು ನೀವು ಈ ಮನವಿಯನ್ನು ಪರಿಗಣಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ಈಗ ನಾವು ಸಂಸತ್ತಿನ ಹೊಸ ಕಟ್ಟಡಕ್ಕೆ ಹೋಗುತ್ತಿದ್ದೇವೆ. ಈ ಹಳೆಯ ಸದನದ ವೈಭವವು ಎಂದಿಗೂ ಕುಸಿಯಬಾರದು. ನಾವು ಇದನ್ನು ‘ಹಳೆಯ ಸಂಸತ್ತು’ ಎಂದು ಕರೆಯಬಾರದು. ನೀವೆಲ್ಲರೂ ಅನುಮತಿ ನೀಡಿದರೆ, ಈ ಕಟ್ಟಡವನ್ನು ‘ಸಂವಿಧಾನ ಸದನ’ ಎಂದು ಕರೆಯಬೇಕೆಂದು ನಾನು ವಿನಂತಿಸುತ್ತೇನೆ. ಅದು ನಮಗೆ ಯಾವಾಗಲೂ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ನಾವು ಇದನ್ನು ‘ಸಂವಿಧಾನ ಸದನ’ ಎಂದು ಕರೆಯುವಾಗ, ಇಲ್ಲಿ ಕುಳಿತ ಆ ಮಹಾನ್ ವ್ಯಕ್ತಿಗಳ ನೆನಪುಗಳು ಆಗುತ್ತದೆ ಎಂದು ಹೇಳಿದ್ದಾರೆ.

ಇಂದು ಮಹಿಳಾ ಮೀಸಲಾತಿ ಬಿಲ್‌ನ್ನು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಮಂಡನೆಯನ್ನು ಮಾಡಿದ್ದಾರೆ. ಸಂಸತ್ತಿನ ನೂತನ ಕಟ್ಟಡದಲ್ಲಿ ನಡೆಯುತ್ತಿರುವ ಮೊದಲ ದಿನದ  ವಿಶೇಷ ಅಧಿವೇಶನದಲ್ಲಿ ಬಿಲ್‌ ಮಂಡನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಮಂಡನೆ ಮಾಡಲಾಗಿದೆ. ಮಸೂದೆಗೆ ಪ್ರತಿಪಕ್ಷ ಕಾಂಗ್ರೆಸ್ ಸಂಪೂರ್ಣವಾದ ಬೆಂಬಲವನ್ನು ನೀಡಿದೆ.

ಈ ಕುರಿತು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾರಿ ಶಕ್ತಿ ವಂದನ ಅಧಿನಿಯಮ’ ಮಸೂದೆಯು ಹೆಚ್ಚಿನ ಮಹಿಳೆಯರು ಸಂಸತ್ತು ಮತ್ತು ವಿಧಾನಸಭೆಗಳ ಸದಸ್ಯರಾಗುವುದಕ್ಕೆ ಹೆಚ್ಚಿನ ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಮಸೂದೆಯು ಲೋಕಸಭೆ ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡುತ್ತದೆ, ಆದರೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ತುಗಳಲ್ಲಿ ಈ ಮೀಸಲಾತಿ ಇರುವುದಿಲ್ಲ. ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯದಲ್ಲಿ ಮಹಿಳೆಯರು ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಸರ್ಕಾರ ಹೇಳಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...