Homeಮುಖಪುಟಮೋದಿ ದೇಶದಲ್ಲಿ 'ಭ್ರಷ್ಟಾಚಾರದ ಶಾಲೆ'ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ: ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ಚುನಾವಣಾ ಬಾಂಡ್‌ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ಯನ್ನು ನಡೆಸುತ್ತಿದ್ದಾರೆ ಮತ್ತು ಸಂಪೂರ್ಣ ಭ್ರಷ್ಟಾಚಾರ ವಿಜ್ಞಾನ” ವಿಷಯದಲ್ಲಿ ಎಲ್ಲಾ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಎಕ್ಸ್’ನಲ್ಲಿ ಈ ಕುರಿತು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದು,  ಚುನಾವಣಾ ಬಾಂಡ್‌ಗಳ ಕುರಿತು ಬಿಜೆಪಿಯನ್ನು ಟೀಕಿಸುವ ಹೊಸ ಜಾಹೀರಾತಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರು ದೇಶದಲ್ಲಿ ‘ಭ್ರಷ್ಟಾಚಾರದ ಶಾಲೆ’ ನಡೆಸುತ್ತಿದ್ದಾರೆ, ಅಲ್ಲಿ ಅವರು  ‘ಇಡೀ ಭ್ರಷ್ಟಾಚಾರ ವಿಜ್ಞಾನ’ ವಿಷಯದ ಅಡಿಯಲ್ಲಿ ‘ಡೊನೇಶನ್‌ ವ್ಯವಹಾರ’ ಸೇರಿದಂತೆ ಎಲ್ಲಾ ಅಧ್ಯಾಯಗಳನ್ನು ವಿವರವಾಗಿ ಬೋಧಿಸುತ್ತಾರೆ ಎಂದು ಹೇಳಿದ್ದಾರೆ.

ದಾಳಿಗಳ ಮೂಲಕ ಡೊನೇಶನ್‌ ಸಂಗ್ರಹವನ್ನು ಹೇಗೆ ಮಾಡಲಾಗುತ್ತದೆ ಮತ್ತು ಡೊನೇಶನ್‌ ಪಡೆದ ನಂತರ ಹೇಗೆ ಕಾಂಟ್ರಾಕ್ಟ್‌ಗಳನ್ನು ನೀಡಲಾಗುತ್ತದೆ ಎಂಬುದರ ಕುರಿತು ಪ್ರಧಾನ ಮಂತ್ರಿ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ. ಭ್ರಷ್ಟರನ್ನು ತೊಳೆಯುವ ವಾಷಿಂಗ್ ಮೆಷಿನ್ ಹೇಗೆ ಕೆಲಸ ಮಾಡುತ್ತದೆ? ಏಜೆನ್ಸಿಗಳನ್ನು ರಿಕವರಿ ಏಜೆಂಟ್‌ಗಳನ್ನಾಗಿ ಮಾಡಿ ‘ಜಾಮೀನು ಮತ್ತು ಜೈಲು’ ಆಟ ಹೇಗೆ ಎಂದು ಕಲಿಸುತ್ತಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

‘ಭ್ರಷ್ಟರ ಗುಹೆ’ಯಾಗಿ ಮಾರ್ಪಟ್ಟಿರುವ ಬಿಜೆಪಿ ತನ್ನ ನಾಯಕರಿಗೆ ಈ ‘ಕ್ರ್ಯಾಶ್ ಕೋರ್ಸ್’ ಅನ್ನು ಕಡ್ಡಾಯಗೊಳಿಸಿದೆ ಮತ್ತು ಅದಕ್ಕೆ ದೇಶವೇ ಬೆಲೆ ತೆರುತ್ತಿದೆ.  I.N.D.I.A. ಬ್ಲಾಕ್ ಸರ್ಕಾರವು ಈ “ಭ್ರಷ್ಟಾಚಾರದ ಶಾಲೆ” ಯನ್ನು ಮುಚ್ಚಲಿದೆ ಮತ್ತು ಈ ಕೋರ್ಸ್‌ನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಜಾಹೀರಾತನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, ‘ಹಫ್ತಾ ವಸೂಲಿ’ ಸರ್ಕಾರವನ್ನು ಆಯ್ಕೆ ಮಾಡಬೇಡಿ, ಬದಲಾವಣೆಯನ್ನು ಆಯ್ಕೆ ಮಾಡಿಕೊಳ್ಳಿ, ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿ ತೀರ್ಪು ನೀಡಿತು. ಸುಪ್ರೀಂ ಕೋರ್ಟ್‌ನ ನಿರ್ದೇಶನದ ನಂತರ ಚುನಾವಣಾ ಬಾಂಡ್‌ಗಳ ಅಧಿಕೃತ ಮಾರಾಟಗಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ದತ್ತಾಂಶವು ಬಿಜೆಪಿಯ ಕೊಡು ಕೊಳ್ಳುವಿಕೆ ಮತ್ತು ದೇಣಿಗೆಗೆ ಪ್ರತಿಯಾಗಿ ಕಂಪನಿಗಳಿಗೆ ‘ರಕ್ಷಣೆ’ಯಂತಹ ‘ಭ್ರಷ್ಟ ತಂತ್ರ’ಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿ: ಕೀಟನಾಶಕ ರಾಸಾಯನಿಕ ಬಳಕೆ ಆರೋಪ: ‘ಎವರೆಸ್ಟ್ ಫಿಶ್ ಕರಿ ಮಸಾಲಾ’ವನ್ನು ನಿಷೇಧಿಸಿದ ಸಿಂಗಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...