Homeಮುಖಪುಟಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 02ರ ಶುಕ್ರವಾರದಂದು ಮಂಗಳೂರಿಗೆ ಭೇಟಿ ನೀಡಿದ್ದರು. ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆನಂತರ ದೆಹಲಿಗೆ ತೆರಳುವ ಮುನ್ನ ಹೆಲಿಪ್ಯಾಡ್‌ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಪ್ರತಿ ತಿಂಗಳೂ ಸಹ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶದ ಪ್ರಧಾನಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಬರುವುದೇಕೆ? ಅಂತಹ ಕೆಲಸಗಳೆನಿವೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಮಂಗಳೂರಿನ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾದರೂ ಅದರಲ್ಲಿ ಸಾಕಷ್ಟು ಜೋಶ್ ಇತ್ತು. ಇದೇ ರೀತಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾದೇಶಿಕವಾಗಿ ಆಯಕಟ್ಟಿನ ಜಾಗದಲ್ಲಿ ಆಯೋಜಿಸಿ. ನಾನು ಪ್ರತಿ ತಿಂಗಳೂ ಬರುತ್ತೇನೆ ಎಂದು ಮೋದಿ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. 15 ದಿನದ ಮುಂಚೆಯೇ ಇನ್ಮುಂದೆ ಪ್ರತಿ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬರುತ್ತಾರೆ ಎಂದು ಘೋಷಿಸಲಾಗಿತ್ತು.

ಮೇಲ್ನೋಟಕ್ಕೆ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿಯವರು ಬರುತ್ತಿರುವುದು ನಿಜವಾದರೂ ಇದು ಕರ್ನಾಟಕದಲ್ಲಿ ಚುನಾವಣಾ ವರ್ಷ ಎಂಬುದನ್ನು ಯಾರೂ ಮರೆಯಲಾರರು. ಇಷ್ಟು ವರ್ಷಗಳ ಕಾಲ ಕರ್ನಾಟಕಕ್ಕೆ ಹೆಚ್ಚು ಸಲ ಬಾರದ ಮೋದಿಯವರು ಚುನಾವಣಾ ವರ್ಷದಲ್ಲಿ ಮಾತ್ರ ಪ್ರತಿ ತಿಂಗಳು ಬರುತ್ತೇನೆ ಎಂದಿದ್ದಾರೆ. ಇದೇ ರೀತಿಯಾಗಿ ಹಿಂದೆಯೂ ಸಹ ಚುನಾವಣೆ ಇದ್ದ ಕಡೆಗಳಿಗೆಲ್ಲಾ ಮೋದಿಯವರು ಭೇಟಿ ನೀಡಿ ಸಾವಿರಾರು ಕೋಟಿ ರೂಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದರು. ಅದನ್ನೆ ಕರ್ನಾಟಕದಲ್ಲಿಯೂ ಸಹ ಮುಂದುವರೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕರ್ನಾಟಕದ ಬಿಜೆಪಿ ಪರಿಸ್ಥಿತಿ

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಗುತ್ತಿಗೆದಾರರ ಸಂಘ ಪದೇ ಪದೇ ಈ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಮತೀಯ ಗಲಭೆಗಳು ತಿರುಗುಬಾಣವಾಗಿವೆ. ಹರ್ಷ ಕೊಲೆ ವಿಚಾರ ಮತ್ತು ಪ್ರವೀಣ್ ನೆಟ್ಟಾರು ಕೊಲೆ ವಿಚಾರದಲ್ಲಿ ಅದು ಸಾಬೀತಾಗಿದೆ. ಈ ಸರ್ಕಾರ ಹಿಂದೂಗಳ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂಬ ಭಾವನೆ ಹಿಂದುತ್ವವಾದಿಗಳಲ್ಲಿ ಮೂಡಿದೆ. ಮುಂಚಿತವಾಗಿ ಚುನಾವಣೆ ನಡೆಸಬೇಕೆಂದು ಬಯಸುವ ಬಿಜೆಪಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಆದರೆ ಇವೆಲ್ಲದರ ನಡುವೆ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ತಮ್ಮ 75ನೇ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಅದ್ದೂರಿ ಕಾರ್ಯಕ್ರಮ ಮಾಡಿದ್ದಾರೆ. ಇದು ಸಹ ಬಿಜೆಪಿಯವರನ್ನು ಆತಂಕಕ್ಕೆ ತಳ್ಳಿರುವ ಸಾಧ್ಯತೆಯಿದೆ.

ಸಮರ್ಥ ಸಿಎಂ ಅಭ್ಯರ್ಥಿಯ ಕೊರತೆ

ಯಡಿಯೂರಪ್ಪನವರು ನಡೆಸಿದ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ ನಂತರ ಬೊಮ್ಮಾಯಿಯವರನ್ನು ಸಿಎಂ ಆಗಿ ಹೊಂದಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಲಿಂಗಾಯಿತ ಮುಖಂಡ ಯಡಿಯೂರಪ್ಪನವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ಸೇರಿಸಿಕೊಂಡಿದೆ. ಇಷ್ಟರಿಂದ ಜನ ಬಿಜೆಪಿಗೆ ಮತ ಹಾಕುತ್ತಾರೆಯೇ ಎಂಬ ಅನುಮಾನ ಬಿಜೆಪಿಯಲ್ಲಿದೆ. ಹಾಗಾಗಿ ಅದನ್ನು ಸರಿದೂಗಿಸುವುದು ಮೋದಿಯವರಿಂದ ಮಾತ್ರ ಸಾಧ್ಯ ಎಂಬ ನಿರ್ಧಾರಕ್ಕೆ ಅದು ಬಂದಿದೆ. ಹಾಗಾಗಿಯೇ ಪ್ರತಿ ತಿಂಗಳೂ ಸಹ ಮೋದಿಯವರು ರಾಜ್ಯಕ್ಕೆ ಬರಬೇಕೆಂದು ಬಿಜೆಪಿ ಮುಖಂಡರು ಬಯಸುತ್ತಿದ್ದಾರೆ.

ನಡೆಯಲಿದೆಯೇ ಮೋದಿ ಮ್ಯಾಜಿಕ್?

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಎಷ್ಟೆಲ್ಲ ಮೋದಿ ಅಲೆ ಇದ್ದಾಗಲೂ ರಾಜ್ಯದಲ್ಲಿ ಬಿಜೆಪಿ ಗಳಿಸಿದ್ದು 105 ಸ್ಥಾನಗಳನ್ನು ಮಾತ್ರ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹೆಸರೇಳಿಯೆ ಬಿಜೆಪಿ 28ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭಾ ಚುನಾವಣೆಗೂ, ವಿಧಾನಸಭಾ ಚುನಾವಣೆಗೂ ವ್ಯತ್ಯಾಸವಿದೆ. ರಾಜ್ಯದ ಸಮಸ್ಯೆಗಳು, ವಿಚಾರಗಳೇ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರುತ್ತವೆ ಎನ್ನುವುದನ್ನು ಇತಿಹಾಸ ತೋರಿಸಿದೆ. ಹಾಗಾಗಿ ಸದ್ಯ ಕೊಂಚ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಮೋದಿ ಮೊರೆ ಹೋಗಿದೆ. ಆದರೆ ವಿಧಾನಸಭೆಯಲ್ಲಿ ಮೋದಿ ಮ್ಯಾಜಿಕ್ ನಡೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....