Homeಮುಖಪುಟಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 02ರ ಶುಕ್ರವಾರದಂದು ಮಂಗಳೂರಿಗೆ ಭೇಟಿ ನೀಡಿದ್ದರು. ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆನಂತರ ದೆಹಲಿಗೆ ತೆರಳುವ ಮುನ್ನ ಹೆಲಿಪ್ಯಾಡ್‌ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಪ್ರತಿ ತಿಂಗಳೂ ಸಹ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶದ ಪ್ರಧಾನಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಬರುವುದೇಕೆ? ಅಂತಹ ಕೆಲಸಗಳೆನಿವೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಮಂಗಳೂರಿನ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾದರೂ ಅದರಲ್ಲಿ ಸಾಕಷ್ಟು ಜೋಶ್ ಇತ್ತು. ಇದೇ ರೀತಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾದೇಶಿಕವಾಗಿ ಆಯಕಟ್ಟಿನ ಜಾಗದಲ್ಲಿ ಆಯೋಜಿಸಿ. ನಾನು ಪ್ರತಿ ತಿಂಗಳೂ ಬರುತ್ತೇನೆ ಎಂದು ಮೋದಿ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. 15 ದಿನದ ಮುಂಚೆಯೇ ಇನ್ಮುಂದೆ ಪ್ರತಿ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬರುತ್ತಾರೆ ಎಂದು ಘೋಷಿಸಲಾಗಿತ್ತು.

ಮೇಲ್ನೋಟಕ್ಕೆ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿಯವರು ಬರುತ್ತಿರುವುದು ನಿಜವಾದರೂ ಇದು ಕರ್ನಾಟಕದಲ್ಲಿ ಚುನಾವಣಾ ವರ್ಷ ಎಂಬುದನ್ನು ಯಾರೂ ಮರೆಯಲಾರರು. ಇಷ್ಟು ವರ್ಷಗಳ ಕಾಲ ಕರ್ನಾಟಕಕ್ಕೆ ಹೆಚ್ಚು ಸಲ ಬಾರದ ಮೋದಿಯವರು ಚುನಾವಣಾ ವರ್ಷದಲ್ಲಿ ಮಾತ್ರ ಪ್ರತಿ ತಿಂಗಳು ಬರುತ್ತೇನೆ ಎಂದಿದ್ದಾರೆ. ಇದೇ ರೀತಿಯಾಗಿ ಹಿಂದೆಯೂ ಸಹ ಚುನಾವಣೆ ಇದ್ದ ಕಡೆಗಳಿಗೆಲ್ಲಾ ಮೋದಿಯವರು ಭೇಟಿ ನೀಡಿ ಸಾವಿರಾರು ಕೋಟಿ ರೂಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದರು. ಅದನ್ನೆ ಕರ್ನಾಟಕದಲ್ಲಿಯೂ ಸಹ ಮುಂದುವರೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕರ್ನಾಟಕದ ಬಿಜೆಪಿ ಪರಿಸ್ಥಿತಿ

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಗುತ್ತಿಗೆದಾರರ ಸಂಘ ಪದೇ ಪದೇ ಈ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಮತೀಯ ಗಲಭೆಗಳು ತಿರುಗುಬಾಣವಾಗಿವೆ. ಹರ್ಷ ಕೊಲೆ ವಿಚಾರ ಮತ್ತು ಪ್ರವೀಣ್ ನೆಟ್ಟಾರು ಕೊಲೆ ವಿಚಾರದಲ್ಲಿ ಅದು ಸಾಬೀತಾಗಿದೆ. ಈ ಸರ್ಕಾರ ಹಿಂದೂಗಳ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂಬ ಭಾವನೆ ಹಿಂದುತ್ವವಾದಿಗಳಲ್ಲಿ ಮೂಡಿದೆ. ಮುಂಚಿತವಾಗಿ ಚುನಾವಣೆ ನಡೆಸಬೇಕೆಂದು ಬಯಸುವ ಬಿಜೆಪಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಆದರೆ ಇವೆಲ್ಲದರ ನಡುವೆ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ತಮ್ಮ 75ನೇ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಅದ್ದೂರಿ ಕಾರ್ಯಕ್ರಮ ಮಾಡಿದ್ದಾರೆ. ಇದು ಸಹ ಬಿಜೆಪಿಯವರನ್ನು ಆತಂಕಕ್ಕೆ ತಳ್ಳಿರುವ ಸಾಧ್ಯತೆಯಿದೆ.

ಸಮರ್ಥ ಸಿಎಂ ಅಭ್ಯರ್ಥಿಯ ಕೊರತೆ

ಯಡಿಯೂರಪ್ಪನವರು ನಡೆಸಿದ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ ನಂತರ ಬೊಮ್ಮಾಯಿಯವರನ್ನು ಸಿಎಂ ಆಗಿ ಹೊಂದಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಲಿಂಗಾಯಿತ ಮುಖಂಡ ಯಡಿಯೂರಪ್ಪನವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ಸೇರಿಸಿಕೊಂಡಿದೆ. ಇಷ್ಟರಿಂದ ಜನ ಬಿಜೆಪಿಗೆ ಮತ ಹಾಕುತ್ತಾರೆಯೇ ಎಂಬ ಅನುಮಾನ ಬಿಜೆಪಿಯಲ್ಲಿದೆ. ಹಾಗಾಗಿ ಅದನ್ನು ಸರಿದೂಗಿಸುವುದು ಮೋದಿಯವರಿಂದ ಮಾತ್ರ ಸಾಧ್ಯ ಎಂಬ ನಿರ್ಧಾರಕ್ಕೆ ಅದು ಬಂದಿದೆ. ಹಾಗಾಗಿಯೇ ಪ್ರತಿ ತಿಂಗಳೂ ಸಹ ಮೋದಿಯವರು ರಾಜ್ಯಕ್ಕೆ ಬರಬೇಕೆಂದು ಬಿಜೆಪಿ ಮುಖಂಡರು ಬಯಸುತ್ತಿದ್ದಾರೆ.

ನಡೆಯಲಿದೆಯೇ ಮೋದಿ ಮ್ಯಾಜಿಕ್?

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಎಷ್ಟೆಲ್ಲ ಮೋದಿ ಅಲೆ ಇದ್ದಾಗಲೂ ರಾಜ್ಯದಲ್ಲಿ ಬಿಜೆಪಿ ಗಳಿಸಿದ್ದು 105 ಸ್ಥಾನಗಳನ್ನು ಮಾತ್ರ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹೆಸರೇಳಿಯೆ ಬಿಜೆಪಿ 28ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭಾ ಚುನಾವಣೆಗೂ, ವಿಧಾನಸಭಾ ಚುನಾವಣೆಗೂ ವ್ಯತ್ಯಾಸವಿದೆ. ರಾಜ್ಯದ ಸಮಸ್ಯೆಗಳು, ವಿಚಾರಗಳೇ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರುತ್ತವೆ ಎನ್ನುವುದನ್ನು ಇತಿಹಾಸ ತೋರಿಸಿದೆ. ಹಾಗಾಗಿ ಸದ್ಯ ಕೊಂಚ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಮೋದಿ ಮೊರೆ ಹೋಗಿದೆ. ಆದರೆ ವಿಧಾನಸಭೆಯಲ್ಲಿ ಮೋದಿ ಮ್ಯಾಜಿಕ್ ನಡೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...