Homeಮುಖಪುಟಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 02ರ ಶುಕ್ರವಾರದಂದು ಮಂಗಳೂರಿಗೆ ಭೇಟಿ ನೀಡಿದ್ದರು. ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆನಂತರ ದೆಹಲಿಗೆ ತೆರಳುವ ಮುನ್ನ ಹೆಲಿಪ್ಯಾಡ್‌ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯೊಂದಿಗೆ ಸಭೆ ನಡೆಸಿ ಇನ್ನು ಮುಂದೆ ಪ್ರತಿ ತಿಂಗಳೂ ಸಹ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೇಶದ ಪ್ರಧಾನಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಬರುವುದೇಕೆ? ಅಂತಹ ಕೆಲಸಗಳೆನಿವೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಮಂಗಳೂರಿನ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾದರೂ ಅದರಲ್ಲಿ ಸಾಕಷ್ಟು ಜೋಶ್ ಇತ್ತು. ಇದೇ ರೀತಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾದೇಶಿಕವಾಗಿ ಆಯಕಟ್ಟಿನ ಜಾಗದಲ್ಲಿ ಆಯೋಜಿಸಿ. ನಾನು ಪ್ರತಿ ತಿಂಗಳೂ ಬರುತ್ತೇನೆ ಎಂದು ಮೋದಿ ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. 15 ದಿನದ ಮುಂಚೆಯೇ ಇನ್ಮುಂದೆ ಪ್ರತಿ ತಿಂಗಳು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬರುತ್ತಾರೆ ಎಂದು ಘೋಷಿಸಲಾಗಿತ್ತು.

ಮೇಲ್ನೋಟಕ್ಕೆ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿಯವರು ಬರುತ್ತಿರುವುದು ನಿಜವಾದರೂ ಇದು ಕರ್ನಾಟಕದಲ್ಲಿ ಚುನಾವಣಾ ವರ್ಷ ಎಂಬುದನ್ನು ಯಾರೂ ಮರೆಯಲಾರರು. ಇಷ್ಟು ವರ್ಷಗಳ ಕಾಲ ಕರ್ನಾಟಕಕ್ಕೆ ಹೆಚ್ಚು ಸಲ ಬಾರದ ಮೋದಿಯವರು ಚುನಾವಣಾ ವರ್ಷದಲ್ಲಿ ಮಾತ್ರ ಪ್ರತಿ ತಿಂಗಳು ಬರುತ್ತೇನೆ ಎಂದಿದ್ದಾರೆ. ಇದೇ ರೀತಿಯಾಗಿ ಹಿಂದೆಯೂ ಸಹ ಚುನಾವಣೆ ಇದ್ದ ಕಡೆಗಳಿಗೆಲ್ಲಾ ಮೋದಿಯವರು ಭೇಟಿ ನೀಡಿ ಸಾವಿರಾರು ಕೋಟಿ ರೂಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದರು. ಅದನ್ನೆ ಕರ್ನಾಟಕದಲ್ಲಿಯೂ ಸಹ ಮುಂದುವರೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕರ್ನಾಟಕದ ಬಿಜೆಪಿ ಪರಿಸ್ಥಿತಿ

ಕರ್ನಾಟಕದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಜೋರಾಗಿ ತಟ್ಟುತ್ತಿದೆ. ಬಿಟ್ ಕಾಯಿನ್ ಹಗರಣ, ಪಿಎಸ್‌ಐ ಸ್ಕ್ಯಾಮ್, 40% ಕಮಿಷನ್ ಭ್ರಷ್ಟಾಚಾರಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಗುತ್ತಿಗೆದಾರರ ಸಂಘ ಪದೇ ಪದೇ ಈ ವಿಷಯಗಳನ್ನು ಮುನ್ನೆಲೆಗೆ ತರುತ್ತಿದೆ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಮತೀಯ ಗಲಭೆಗಳು ತಿರುಗುಬಾಣವಾಗಿವೆ. ಹರ್ಷ ಕೊಲೆ ವಿಚಾರ ಮತ್ತು ಪ್ರವೀಣ್ ನೆಟ್ಟಾರು ಕೊಲೆ ವಿಚಾರದಲ್ಲಿ ಅದು ಸಾಬೀತಾಗಿದೆ. ಈ ಸರ್ಕಾರ ಹಿಂದೂಗಳ ರಕ್ಷಣೆಗೆ ಏನೂ ಮಾಡುತ್ತಿಲ್ಲ ಎಂಬ ಭಾವನೆ ಹಿಂದುತ್ವವಾದಿಗಳಲ್ಲಿ ಮೂಡಿದೆ. ಮುಂಚಿತವಾಗಿ ಚುನಾವಣೆ ನಡೆಸಬೇಕೆಂದು ಬಯಸುವ ಬಿಜೆಪಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಆದರೆ ಇವೆಲ್ಲದರ ನಡುವೆ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ತಮ್ಮ 75ನೇ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಅದ್ದೂರಿ ಕಾರ್ಯಕ್ರಮ ಮಾಡಿದ್ದಾರೆ. ಇದು ಸಹ ಬಿಜೆಪಿಯವರನ್ನು ಆತಂಕಕ್ಕೆ ತಳ್ಳಿರುವ ಸಾಧ್ಯತೆಯಿದೆ.

ಸಮರ್ಥ ಸಿಎಂ ಅಭ್ಯರ್ಥಿಯ ಕೊರತೆ

ಯಡಿಯೂರಪ್ಪನವರು ನಡೆಸಿದ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ ನಂತರ ಬೊಮ್ಮಾಯಿಯವರನ್ನು ಸಿಎಂ ಆಗಿ ಹೊಂದಿದೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಘೋಷಿಸಿದೆ. ಲಿಂಗಾಯಿತ ಮುಖಂಡ ಯಡಿಯೂರಪ್ಪನವರನ್ನು ಬಿಜೆಪಿ ಸಂಸದೀಯ ಮಂಡಳಿಗೆ ಸೇರಿಸಿಕೊಂಡಿದೆ. ಇಷ್ಟರಿಂದ ಜನ ಬಿಜೆಪಿಗೆ ಮತ ಹಾಕುತ್ತಾರೆಯೇ ಎಂಬ ಅನುಮಾನ ಬಿಜೆಪಿಯಲ್ಲಿದೆ. ಹಾಗಾಗಿ ಅದನ್ನು ಸರಿದೂಗಿಸುವುದು ಮೋದಿಯವರಿಂದ ಮಾತ್ರ ಸಾಧ್ಯ ಎಂಬ ನಿರ್ಧಾರಕ್ಕೆ ಅದು ಬಂದಿದೆ. ಹಾಗಾಗಿಯೇ ಪ್ರತಿ ತಿಂಗಳೂ ಸಹ ಮೋದಿಯವರು ರಾಜ್ಯಕ್ಕೆ ಬರಬೇಕೆಂದು ಬಿಜೆಪಿ ಮುಖಂಡರು ಬಯಸುತ್ತಿದ್ದಾರೆ.

ನಡೆಯಲಿದೆಯೇ ಮೋದಿ ಮ್ಯಾಜಿಕ್?

2018ರ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಎಷ್ಟೆಲ್ಲ ಮೋದಿ ಅಲೆ ಇದ್ದಾಗಲೂ ರಾಜ್ಯದಲ್ಲಿ ಬಿಜೆಪಿ ಗಳಿಸಿದ್ದು 105 ಸ್ಥಾನಗಳನ್ನು ಮಾತ್ರ. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹೆಸರೇಳಿಯೆ ಬಿಜೆಪಿ 28ರಲ್ಲಿ 25 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭಾ ಚುನಾವಣೆಗೂ, ವಿಧಾನಸಭಾ ಚುನಾವಣೆಗೂ ವ್ಯತ್ಯಾಸವಿದೆ. ರಾಜ್ಯದ ಸಮಸ್ಯೆಗಳು, ವಿಚಾರಗಳೇ ವಿಧಾನಸಭಾ ಚುನಾವಣೆಯಲ್ಲಿ ಪ್ರಭಾವ ಬೀರುತ್ತವೆ ಎನ್ನುವುದನ್ನು ಇತಿಹಾಸ ತೋರಿಸಿದೆ. ಹಾಗಾಗಿ ಸದ್ಯ ಕೊಂಚ ಹಿನ್ನಡೆ ಅನುಭವಿಸುತ್ತಿರುವ ಬಿಜೆಪಿ ಮೋದಿ ಮೊರೆ ಹೋಗಿದೆ. ಆದರೆ ವಿಧಾನಸಭೆಯಲ್ಲಿ ಮೋದಿ ಮ್ಯಾಜಿಕ್ ನಡೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ; 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...