Homeಮುಖಪುಟಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

ಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಒದಗಿಸುವ ಸಿಐಸಿ ಆದೇಶವನ್ನು ರದ್ದುಗೊಳಿಸುವಂತೆ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಕೇಳಿಕೊಂಡಿದೆ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದೆ.

ವಿಶ್ವವಿದ್ಯಾನಿಲಯದ ಪರವಾಗಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಏಳು ವರ್ಷಗಳ ಹಿಂದಿನ ಆದೇಶವನ್ನು ಅನುಸರಿಸದಿದ್ದಕ್ಕಾಗಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿ ನೀಡಿರುವ ವಿನಾಯಿತಿಗಳನ್ನು ಉಲ್ಲೇಖಿಸಿ, ಬಾಲಿಶವಾದ ಅರ್ಜಿಯನ್ನು ತಳ್ಳಿಹಾಕಲು 2005ರ ಪಾರದರ್ಶಕತೆ ಕಾನೂನನ್ನು ಬಳಸಲಾಗುತ್ತದೆ ಎಂದು ಪ್ರತಿಪಾದಿಸಿದರು.

ಯಾರೋ ಒಬ್ಬರು ಸಾರ್ವಜನಿಕ ಕಚೇರಿಯನ್ನು ಹೊಂದಿದ್ದಾರೆ ಎಂದ ಮಾತ್ರಕ್ಕೆ ಅವರು ಇನ್ನೊಬ್ಬರ ಎಲ್ಲಾ ವೈಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಿಲ್ಲ ಎಂದು ಮೆಹ್ತಾ ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಮೋದಿ ಅವರ ಪದವಿಗಳ ಬಗೆಗಿನ ಮಾಹಿತಿಯು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ಈ ಹಿಂದೆಯೂ ವಿಶ್ವವಿದ್ಯಾಲಯವು ತಮ್ಮ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಹಾಕಿತ್ತು ಎಂದು ಹೇಳಿದರು.

ಆದರೂ ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ಅವರು, ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿಲ್ಲ ಎಂದು ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು, ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ.

ಏಪ್ರಿಲ್ 2016 ರಲ್ಲಿ, ಆಗಿನ ಸಿಐಸಿ ಎಂ ಶ್ರೀಧರ್ ಆಚಾರ್ಯುಲು ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮೋದಿ ಅವರು ಗಳಿಸಿರುವ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಆದರೆ, ಮೂರು ತಿಂಗಳ ನಂತರ, ಗುಜರಾತ್ ಹೈಕೋರ್ಟ್ ಅಹಮದಾಬಾದ್ ಮೂಲದ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಸಿಐಸಿ ಆದೇಶವನ್ನು ತಡೆಹಿಡಿಯಿತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಪಿಎಂ ಮೋದಿ ಪದವಿಗಳ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಏಕೆಂದರೆ ಅದು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ವಿಶ್ವವಿದ್ಯಾಲಯವು ಈ ಹಿಂದೆ ನಿರ್ದಿಷ್ಟ ದಿನಾಂಕದಂದು ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿತ್ತು ಎಂದು ಮೆಹ್ತಾ ಹೇಳಿದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ನೀಡಲಾದ ವಿನಾಯಿತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳ ಕೆಲವು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಮೆಹ್ತಾ, “ನೀವು ಅದರ ಬಗ್ಗೆ ಕುತೂಹಲ ಹೊಂದಿರುವ ಕಾರಣಕ್ಕಾಗಿ” ಒಬ್ಬರ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

“ಆರ್‌ಟಿಐ ಕಾರ್ಯಕರ್ತನಾಗುವುದು ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಸಂಪರ್ಕವಿಲ್ಲದ ಎಷ್ಟೋ ಜನರಿಗೆ ಎಷ್ಟೋ ವಿಷಯಗಳ ಬಗ್ಗೆ ಕುತೂಹಲವಿರುತ್ತದೆ. ಅಪರಿಚಿತರು ಅಂತಹ ಮಾಹಿತಿಯನ್ನು ಹುಡುಕುವಂತಿಲ್ಲ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ, ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸಲು ನಿರಾಕರಿಸಬಹುದು ಏಕೆಂದರೆ “ವಿಶ್ವಾಸಾರ್ಹ ಸಂಬಂಧ”, ಟ್ರಸ್ಟಿ ಮತ್ತು ಫಲಾನುಭವಿ ನಡುವಿನ ನಂಬಿಕೆಯ ಸಂಬಂಧದ ಕಾರಣಕ್ಕಾಗಿ ಎಂದು ಮೆಹ್ತಾ ಹೇಳಿದ್ದಾರೆ

”ದೊಡ್ಡ ಸಾರ್ವಜನಿಕ ಹಿತಾಸಕ್ತಿಯ ವರ್ಗಕ್ಕೆ ಸೇರಿದರೆ ಒಬ್ಬರು ಮಾಹಿತಿಯನ್ನು ಪಡೆಯಬಹುದು. ಆದರೆ, ನನ್ನ ಸಾರ್ವಜನಿಕ ಚಟುವಟಿಕೆಗೆ ಸಂಬಂಧಿಸದ ಖಾಸಗಿ ಮಾಹಿತಿಯನ್ನು ನೀವು ಹುಡುಕುವಂತಿಲ್ಲ. ಸಾರ್ವಜನಿಕರಿಗೆ ಅದರಲ್ಲಿ ಆಸಕ್ತಿ ಇದೆ ಎಂದ ಮಾತ್ರಕ್ಕೆ ಅದು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ನ್ಯಾಯಾಲಯಗಳ ವ್ಯಾಖ್ಯಾನವು ಶೈಕ್ಷಣಿಕ ಅರ್ಹತೆ ವೈಯಕ್ತಿಕ ಮಾಹಿತಿಯಾಗಿದೆ, ಅದು ರಾಜಕಾರಣಿ ಅಥವಾ ಇತರ ಯಾವುದೇ ವ್ಯಕ್ತಿಯಾಗಿರಲಿ” ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಮೆಹ್ತಾಗೆ ಪ್ರತಿಕ್ರಿಯಿಸಿದ ವಕೀಲ ಕವಿನಾ, ಪ್ರಧಾನಿ ಪದವಿಗಳ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕಾರಣಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಜಾಪ್ರತಿನಿಧಿ ಕಾಯ್ದೆ (RPA) ಕಡ್ಡಾಯಗೊಳಿಸಿದೆ ಎಂದು ಕವಿನಾ ವಾದಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಉತ್ತರಾಧಿಕಾರಿ ಬಿಡೆನ್ ಅವರ ನಿವಾಸಗಳನ್ನು ಎಫ್‌ಬಿಐ ಹೇಗೆ ಶೋಧಿಸಿದೆ ಎಂಬುದಕ್ಕೆ ಕವಿನಾ ಉದಾಹರಣೆ ನೀಡಿದರು.

”ಪದವಿಗಳ ಕುರಿತಾದ ಈ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಮತ್ತು ಆಸಕ್ತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿದೆ. ಟ್ರಂಪ್ ಅವರ ಮನೆ ಮತ್ತು ಬಿಡೆನ್ ಅವರ ಮನೆಯನ್ನು FBI ತನಿಖೆ ನಡೆಸುತ್ತದೆ. ನೀವು ಸ್ಥಾನಮಾನದಲ್ಲಿ ದೊಡ್ಡವರಿರಬಹುದು ಆದರೆ, ನೀವು ಕಾನೂನಿಗಿಂತ ಮೇಲಲ್ಲ” ಎಂದು ಕವಿನಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...