Homeಮುಖಪುಟಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

ಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಒದಗಿಸುವ ಸಿಐಸಿ ಆದೇಶವನ್ನು ರದ್ದುಗೊಳಿಸುವಂತೆ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಕೇಳಿಕೊಂಡಿದೆ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದೆ.

ವಿಶ್ವವಿದ್ಯಾನಿಲಯದ ಪರವಾಗಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಏಳು ವರ್ಷಗಳ ಹಿಂದಿನ ಆದೇಶವನ್ನು ಅನುಸರಿಸದಿದ್ದಕ್ಕಾಗಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿ ನೀಡಿರುವ ವಿನಾಯಿತಿಗಳನ್ನು ಉಲ್ಲೇಖಿಸಿ, ಬಾಲಿಶವಾದ ಅರ್ಜಿಯನ್ನು ತಳ್ಳಿಹಾಕಲು 2005ರ ಪಾರದರ್ಶಕತೆ ಕಾನೂನನ್ನು ಬಳಸಲಾಗುತ್ತದೆ ಎಂದು ಪ್ರತಿಪಾದಿಸಿದರು.

ಯಾರೋ ಒಬ್ಬರು ಸಾರ್ವಜನಿಕ ಕಚೇರಿಯನ್ನು ಹೊಂದಿದ್ದಾರೆ ಎಂದ ಮಾತ್ರಕ್ಕೆ ಅವರು ಇನ್ನೊಬ್ಬರ ಎಲ್ಲಾ ವೈಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಿಲ್ಲ ಎಂದು ಮೆಹ್ತಾ ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಮೋದಿ ಅವರ ಪದವಿಗಳ ಬಗೆಗಿನ ಮಾಹಿತಿಯು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ಈ ಹಿಂದೆಯೂ ವಿಶ್ವವಿದ್ಯಾಲಯವು ತಮ್ಮ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಹಾಕಿತ್ತು ಎಂದು ಹೇಳಿದರು.

ಆದರೂ ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ಅವರು, ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿಲ್ಲ ಎಂದು ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು, ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ.

ಏಪ್ರಿಲ್ 2016 ರಲ್ಲಿ, ಆಗಿನ ಸಿಐಸಿ ಎಂ ಶ್ರೀಧರ್ ಆಚಾರ್ಯುಲು ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮೋದಿ ಅವರು ಗಳಿಸಿರುವ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಆದರೆ, ಮೂರು ತಿಂಗಳ ನಂತರ, ಗುಜರಾತ್ ಹೈಕೋರ್ಟ್ ಅಹಮದಾಬಾದ್ ಮೂಲದ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಸಿಐಸಿ ಆದೇಶವನ್ನು ತಡೆಹಿಡಿಯಿತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಪಿಎಂ ಮೋದಿ ಪದವಿಗಳ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಏಕೆಂದರೆ ಅದು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ವಿಶ್ವವಿದ್ಯಾಲಯವು ಈ ಹಿಂದೆ ನಿರ್ದಿಷ್ಟ ದಿನಾಂಕದಂದು ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿತ್ತು ಎಂದು ಮೆಹ್ತಾ ಹೇಳಿದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ನೀಡಲಾದ ವಿನಾಯಿತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳ ಕೆಲವು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಮೆಹ್ತಾ, “ನೀವು ಅದರ ಬಗ್ಗೆ ಕುತೂಹಲ ಹೊಂದಿರುವ ಕಾರಣಕ್ಕಾಗಿ” ಒಬ್ಬರ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

“ಆರ್‌ಟಿಐ ಕಾರ್ಯಕರ್ತನಾಗುವುದು ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಸಂಪರ್ಕವಿಲ್ಲದ ಎಷ್ಟೋ ಜನರಿಗೆ ಎಷ್ಟೋ ವಿಷಯಗಳ ಬಗ್ಗೆ ಕುತೂಹಲವಿರುತ್ತದೆ. ಅಪರಿಚಿತರು ಅಂತಹ ಮಾಹಿತಿಯನ್ನು ಹುಡುಕುವಂತಿಲ್ಲ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ, ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸಲು ನಿರಾಕರಿಸಬಹುದು ಏಕೆಂದರೆ “ವಿಶ್ವಾಸಾರ್ಹ ಸಂಬಂಧ”, ಟ್ರಸ್ಟಿ ಮತ್ತು ಫಲಾನುಭವಿ ನಡುವಿನ ನಂಬಿಕೆಯ ಸಂಬಂಧದ ಕಾರಣಕ್ಕಾಗಿ ಎಂದು ಮೆಹ್ತಾ ಹೇಳಿದ್ದಾರೆ

”ದೊಡ್ಡ ಸಾರ್ವಜನಿಕ ಹಿತಾಸಕ್ತಿಯ ವರ್ಗಕ್ಕೆ ಸೇರಿದರೆ ಒಬ್ಬರು ಮಾಹಿತಿಯನ್ನು ಪಡೆಯಬಹುದು. ಆದರೆ, ನನ್ನ ಸಾರ್ವಜನಿಕ ಚಟುವಟಿಕೆಗೆ ಸಂಬಂಧಿಸದ ಖಾಸಗಿ ಮಾಹಿತಿಯನ್ನು ನೀವು ಹುಡುಕುವಂತಿಲ್ಲ. ಸಾರ್ವಜನಿಕರಿಗೆ ಅದರಲ್ಲಿ ಆಸಕ್ತಿ ಇದೆ ಎಂದ ಮಾತ್ರಕ್ಕೆ ಅದು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ನ್ಯಾಯಾಲಯಗಳ ವ್ಯಾಖ್ಯಾನವು ಶೈಕ್ಷಣಿಕ ಅರ್ಹತೆ ವೈಯಕ್ತಿಕ ಮಾಹಿತಿಯಾಗಿದೆ, ಅದು ರಾಜಕಾರಣಿ ಅಥವಾ ಇತರ ಯಾವುದೇ ವ್ಯಕ್ತಿಯಾಗಿರಲಿ” ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಮೆಹ್ತಾಗೆ ಪ್ರತಿಕ್ರಿಯಿಸಿದ ವಕೀಲ ಕವಿನಾ, ಪ್ರಧಾನಿ ಪದವಿಗಳ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕಾರಣಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಜಾಪ್ರತಿನಿಧಿ ಕಾಯ್ದೆ (RPA) ಕಡ್ಡಾಯಗೊಳಿಸಿದೆ ಎಂದು ಕವಿನಾ ವಾದಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಉತ್ತರಾಧಿಕಾರಿ ಬಿಡೆನ್ ಅವರ ನಿವಾಸಗಳನ್ನು ಎಫ್‌ಬಿಐ ಹೇಗೆ ಶೋಧಿಸಿದೆ ಎಂಬುದಕ್ಕೆ ಕವಿನಾ ಉದಾಹರಣೆ ನೀಡಿದರು.

”ಪದವಿಗಳ ಕುರಿತಾದ ಈ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಮತ್ತು ಆಸಕ್ತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿದೆ. ಟ್ರಂಪ್ ಅವರ ಮನೆ ಮತ್ತು ಬಿಡೆನ್ ಅವರ ಮನೆಯನ್ನು FBI ತನಿಖೆ ನಡೆಸುತ್ತದೆ. ನೀವು ಸ್ಥಾನಮಾನದಲ್ಲಿ ದೊಡ್ಡವರಿರಬಹುದು ಆದರೆ, ನೀವು ಕಾನೂನಿಗಿಂತ ಮೇಲಲ್ಲ” ಎಂದು ಕವಿನಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...