Homeಮುಖಪುಟಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

ಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಒದಗಿಸುವ ಸಿಐಸಿ ಆದೇಶವನ್ನು ರದ್ದುಗೊಳಿಸುವಂತೆ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಕೇಳಿಕೊಂಡಿದೆ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದೆ.

ವಿಶ್ವವಿದ್ಯಾನಿಲಯದ ಪರವಾಗಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಏಳು ವರ್ಷಗಳ ಹಿಂದಿನ ಆದೇಶವನ್ನು ಅನುಸರಿಸದಿದ್ದಕ್ಕಾಗಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿ ನೀಡಿರುವ ವಿನಾಯಿತಿಗಳನ್ನು ಉಲ್ಲೇಖಿಸಿ, ಬಾಲಿಶವಾದ ಅರ್ಜಿಯನ್ನು ತಳ್ಳಿಹಾಕಲು 2005ರ ಪಾರದರ್ಶಕತೆ ಕಾನೂನನ್ನು ಬಳಸಲಾಗುತ್ತದೆ ಎಂದು ಪ್ರತಿಪಾದಿಸಿದರು.

ಯಾರೋ ಒಬ್ಬರು ಸಾರ್ವಜನಿಕ ಕಚೇರಿಯನ್ನು ಹೊಂದಿದ್ದಾರೆ ಎಂದ ಮಾತ್ರಕ್ಕೆ ಅವರು ಇನ್ನೊಬ್ಬರ ಎಲ್ಲಾ ವೈಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಿಲ್ಲ ಎಂದು ಮೆಹ್ತಾ ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಮೋದಿ ಅವರ ಪದವಿಗಳ ಬಗೆಗಿನ ಮಾಹಿತಿಯು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ಈ ಹಿಂದೆಯೂ ವಿಶ್ವವಿದ್ಯಾಲಯವು ತಮ್ಮ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಹಾಕಿತ್ತು ಎಂದು ಹೇಳಿದರು.

ಆದರೂ ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ಅವರು, ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿಲ್ಲ ಎಂದು ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು, ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ.

ಏಪ್ರಿಲ್ 2016 ರಲ್ಲಿ, ಆಗಿನ ಸಿಐಸಿ ಎಂ ಶ್ರೀಧರ್ ಆಚಾರ್ಯುಲು ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮೋದಿ ಅವರು ಗಳಿಸಿರುವ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಆದರೆ, ಮೂರು ತಿಂಗಳ ನಂತರ, ಗುಜರಾತ್ ಹೈಕೋರ್ಟ್ ಅಹಮದಾಬಾದ್ ಮೂಲದ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಸಿಐಸಿ ಆದೇಶವನ್ನು ತಡೆಹಿಡಿಯಿತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಪಿಎಂ ಮೋದಿ ಪದವಿಗಳ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಏಕೆಂದರೆ ಅದು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ವಿಶ್ವವಿದ್ಯಾಲಯವು ಈ ಹಿಂದೆ ನಿರ್ದಿಷ್ಟ ದಿನಾಂಕದಂದು ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿತ್ತು ಎಂದು ಮೆಹ್ತಾ ಹೇಳಿದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ನೀಡಲಾದ ವಿನಾಯಿತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳ ಕೆಲವು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಮೆಹ್ತಾ, “ನೀವು ಅದರ ಬಗ್ಗೆ ಕುತೂಹಲ ಹೊಂದಿರುವ ಕಾರಣಕ್ಕಾಗಿ” ಒಬ್ಬರ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

“ಆರ್‌ಟಿಐ ಕಾರ್ಯಕರ್ತನಾಗುವುದು ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಸಂಪರ್ಕವಿಲ್ಲದ ಎಷ್ಟೋ ಜನರಿಗೆ ಎಷ್ಟೋ ವಿಷಯಗಳ ಬಗ್ಗೆ ಕುತೂಹಲವಿರುತ್ತದೆ. ಅಪರಿಚಿತರು ಅಂತಹ ಮಾಹಿತಿಯನ್ನು ಹುಡುಕುವಂತಿಲ್ಲ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ, ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸಲು ನಿರಾಕರಿಸಬಹುದು ಏಕೆಂದರೆ “ವಿಶ್ವಾಸಾರ್ಹ ಸಂಬಂಧ”, ಟ್ರಸ್ಟಿ ಮತ್ತು ಫಲಾನುಭವಿ ನಡುವಿನ ನಂಬಿಕೆಯ ಸಂಬಂಧದ ಕಾರಣಕ್ಕಾಗಿ ಎಂದು ಮೆಹ್ತಾ ಹೇಳಿದ್ದಾರೆ

”ದೊಡ್ಡ ಸಾರ್ವಜನಿಕ ಹಿತಾಸಕ್ತಿಯ ವರ್ಗಕ್ಕೆ ಸೇರಿದರೆ ಒಬ್ಬರು ಮಾಹಿತಿಯನ್ನು ಪಡೆಯಬಹುದು. ಆದರೆ, ನನ್ನ ಸಾರ್ವಜನಿಕ ಚಟುವಟಿಕೆಗೆ ಸಂಬಂಧಿಸದ ಖಾಸಗಿ ಮಾಹಿತಿಯನ್ನು ನೀವು ಹುಡುಕುವಂತಿಲ್ಲ. ಸಾರ್ವಜನಿಕರಿಗೆ ಅದರಲ್ಲಿ ಆಸಕ್ತಿ ಇದೆ ಎಂದ ಮಾತ್ರಕ್ಕೆ ಅದು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ನ್ಯಾಯಾಲಯಗಳ ವ್ಯಾಖ್ಯಾನವು ಶೈಕ್ಷಣಿಕ ಅರ್ಹತೆ ವೈಯಕ್ತಿಕ ಮಾಹಿತಿಯಾಗಿದೆ, ಅದು ರಾಜಕಾರಣಿ ಅಥವಾ ಇತರ ಯಾವುದೇ ವ್ಯಕ್ತಿಯಾಗಿರಲಿ” ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಮೆಹ್ತಾಗೆ ಪ್ರತಿಕ್ರಿಯಿಸಿದ ವಕೀಲ ಕವಿನಾ, ಪ್ರಧಾನಿ ಪದವಿಗಳ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕಾರಣಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಜಾಪ್ರತಿನಿಧಿ ಕಾಯ್ದೆ (RPA) ಕಡ್ಡಾಯಗೊಳಿಸಿದೆ ಎಂದು ಕವಿನಾ ವಾದಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಉತ್ತರಾಧಿಕಾರಿ ಬಿಡೆನ್ ಅವರ ನಿವಾಸಗಳನ್ನು ಎಫ್‌ಬಿಐ ಹೇಗೆ ಶೋಧಿಸಿದೆ ಎಂಬುದಕ್ಕೆ ಕವಿನಾ ಉದಾಹರಣೆ ನೀಡಿದರು.

”ಪದವಿಗಳ ಕುರಿತಾದ ಈ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಮತ್ತು ಆಸಕ್ತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿದೆ. ಟ್ರಂಪ್ ಅವರ ಮನೆ ಮತ್ತು ಬಿಡೆನ್ ಅವರ ಮನೆಯನ್ನು FBI ತನಿಖೆ ನಡೆಸುತ್ತದೆ. ನೀವು ಸ್ಥಾನಮಾನದಲ್ಲಿ ದೊಡ್ಡವರಿರಬಹುದು ಆದರೆ, ನೀವು ಕಾನೂನಿಗಿಂತ ಮೇಲಲ್ಲ” ಎಂದು ಕವಿನಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...