Homeಮುಖಪುಟಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

ಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಒದಗಿಸುವ ಸಿಐಸಿ ಆದೇಶವನ್ನು ರದ್ದುಗೊಳಿಸುವಂತೆ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಕೇಳಿಕೊಂಡಿದೆ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದೆ.

ವಿಶ್ವವಿದ್ಯಾನಿಲಯದ ಪರವಾಗಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಏಳು ವರ್ಷಗಳ ಹಿಂದಿನ ಆದೇಶವನ್ನು ಅನುಸರಿಸದಿದ್ದಕ್ಕಾಗಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿ ನೀಡಿರುವ ವಿನಾಯಿತಿಗಳನ್ನು ಉಲ್ಲೇಖಿಸಿ, ಬಾಲಿಶವಾದ ಅರ್ಜಿಯನ್ನು ತಳ್ಳಿಹಾಕಲು 2005ರ ಪಾರದರ್ಶಕತೆ ಕಾನೂನನ್ನು ಬಳಸಲಾಗುತ್ತದೆ ಎಂದು ಪ್ರತಿಪಾದಿಸಿದರು.

ಯಾರೋ ಒಬ್ಬರು ಸಾರ್ವಜನಿಕ ಕಚೇರಿಯನ್ನು ಹೊಂದಿದ್ದಾರೆ ಎಂದ ಮಾತ್ರಕ್ಕೆ ಅವರು ಇನ್ನೊಬ್ಬರ ಎಲ್ಲಾ ವೈಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಿಲ್ಲ ಎಂದು ಮೆಹ್ತಾ ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಮೋದಿ ಅವರ ಪದವಿಗಳ ಬಗೆಗಿನ ಮಾಹಿತಿಯು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ಈ ಹಿಂದೆಯೂ ವಿಶ್ವವಿದ್ಯಾಲಯವು ತಮ್ಮ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಹಾಕಿತ್ತು ಎಂದು ಹೇಳಿದರು.

ಆದರೂ ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ಅವರು, ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿಲ್ಲ ಎಂದು ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು, ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ.

ಏಪ್ರಿಲ್ 2016 ರಲ್ಲಿ, ಆಗಿನ ಸಿಐಸಿ ಎಂ ಶ್ರೀಧರ್ ಆಚಾರ್ಯುಲು ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮೋದಿ ಅವರು ಗಳಿಸಿರುವ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಆದರೆ, ಮೂರು ತಿಂಗಳ ನಂತರ, ಗುಜರಾತ್ ಹೈಕೋರ್ಟ್ ಅಹಮದಾಬಾದ್ ಮೂಲದ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಸಿಐಸಿ ಆದೇಶವನ್ನು ತಡೆಹಿಡಿಯಿತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಪಿಎಂ ಮೋದಿ ಪದವಿಗಳ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಏಕೆಂದರೆ ಅದು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ವಿಶ್ವವಿದ್ಯಾಲಯವು ಈ ಹಿಂದೆ ನಿರ್ದಿಷ್ಟ ದಿನಾಂಕದಂದು ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿತ್ತು ಎಂದು ಮೆಹ್ತಾ ಹೇಳಿದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ನೀಡಲಾದ ವಿನಾಯಿತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳ ಕೆಲವು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಮೆಹ್ತಾ, “ನೀವು ಅದರ ಬಗ್ಗೆ ಕುತೂಹಲ ಹೊಂದಿರುವ ಕಾರಣಕ್ಕಾಗಿ” ಒಬ್ಬರ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

“ಆರ್‌ಟಿಐ ಕಾರ್ಯಕರ್ತನಾಗುವುದು ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಸಂಪರ್ಕವಿಲ್ಲದ ಎಷ್ಟೋ ಜನರಿಗೆ ಎಷ್ಟೋ ವಿಷಯಗಳ ಬಗ್ಗೆ ಕುತೂಹಲವಿರುತ್ತದೆ. ಅಪರಿಚಿತರು ಅಂತಹ ಮಾಹಿತಿಯನ್ನು ಹುಡುಕುವಂತಿಲ್ಲ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ, ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸಲು ನಿರಾಕರಿಸಬಹುದು ಏಕೆಂದರೆ “ವಿಶ್ವಾಸಾರ್ಹ ಸಂಬಂಧ”, ಟ್ರಸ್ಟಿ ಮತ್ತು ಫಲಾನುಭವಿ ನಡುವಿನ ನಂಬಿಕೆಯ ಸಂಬಂಧದ ಕಾರಣಕ್ಕಾಗಿ ಎಂದು ಮೆಹ್ತಾ ಹೇಳಿದ್ದಾರೆ

”ದೊಡ್ಡ ಸಾರ್ವಜನಿಕ ಹಿತಾಸಕ್ತಿಯ ವರ್ಗಕ್ಕೆ ಸೇರಿದರೆ ಒಬ್ಬರು ಮಾಹಿತಿಯನ್ನು ಪಡೆಯಬಹುದು. ಆದರೆ, ನನ್ನ ಸಾರ್ವಜನಿಕ ಚಟುವಟಿಕೆಗೆ ಸಂಬಂಧಿಸದ ಖಾಸಗಿ ಮಾಹಿತಿಯನ್ನು ನೀವು ಹುಡುಕುವಂತಿಲ್ಲ. ಸಾರ್ವಜನಿಕರಿಗೆ ಅದರಲ್ಲಿ ಆಸಕ್ತಿ ಇದೆ ಎಂದ ಮಾತ್ರಕ್ಕೆ ಅದು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ನ್ಯಾಯಾಲಯಗಳ ವ್ಯಾಖ್ಯಾನವು ಶೈಕ್ಷಣಿಕ ಅರ್ಹತೆ ವೈಯಕ್ತಿಕ ಮಾಹಿತಿಯಾಗಿದೆ, ಅದು ರಾಜಕಾರಣಿ ಅಥವಾ ಇತರ ಯಾವುದೇ ವ್ಯಕ್ತಿಯಾಗಿರಲಿ” ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಮೆಹ್ತಾಗೆ ಪ್ರತಿಕ್ರಿಯಿಸಿದ ವಕೀಲ ಕವಿನಾ, ಪ್ರಧಾನಿ ಪದವಿಗಳ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕಾರಣಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಜಾಪ್ರತಿನಿಧಿ ಕಾಯ್ದೆ (RPA) ಕಡ್ಡಾಯಗೊಳಿಸಿದೆ ಎಂದು ಕವಿನಾ ವಾದಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಉತ್ತರಾಧಿಕಾರಿ ಬಿಡೆನ್ ಅವರ ನಿವಾಸಗಳನ್ನು ಎಫ್‌ಬಿಐ ಹೇಗೆ ಶೋಧಿಸಿದೆ ಎಂಬುದಕ್ಕೆ ಕವಿನಾ ಉದಾಹರಣೆ ನೀಡಿದರು.

”ಪದವಿಗಳ ಕುರಿತಾದ ಈ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಮತ್ತು ಆಸಕ್ತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿದೆ. ಟ್ರಂಪ್ ಅವರ ಮನೆ ಮತ್ತು ಬಿಡೆನ್ ಅವರ ಮನೆಯನ್ನು FBI ತನಿಖೆ ನಡೆಸುತ್ತದೆ. ನೀವು ಸ್ಥಾನಮಾನದಲ್ಲಿ ದೊಡ್ಡವರಿರಬಹುದು ಆದರೆ, ನೀವು ಕಾನೂನಿಗಿಂತ ಮೇಲಲ್ಲ” ಎಂದು ಕವಿನಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...