Homeಮುಖಪುಟಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

- Advertisement -
- Advertisement -

ಜನವರಿ 5, 2022ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಫಿರೋಝ್‌ಪುರ ಜಿಲ್ಲೆಯ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಯೂನಿಯನ್‌ನ 25 ಸದಸ್ಯರ (ರೈತರ) ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ.

ಫಿರೋಝ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ, ಪಿಯರೇನಾ ಫ್ಲೈಓವರ್‌ನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರಣ ಕೆಲ ಹೊತ್ತು ರಸ್ತೆಯಲ್ಲೇ ಬಾಕಿ ಆಗಿದ್ದರು. ಬಳಿಕ ಅವರು ಹಿಂದಿರುಗಿದ್ದರು.

ಈ ಘಟನೆ ಸಂಬಂಧ ಜನವರಿ 6, 2022ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ದಾರಿಯಲ್ಲಿ ಅಡಚಣೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ.

ನಂತರ ದುರ್ಬಲ ಎಫ್‌ಐಆರ್ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ, ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಆ ತಂಡದ ತನಿಖೆಯ ಆಧಾರದ ಮೇಲೆ, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ), 341 (ಸಂಯಮ ಮೀರಿ ವರ್ತಿಸುವುದು), 186 (ಕರ್ತವ್ಯಕ್ಕೆ ಅಡ್ಡಿ), 149 (ಅಕ್ರಮ ಸಭೆ) ಮತ್ತು ರಾಷ್ಟ್ರೀಯ ಹೆದ್ದಾರಿ ಕಾಯ್ದೆಯ 8-ಬಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಹೆಚ್ಚುವರಿ ಆರೋಪಗಳನ್ನು ಹೊರಿಸಲಾಗಿದೆ.

ಭಾರತಿ ಕಿಸಾನ್ ಯೂನಿಯನ್ (ಬಿಕೆಯು) ಕ್ರಾಂತಿಕಾರಿಯ ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಒಕ್ಕೂಟದ ಇತರ ಸದಸ್ಯರು ಮತ್ತು ನಾಯಕರು ಸೇರಿದಂತೆ 26 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬರಾದ ಮೇಜರ್ ಸಿಂಗ್ ನಿಧನರಾಗಿದ್ದು, 25 ವ್ಯಕ್ತಿಗಳು ಬಂಧನದ ಭೀತಿಯಲ್ಲಿದ್ದಾರೆ.

ಜನವರಿ 3,2025ರಂದು ಫಿರೋಝ್‌ಪುರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್‌ಗಳ ಪ್ರಕಾರ, ಆರೋಪಿಗಳು ಅನೇಕ ಸಮನ್ಸ್ ಮತ್ತು ವಾರೆಂಟ್‌ಗಳನ್ನು ನೀಡಿದ್ದರೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ಜನವರಿ 22ರೊಳಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕುಲ್‌ಗಢಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿಗೆ ಸೂಚಿಸಲಾಗಿದೆ.

ಫಿರೋಝ್‌ಪುರ ಪೊಲೀಸರು ಬಂಧನ ವಾರೆಂಟ್‌ ಹೊರಡಿಸಿರುವುದನ್ನು ದೃಢಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿಗಳಲ್ಲಿ ಒಬ್ಬರಾದ ಪಿಯರೇನಾದ ಕಮಲ್‌ಜೀತ್ ಸಿಂಗ್ (37) ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜನವರಿ 14 ರಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ವರೀಂದರ್ ಅಗರ್ವಾಲ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪಂಜಾಬ್ ಪೊಲೀಸರು ಆರೋಪಿಗಳಿಗೆ ಬಂಧನ ವಾರೆಂಟ್‌ಗಳನ್ನು ಕಳುಹಿಸುತ್ತಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ, ತನಿಖೆಗೆ ಸಹಕರಿಸಲು ಕುಟುಂಬ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಇದನ್ನು ಮಾಡಲಾಗುತ್ತಿದೆ” ಎಂದು ಬಿಕೆಯು ಕ್ರಾಂತಿಕಾರಿಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫುಲ್ ಆರೋಪಿಸಿದ್ದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರೈತರನ್ನು ಗುರಿಯಾಗಿಸಬೇಡಿ ಎಂದು ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಮೇಲ್ಸೇತುವೆಯಲ್ಲಿ (ಪಿಯರೇನಾ ಫ್ಲೈಓವರ್‌) ಯಾವುದೇ ಘರ್ಷಣೆ ನಡೆದಿಲ್ಲವಾದ್ದರಿಂದ ಕೊಲೆ ಯತ್ನದ ಆರೋಪಗಳು ಆಧಾರರಹಿತವಾಗಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ನಾವು ಪ್ರಧಾನಿಯವರ ಭೇಟಿಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೆವು. ಎಫ್‌ಐಆರ್ ಮತ್ತು ನಂತರದ ಕ್ರಮವು ರೈತ ಒಕ್ಕೂಟದ ನಾಯಕರನ್ನು ಬೆದರಿಸಲು ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿದೆ” ಎಂದು ಸುರ್ಜೀತ್ ಸಿಂಗ್ ಕಿಡಿಕಾರಿದ್ದಾರೆ.

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...