Homeಮುಖಪುಟಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

- Advertisement -
- Advertisement -

ಜನವರಿ 5, 2022ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಫಿರೋಝ್‌ಪುರ ಜಿಲ್ಲೆಯ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಯೂನಿಯನ್‌ನ 25 ಸದಸ್ಯರ (ರೈತರ) ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ.

ಫಿರೋಝ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ, ಪಿಯರೇನಾ ಫ್ಲೈಓವರ್‌ನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರಣ ಕೆಲ ಹೊತ್ತು ರಸ್ತೆಯಲ್ಲೇ ಬಾಕಿ ಆಗಿದ್ದರು. ಬಳಿಕ ಅವರು ಹಿಂದಿರುಗಿದ್ದರು.

ಈ ಘಟನೆ ಸಂಬಂಧ ಜನವರಿ 6, 2022ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ದಾರಿಯಲ್ಲಿ ಅಡಚಣೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ.

ನಂತರ ದುರ್ಬಲ ಎಫ್‌ಐಆರ್ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ, ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಆ ತಂಡದ ತನಿಖೆಯ ಆಧಾರದ ಮೇಲೆ, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ), 341 (ಸಂಯಮ ಮೀರಿ ವರ್ತಿಸುವುದು), 186 (ಕರ್ತವ್ಯಕ್ಕೆ ಅಡ್ಡಿ), 149 (ಅಕ್ರಮ ಸಭೆ) ಮತ್ತು ರಾಷ್ಟ್ರೀಯ ಹೆದ್ದಾರಿ ಕಾಯ್ದೆಯ 8-ಬಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಹೆಚ್ಚುವರಿ ಆರೋಪಗಳನ್ನು ಹೊರಿಸಲಾಗಿದೆ.

ಭಾರತಿ ಕಿಸಾನ್ ಯೂನಿಯನ್ (ಬಿಕೆಯು) ಕ್ರಾಂತಿಕಾರಿಯ ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಒಕ್ಕೂಟದ ಇತರ ಸದಸ್ಯರು ಮತ್ತು ನಾಯಕರು ಸೇರಿದಂತೆ 26 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬರಾದ ಮೇಜರ್ ಸಿಂಗ್ ನಿಧನರಾಗಿದ್ದು, 25 ವ್ಯಕ್ತಿಗಳು ಬಂಧನದ ಭೀತಿಯಲ್ಲಿದ್ದಾರೆ.

ಜನವರಿ 3,2025ರಂದು ಫಿರೋಝ್‌ಪುರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್‌ಗಳ ಪ್ರಕಾರ, ಆರೋಪಿಗಳು ಅನೇಕ ಸಮನ್ಸ್ ಮತ್ತು ವಾರೆಂಟ್‌ಗಳನ್ನು ನೀಡಿದ್ದರೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ಜನವರಿ 22ರೊಳಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕುಲ್‌ಗಢಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿಗೆ ಸೂಚಿಸಲಾಗಿದೆ.

ಫಿರೋಝ್‌ಪುರ ಪೊಲೀಸರು ಬಂಧನ ವಾರೆಂಟ್‌ ಹೊರಡಿಸಿರುವುದನ್ನು ದೃಢಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿಗಳಲ್ಲಿ ಒಬ್ಬರಾದ ಪಿಯರೇನಾದ ಕಮಲ್‌ಜೀತ್ ಸಿಂಗ್ (37) ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜನವರಿ 14 ರಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ವರೀಂದರ್ ಅಗರ್ವಾಲ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪಂಜಾಬ್ ಪೊಲೀಸರು ಆರೋಪಿಗಳಿಗೆ ಬಂಧನ ವಾರೆಂಟ್‌ಗಳನ್ನು ಕಳುಹಿಸುತ್ತಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ, ತನಿಖೆಗೆ ಸಹಕರಿಸಲು ಕುಟುಂಬ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಇದನ್ನು ಮಾಡಲಾಗುತ್ತಿದೆ” ಎಂದು ಬಿಕೆಯು ಕ್ರಾಂತಿಕಾರಿಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫುಲ್ ಆರೋಪಿಸಿದ್ದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರೈತರನ್ನು ಗುರಿಯಾಗಿಸಬೇಡಿ ಎಂದು ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಮೇಲ್ಸೇತುವೆಯಲ್ಲಿ (ಪಿಯರೇನಾ ಫ್ಲೈಓವರ್‌) ಯಾವುದೇ ಘರ್ಷಣೆ ನಡೆದಿಲ್ಲವಾದ್ದರಿಂದ ಕೊಲೆ ಯತ್ನದ ಆರೋಪಗಳು ಆಧಾರರಹಿತವಾಗಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ನಾವು ಪ್ರಧಾನಿಯವರ ಭೇಟಿಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೆವು. ಎಫ್‌ಐಆರ್ ಮತ್ತು ನಂತರದ ಕ್ರಮವು ರೈತ ಒಕ್ಕೂಟದ ನಾಯಕರನ್ನು ಬೆದರಿಸಲು ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿದೆ” ಎಂದು ಸುರ್ಜೀತ್ ಸಿಂಗ್ ಕಿಡಿಕಾರಿದ್ದಾರೆ.

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...