Homeಮುಖಪುಟಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

- Advertisement -
- Advertisement -

”ಪ್ಯಾಲೆಸ್ತೀನ್‌ ವಿಷಯ ಕೇವಲ ಮುಸಲ್ಮಾನರಿಗೆ ಸಂಬಂಧಿಸಿದ್ದಲ್ಲ, ಇದು ಮಾನವೀಯತೆಯ ವಿಷಯ ಹಾಗೂ ನ್ಯಾಯವನ್ನು ಬಯಸುವ ಎಲ್ಲರಿಗೂ ಇದು ಸಂಬಂಧಿಸಿದ್ದಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ನಿಲ್ಲಬೇಕು” ಎಂದು ಇಸ್ರೇಲ್-ಹಮಾಸ್ ಉಗ್ರರ ಸಂಘರ್ಷದ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಾತನಾಡಿದ್ದಾರೆ.

ಈ ಬಗ್ಗೆ ಹೈದರಾಬಾದ್ ಸಂಸದ ಒವೈಸಿ ಮಾತನಾಡಿದ್ದು, ”ಕಳೆದ ಆರು ದಿನಗಳಲ್ಲಿ ಇಸ್ರೇಲ್ ಸರ್ಕಾರವು ಗಾಜಾ ಮೇಲೆ 6,000 ಬಾಂಬ್​ಗಳ ಮೂಲಕ ಬಾಂಬ್ ದಾಳಿ ನಡೆಸಿದೆ ಮತ್ತು ಇದರಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 1,500 ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ಜನ ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಹೇಳಿದರು.
”ಗಾಜಾದಲ್ಲಿ ನಡೆಯುತ್ತಿರುವುದು ಜನಾಂಗೀಯ ಹತ್ಯಾಕಾಂಡವಾಗಿದೆ. ಇಸ್ರೇಲ್ ಮಾಡುತ್ತಿರುವ ಯುದ್ಧಾಪರಾಧಗಳನ್ನು ಭಾರತ ಸರ್ಕಾರ ಮತ್ತು ಇಡೀ ದೇಶ ಖಂಡಿಸಬೇಕು ಎಂದು ಅವರು ಒತ್ತಾಯಿಸಿದರು.
”ನಾನು ಪ್ಯಾಲೆಸ್ತೀನ್‌ ಪರವಾಗಿದ್ದೇನೆ. 21 ಲಕ್ಷ ಜನಸಂಖ್ಯೆ ಹೊಂದಿರುವ ಗಾಜಾದ 10 ಲಕ್ಷ ಬಡವರು ನಿರಾಶ್ರಿತರಾಗಿದ್ದಾರೆ. ಗಾಜಾದ ಎಲ್ಲರನ್ನೂ ಮುಗಿಸಬೇಕೆಂದು ಇಸ್ರೇಲ್ ಸರ್ಕಾರ ಬಯಸಿದೆ ಮತ್ತು ಮಾನವ ಹಕ್ಕುಗಳ ಬಗ್ಗೆ ಮಾತನಾಡುವ ಜಗತ್ತು ಇಂದು ಮೌನವಾಗಿದೆ” ಎಂದು ಆರೋಪಿಸಿದರು.
”ಕಳೆದ 70 ವರ್ಷಗಳಿಂದ ಇಸ್ರೇಲ್ ಆಕ್ರಮಣಕಾರಿ ಪ್ರದೇಶವಾಗಿದೆ ಮತ್ತು ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶವಾಗಿದೆ. ಯಾರೇ ಹಿಂಸಾಚಾರ ನಡೆಸಿದರೂ ಅದನ್ನು ನಾವು ಖಂಡಿಸುತ್ತೇವೆ. ಇದು ಪ್ಯಾಲೆಸ್ತೀನ್‌ ಜನರ ಜನಾಂಗೀಯ ಶುದ್ಧೀಕರಣವಾಗಿದೆ. ಗಾಜಾ ಜನರ ಮೇಲೆ ಕ್ರೌರ್ಯ ನಡೆಯುತ್ತಿದೆ. ಅಮೆರಿಕ, ಬ್ರಿಟನ್, ಯುರೋಪ್ ಇಂದು ಮೂಕ ಪ್ರೇಕ್ಷಕರಾಗಿವೆ” ಎಂದು ಒವೈಸಿ ಹೇಳಿದರು.

”ಗಾಜಾದಲ್ಲಿ ಪ್ಯಾಲೆಸ್ತೀನ್‌ ಜನರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಿ ಮೋದಿ ಜಿ, ಪ್ಯಾಲೆಸ್ತೀನ್‌ ಜನರೊಂದಿಗೆ ಒಗ್ಗಟ್ಟನ್ನು ತೋರಿಸಿ ಎಂದು ನಾವು ನಮ್ಮ ಪ್ರಧಾನಿಗೆ ಹೇಳಲು ಬಯಸುತ್ತೇವೆ… 21 ಲಕ್ಷ ಜನರಲ್ಲಿ 10 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ದೆವ್ವ, ಆತ ಯುದ್ಧ ಅಪರಾಧಿ” ಎಂದರು.

ಪ್ಯಾಲೆಸ್ತೀನ್‌ ಹೆಸರನ್ನು ತೆಗೆದುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಮ್ಮ ದೇಶದ ಬಾಬಾ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಕೇಳಿ ಮುಖ್ಯಮಂತ್ರಿಗಳೇ, ನಾನು ನಮ್ಮ ತ್ರಿವರ್ಣ ಧ್ವಜದ ಜೊತೆಗೆ ಪ್ಯಾಲೆಸ್ತೀನ್‌ ಧ್ವಜ ಧರಿಸಿದ್ದೇನೆ. ನಾನು ಪ್ಯಾಲೆಸ್ತೀನ್‌ನೊಂದಿಗೆ ನಿಲ್ಲುತ್ತೇನೆ. ಪ್ಯಾಲೆಸ್ತೀನ್‌ ಸಮಸ್ಯೆ ಕೇವಲ ಮುಸ್ಲಿಮರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಇದು ಮಾನವೀಯ ವಿಷಯ” ಎಂದು ಒವೈಸಿ ಹೇಳಿದರು.

ಇದನ್ನೂ ಓದಿ: ಇಸ್ರೇಲ್ ತನ್ನ ಆತ್ಮರಕ್ಷಣೆಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ ವಿದೇಶಾಂಗ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...