Homeಮುಖಪುಟಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

- Advertisement -
- Advertisement -

”ಪ್ಯಾಲೆಸ್ತೀನ್‌ ವಿಷಯ ಕೇವಲ ಮುಸಲ್ಮಾನರಿಗೆ ಸಂಬಂಧಿಸಿದ್ದಲ್ಲ, ಇದು ಮಾನವೀಯತೆಯ ವಿಷಯ ಹಾಗೂ ನ್ಯಾಯವನ್ನು ಬಯಸುವ ಎಲ್ಲರಿಗೂ ಇದು ಸಂಬಂಧಿಸಿದ್ದಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ನಿಲ್ಲಬೇಕು” ಎಂದು ಇಸ್ರೇಲ್-ಹಮಾಸ್ ಉಗ್ರರ ಸಂಘರ್ಷದ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಾತನಾಡಿದ್ದಾರೆ.

ಈ ಬಗ್ಗೆ ಹೈದರಾಬಾದ್ ಸಂಸದ ಒವೈಸಿ ಮಾತನಾಡಿದ್ದು, ”ಕಳೆದ ಆರು ದಿನಗಳಲ್ಲಿ ಇಸ್ರೇಲ್ ಸರ್ಕಾರವು ಗಾಜಾ ಮೇಲೆ 6,000 ಬಾಂಬ್​ಗಳ ಮೂಲಕ ಬಾಂಬ್ ದಾಳಿ ನಡೆಸಿದೆ ಮತ್ತು ಇದರಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 1,500 ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ಜನ ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಹೇಳಿದರು.
”ಗಾಜಾದಲ್ಲಿ ನಡೆಯುತ್ತಿರುವುದು ಜನಾಂಗೀಯ ಹತ್ಯಾಕಾಂಡವಾಗಿದೆ. ಇಸ್ರೇಲ್ ಮಾಡುತ್ತಿರುವ ಯುದ್ಧಾಪರಾಧಗಳನ್ನು ಭಾರತ ಸರ್ಕಾರ ಮತ್ತು ಇಡೀ ದೇಶ ಖಂಡಿಸಬೇಕು ಎಂದು ಅವರು ಒತ್ತಾಯಿಸಿದರು.
”ನಾನು ಪ್ಯಾಲೆಸ್ತೀನ್‌ ಪರವಾಗಿದ್ದೇನೆ. 21 ಲಕ್ಷ ಜನಸಂಖ್ಯೆ ಹೊಂದಿರುವ ಗಾಜಾದ 10 ಲಕ್ಷ ಬಡವರು ನಿರಾಶ್ರಿತರಾಗಿದ್ದಾರೆ. ಗಾಜಾದ ಎಲ್ಲರನ್ನೂ ಮುಗಿಸಬೇಕೆಂದು ಇಸ್ರೇಲ್ ಸರ್ಕಾರ ಬಯಸಿದೆ ಮತ್ತು ಮಾನವ ಹಕ್ಕುಗಳ ಬಗ್ಗೆ ಮಾತನಾಡುವ ಜಗತ್ತು ಇಂದು ಮೌನವಾಗಿದೆ” ಎಂದು ಆರೋಪಿಸಿದರು.
”ಕಳೆದ 70 ವರ್ಷಗಳಿಂದ ಇಸ್ರೇಲ್ ಆಕ್ರಮಣಕಾರಿ ಪ್ರದೇಶವಾಗಿದೆ ಮತ್ತು ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶವಾಗಿದೆ. ಯಾರೇ ಹಿಂಸಾಚಾರ ನಡೆಸಿದರೂ ಅದನ್ನು ನಾವು ಖಂಡಿಸುತ್ತೇವೆ. ಇದು ಪ್ಯಾಲೆಸ್ತೀನ್‌ ಜನರ ಜನಾಂಗೀಯ ಶುದ್ಧೀಕರಣವಾಗಿದೆ. ಗಾಜಾ ಜನರ ಮೇಲೆ ಕ್ರೌರ್ಯ ನಡೆಯುತ್ತಿದೆ. ಅಮೆರಿಕ, ಬ್ರಿಟನ್, ಯುರೋಪ್ ಇಂದು ಮೂಕ ಪ್ರೇಕ್ಷಕರಾಗಿವೆ” ಎಂದು ಒವೈಸಿ ಹೇಳಿದರು.

”ಗಾಜಾದಲ್ಲಿ ಪ್ಯಾಲೆಸ್ತೀನ್‌ ಜನರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಿ ಮೋದಿ ಜಿ, ಪ್ಯಾಲೆಸ್ತೀನ್‌ ಜನರೊಂದಿಗೆ ಒಗ್ಗಟ್ಟನ್ನು ತೋರಿಸಿ ಎಂದು ನಾವು ನಮ್ಮ ಪ್ರಧಾನಿಗೆ ಹೇಳಲು ಬಯಸುತ್ತೇವೆ… 21 ಲಕ್ಷ ಜನರಲ್ಲಿ 10 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ದೆವ್ವ, ಆತ ಯುದ್ಧ ಅಪರಾಧಿ” ಎಂದರು.

ಪ್ಯಾಲೆಸ್ತೀನ್‌ ಹೆಸರನ್ನು ತೆಗೆದುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಮ್ಮ ದೇಶದ ಬಾಬಾ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಕೇಳಿ ಮುಖ್ಯಮಂತ್ರಿಗಳೇ, ನಾನು ನಮ್ಮ ತ್ರಿವರ್ಣ ಧ್ವಜದ ಜೊತೆಗೆ ಪ್ಯಾಲೆಸ್ತೀನ್‌ ಧ್ವಜ ಧರಿಸಿದ್ದೇನೆ. ನಾನು ಪ್ಯಾಲೆಸ್ತೀನ್‌ನೊಂದಿಗೆ ನಿಲ್ಲುತ್ತೇನೆ. ಪ್ಯಾಲೆಸ್ತೀನ್‌ ಸಮಸ್ಯೆ ಕೇವಲ ಮುಸ್ಲಿಮರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಇದು ಮಾನವೀಯ ವಿಷಯ” ಎಂದು ಒವೈಸಿ ಹೇಳಿದರು.

ಇದನ್ನೂ ಓದಿ: ಇಸ್ರೇಲ್ ತನ್ನ ಆತ್ಮರಕ್ಷಣೆಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ ವಿದೇಶಾಂಗ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...