Homeಮುಖಪುಟಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ಪ್ರಧಾನಿ ಮೋದಿ ನಿಲ್ಲಬೇಕು: ಒವೈಸಿ ಆಗ್ರಹ

- Advertisement -
- Advertisement -

”ಪ್ಯಾಲೆಸ್ತೀನ್‌ ವಿಷಯ ಕೇವಲ ಮುಸಲ್ಮಾನರಿಗೆ ಸಂಬಂಧಿಸಿದ್ದಲ್ಲ, ಇದು ಮಾನವೀಯತೆಯ ವಿಷಯ ಹಾಗೂ ನ್ಯಾಯವನ್ನು ಬಯಸುವ ಎಲ್ಲರಿಗೂ ಇದು ಸಂಬಂಧಿಸಿದ್ದಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್‌ ಜನರ ಬೆಂಬಲಕ್ಕೆ ನಿಲ್ಲಬೇಕು” ಎಂದು ಇಸ್ರೇಲ್-ಹಮಾಸ್ ಉಗ್ರರ ಸಂಘರ್ಷದ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಾತನಾಡಿದ್ದಾರೆ.

ಈ ಬಗ್ಗೆ ಹೈದರಾಬಾದ್ ಸಂಸದ ಒವೈಸಿ ಮಾತನಾಡಿದ್ದು, ”ಕಳೆದ ಆರು ದಿನಗಳಲ್ಲಿ ಇಸ್ರೇಲ್ ಸರ್ಕಾರವು ಗಾಜಾ ಮೇಲೆ 6,000 ಬಾಂಬ್​ಗಳ ಮೂಲಕ ಬಾಂಬ್ ದಾಳಿ ನಡೆಸಿದೆ ಮತ್ತು ಇದರಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 1,500 ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ಜನ ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಜನರು ಗಾಯಗೊಂಡಿದ್ದಾರೆ” ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಹೇಳಿದರು.
”ಗಾಜಾದಲ್ಲಿ ನಡೆಯುತ್ತಿರುವುದು ಜನಾಂಗೀಯ ಹತ್ಯಾಕಾಂಡವಾಗಿದೆ. ಇಸ್ರೇಲ್ ಮಾಡುತ್ತಿರುವ ಯುದ್ಧಾಪರಾಧಗಳನ್ನು ಭಾರತ ಸರ್ಕಾರ ಮತ್ತು ಇಡೀ ದೇಶ ಖಂಡಿಸಬೇಕು ಎಂದು ಅವರು ಒತ್ತಾಯಿಸಿದರು.
”ನಾನು ಪ್ಯಾಲೆಸ್ತೀನ್‌ ಪರವಾಗಿದ್ದೇನೆ. 21 ಲಕ್ಷ ಜನಸಂಖ್ಯೆ ಹೊಂದಿರುವ ಗಾಜಾದ 10 ಲಕ್ಷ ಬಡವರು ನಿರಾಶ್ರಿತರಾಗಿದ್ದಾರೆ. ಗಾಜಾದ ಎಲ್ಲರನ್ನೂ ಮುಗಿಸಬೇಕೆಂದು ಇಸ್ರೇಲ್ ಸರ್ಕಾರ ಬಯಸಿದೆ ಮತ್ತು ಮಾನವ ಹಕ್ಕುಗಳ ಬಗ್ಗೆ ಮಾತನಾಡುವ ಜಗತ್ತು ಇಂದು ಮೌನವಾಗಿದೆ” ಎಂದು ಆರೋಪಿಸಿದರು.
”ಕಳೆದ 70 ವರ್ಷಗಳಿಂದ ಇಸ್ರೇಲ್ ಆಕ್ರಮಣಕಾರಿ ಪ್ರದೇಶವಾಗಿದೆ ಮತ್ತು ಪ್ಯಾಲೆಸ್ತೀನ್‌ ಆಕ್ರಮಿತ ಪ್ರದೇಶವಾಗಿದೆ. ಯಾರೇ ಹಿಂಸಾಚಾರ ನಡೆಸಿದರೂ ಅದನ್ನು ನಾವು ಖಂಡಿಸುತ್ತೇವೆ. ಇದು ಪ್ಯಾಲೆಸ್ತೀನ್‌ ಜನರ ಜನಾಂಗೀಯ ಶುದ್ಧೀಕರಣವಾಗಿದೆ. ಗಾಜಾ ಜನರ ಮೇಲೆ ಕ್ರೌರ್ಯ ನಡೆಯುತ್ತಿದೆ. ಅಮೆರಿಕ, ಬ್ರಿಟನ್, ಯುರೋಪ್ ಇಂದು ಮೂಕ ಪ್ರೇಕ್ಷಕರಾಗಿವೆ” ಎಂದು ಒವೈಸಿ ಹೇಳಿದರು.

”ಗಾಜಾದಲ್ಲಿ ಪ್ಯಾಲೆಸ್ತೀನ್‌ ಜನರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಿ ಮೋದಿ ಜಿ, ಪ್ಯಾಲೆಸ್ತೀನ್‌ ಜನರೊಂದಿಗೆ ಒಗ್ಗಟ್ಟನ್ನು ತೋರಿಸಿ ಎಂದು ನಾವು ನಮ್ಮ ಪ್ರಧಾನಿಗೆ ಹೇಳಲು ಬಯಸುತ್ತೇವೆ… 21 ಲಕ್ಷ ಜನರಲ್ಲಿ 10 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ದೆವ್ವ, ಆತ ಯುದ್ಧ ಅಪರಾಧಿ” ಎಂದರು.

ಪ್ಯಾಲೆಸ್ತೀನ್‌ ಹೆಸರನ್ನು ತೆಗೆದುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಮ್ಮ ದೇಶದ ಬಾಬಾ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಕೇಳಿ ಮುಖ್ಯಮಂತ್ರಿಗಳೇ, ನಾನು ನಮ್ಮ ತ್ರಿವರ್ಣ ಧ್ವಜದ ಜೊತೆಗೆ ಪ್ಯಾಲೆಸ್ತೀನ್‌ ಧ್ವಜ ಧರಿಸಿದ್ದೇನೆ. ನಾನು ಪ್ಯಾಲೆಸ್ತೀನ್‌ನೊಂದಿಗೆ ನಿಲ್ಲುತ್ತೇನೆ. ಪ್ಯಾಲೆಸ್ತೀನ್‌ ಸಮಸ್ಯೆ ಕೇವಲ ಮುಸ್ಲಿಮರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಇದು ಮಾನವೀಯ ವಿಷಯ” ಎಂದು ಒವೈಸಿ ಹೇಳಿದರು.

ಇದನ್ನೂ ಓದಿ: ಇಸ್ರೇಲ್ ತನ್ನ ಆತ್ಮರಕ್ಷಣೆಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ ವಿದೇಶಾಂಗ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...