”ಪ್ಯಾಲೆಸ್ತೀನ್ ವಿಷಯ ಕೇವಲ ಮುಸಲ್ಮಾನರಿಗೆ ಸಂಬಂಧಿಸಿದ್ದಲ್ಲ, ಇದು ಮಾನವೀಯತೆಯ ವಿಷಯ ಹಾಗೂ ನ್ಯಾಯವನ್ನು ಬಯಸುವ ಎಲ್ಲರಿಗೂ ಇದು ಸಂಬಂಧಿಸಿದ್ದಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೆಸ್ತೀನ್ ಜನರ ಬೆಂಬಲಕ್ಕೆ ನಿಲ್ಲಬೇಕು” ಎಂದು ಇಸ್ರೇಲ್-ಹಮಾಸ್ ಉಗ್ರರ ಸಂಘರ್ಷದ ಬಗ್ಗೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಮಾತನಾಡಿದ್ದಾರೆ.
”ಗಾಜಾದಲ್ಲಿ ಪ್ಯಾಲೆಸ್ತೀನ್ ಜನರ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಿ ಮೋದಿ ಜಿ, ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟನ್ನು ತೋರಿಸಿ ಎಂದು ನಾವು ನಮ್ಮ ಪ್ರಧಾನಿಗೆ ಹೇಳಲು ಬಯಸುತ್ತೇವೆ… 21 ಲಕ್ಷ ಜನರಲ್ಲಿ 10 ಲಕ್ಷ ಜನ ನಿರಾಶ್ರಿತರಾಗಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ದೆವ್ವ, ಆತ ಯುದ್ಧ ಅಪರಾಧಿ” ಎಂದರು.
ಪ್ಯಾಲೆಸ್ತೀನ್ ಹೆಸರನ್ನು ತೆಗೆದುಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ನಮ್ಮ ದೇಶದ ಬಾಬಾ ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ. ಕೇಳಿ ಮುಖ್ಯಮಂತ್ರಿಗಳೇ, ನಾನು ನಮ್ಮ ತ್ರಿವರ್ಣ ಧ್ವಜದ ಜೊತೆಗೆ ಪ್ಯಾಲೆಸ್ತೀನ್ ಧ್ವಜ ಧರಿಸಿದ್ದೇನೆ. ನಾನು ಪ್ಯಾಲೆಸ್ತೀನ್ನೊಂದಿಗೆ ನಿಲ್ಲುತ್ತೇನೆ. ಪ್ಯಾಲೆಸ್ತೀನ್ ಸಮಸ್ಯೆ ಕೇವಲ ಮುಸ್ಲಿಮರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಇದು ಮಾನವೀಯ ವಿಷಯ” ಎಂದು ಒವೈಸಿ ಹೇಳಿದರು.
ಇದನ್ನೂ ಓದಿ: ಇಸ್ರೇಲ್ ತನ್ನ ಆತ್ಮರಕ್ಷಣೆಯ ವ್ಯಾಪ್ತಿ ಮೀರಿ ವರ್ತಿಸುತ್ತಿದೆ: ಚೀನಾ ವಿದೇಶಾಂಗ ಸಚಿವ