Homeಮುಖಪುಟನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

- Advertisement -
- Advertisement -

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮಸ್ಕರಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಮೆರಾಗಳನ್ನು ನೋಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಆಮ್ ಆದ್ಮಿ ಪಕ್ಷದ ನಾಯಕರೊಬ್ಬರು ಟ್ವೀಟ್ ಮಾಡಿದ ವೀಡಿಯೊ ಈಗ ಪರವಿರೋಧದ ಚರ್ಚೆಗೆ ಕಾರಣವಾಗಿದೆ.

ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಾಡಿರುವ ಪೋಸ್ಟ್‌ ತಪ್ಪುದಾರಿಗೆಳೆಯುವಂತಿದೆ ಎಂದು ಬಿಜೆಪಿ ಟೀಕಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂಲ ವೀಡಿಯೋದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಪತಿಗಳ ನಮನಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ಕ್ಯಾಮೆರಾದತ್ತ ನೋಡುತ್ತಿರುವುದು ದಾಖಲಾಗಿದೆ. ಆದರೆ ಎಡಿಟ್ ಮಾಡಿದ ಬಳಿಕ ವಿಡಿಯೊವನ್ನು ಹರಿಬಿಡಲಾಗಿದೆ.

ಸಂಜಯ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋಕ್ಕೆ ವಿರುದ್ಧವಾಗಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಸಂಜಯ್ ಸಿಂಗ್, “ನಿರ್ಗಮಿತ ರಾಷ್ಟ್ರಪತಿಗೆ ಅವಮಾನ ಮಾಡಲಾಗಿದೆ. ಇದಕ್ಕಿಂತ ದುರದೃಷ್ಟಕರ ಸಂಗತಿ ಬೇರೊಂದಿಲ್ಲ. ನಿಮ್ಮ ಅವಧಿ ಮುಗಿದ ಬಳಿಕ ನಿಮ್ಮ ಕಡೆ ಇವರು ತಿರುಗಿಯೂ ನೋಡುವುದಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಎಡಿಟ್ ಮಾಡಿದ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ಸಾರ್ವಜನಿಕ ಡೊಮೈನ್‌ನಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಶುಭಾಶಯ ಕೋರುತ್ತಿರುವ ಚಿತ್ರಗಳಿವೆ. ಆದರೂ, ಅಂತಹ ಆರೋಪ ಹೊರಿಸಲಾಗಿದೆ, ಉದ್ದೇಶವೇನು?” ಎಂದು ಪೂನವಾಲ ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಎಡಿಟ್ ಮಾಡಿದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ಈ ಹಿಂದೆ ಹಲವು ವಿಡಿಯೊಗಳನ್ನು ತಿರುಚಿ ಹಂಚಿಕೊಂಡ ಉದಾಹರಣೆಗಳಿವೆ. ಆದರೆ ಪ್ರತಿಪಕ್ಷಗಳೂ ಕೆಲವೊಮ್ಮೆ ಈ ಆರೋಪಕ್ಕೆ ಗುರಿಯಾಗಿವೆ.

ಇತ್ತೀಚೆಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕವು ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಹೇಳಿಕೆಯನ್ನು ತಿರುಚಿ ಪೋಸ್ಟ್ ಮಾಡಿತ್ತು. ರಮೇಶ್ ಕುಮಾರ್‌ ಮಾತನಾಡಿದ್ದೇ ಬೇರೆಯ ವಿಷಯವಾಗಿತ್ತು.

ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದ ರಮೇಶ್ ಕುಮಾರ್, “ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಟ್ಟಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ, ಈ ಕಿಂಚಿತ್ ತ್ಯಾಗಕ್ಕೆ ತಯಾರಾಗದೆ ಹೋದ್ರೆ ನಾವು ಇನ್ನಮುಂದೆ ತಿನ್ನುವ ಅನ್ನದಲ್ಲಿ ಹುಳ ಬೀಳುತ್ತೆ” ಎಂದು ಹೇಳಿದ್ದರು. ಆದರೆ ಬಿಜೆಪಿ ಪೋಸ್ಟ್ ಮಾಡಿದ್ದ ವಿಡಿಯೊದಲ್ಲಿ “3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ” ಎಂದಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...