Homeಮುಖಪುಟನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

- Advertisement -
- Advertisement -

ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಮಸ್ಕರಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಮೆರಾಗಳನ್ನು ನೋಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಆಮ್ ಆದ್ಮಿ ಪಕ್ಷದ ನಾಯಕರೊಬ್ಬರು ಟ್ವೀಟ್ ಮಾಡಿದ ವೀಡಿಯೊ ಈಗ ಪರವಿರೋಧದ ಚರ್ಚೆಗೆ ಕಾರಣವಾಗಿದೆ.

ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಾಡಿರುವ ಪೋಸ್ಟ್‌ ತಪ್ಪುದಾರಿಗೆಳೆಯುವಂತಿದೆ ಎಂದು ಬಿಜೆಪಿ ಟೀಕಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೂಲ ವೀಡಿಯೋದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಪತಿಗಳ ನಮನಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ಕ್ಯಾಮೆರಾದತ್ತ ನೋಡುತ್ತಿರುವುದು ದಾಖಲಾಗಿದೆ. ಆದರೆ ಎಡಿಟ್ ಮಾಡಿದ ಬಳಿಕ ವಿಡಿಯೊವನ್ನು ಹರಿಬಿಡಲಾಗಿದೆ.

ಸಂಜಯ್ ಸಿಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋಕ್ಕೆ ವಿರುದ್ಧವಾಗಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಸಂಜಯ್ ಸಿಂಗ್, “ನಿರ್ಗಮಿತ ರಾಷ್ಟ್ರಪತಿಗೆ ಅವಮಾನ ಮಾಡಲಾಗಿದೆ. ಇದಕ್ಕಿಂತ ದುರದೃಷ್ಟಕರ ಸಂಗತಿ ಬೇರೊಂದಿಲ್ಲ. ನಿಮ್ಮ ಅವಧಿ ಮುಗಿದ ಬಳಿಕ ನಿಮ್ಮ ಕಡೆ ಇವರು ತಿರುಗಿಯೂ ನೋಡುವುದಿಲ್ಲ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯರ ಕೆಲಸವನ್ನು ಮಾಧ್ಯಮಗಳೇ ಮಾಡುತ್ತಿವೆ: ಜುಬೇರ್‌

“ಎಡಿಟ್ ಮಾಡಿದ ಕ್ಲಿಪ್ ಅನ್ನು ಹಂಚಿಕೊಳ್ಳಲಾಗಿದೆ. ಸಾರ್ವಜನಿಕ ಡೊಮೈನ್‌ನಲ್ಲಿ ಪ್ರಧಾನಿ ಮೋದಿ ರಾಷ್ಟ್ರಪತಿಗಳಿಗೆ ಶುಭಾಶಯ ಕೋರುತ್ತಿರುವ ಚಿತ್ರಗಳಿವೆ. ಆದರೂ, ಅಂತಹ ಆರೋಪ ಹೊರಿಸಲಾಗಿದೆ, ಉದ್ದೇಶವೇನು?” ಎಂದು ಪೂನವಾಲ ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಎಡಿಟ್ ಮಾಡಿದ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ಈ ಹಿಂದೆ ಹಲವು ವಿಡಿಯೊಗಳನ್ನು ತಿರುಚಿ ಹಂಚಿಕೊಂಡ ಉದಾಹರಣೆಗಳಿವೆ. ಆದರೆ ಪ್ರತಿಪಕ್ಷಗಳೂ ಕೆಲವೊಮ್ಮೆ ಈ ಆರೋಪಕ್ಕೆ ಗುರಿಯಾಗಿವೆ.

ಇತ್ತೀಚೆಗೆ ಕರ್ನಾಟಕ ರಾಜ್ಯ ಬಿಜೆಪಿ ಘಟಕವು ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌ ಹೇಳಿಕೆಯನ್ನು ತಿರುಚಿ ಪೋಸ್ಟ್ ಮಾಡಿತ್ತು. ರಮೇಶ್ ಕುಮಾರ್‌ ಮಾತನಾಡಿದ್ದೇ ಬೇರೆಯ ವಿಷಯವಾಗಿತ್ತು.

ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದ ರಮೇಶ್ ಕುಮಾರ್, “ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಟ್ಟಿದ್ದೇವೆ. ಈಗ ನಮಗೆ ಅದರ ಋಣ ತೀರಿಸುವ ಸಮಯ ಬಂದಿದೆ, ಈ ಕಿಂಚಿತ್ ತ್ಯಾಗಕ್ಕೆ ತಯಾರಾಗದೆ ಹೋದ್ರೆ ನಾವು ಇನ್ನಮುಂದೆ ತಿನ್ನುವ ಅನ್ನದಲ್ಲಿ ಹುಳ ಬೀಳುತ್ತೆ” ಎಂದು ಹೇಳಿದ್ದರು. ಆದರೆ ಬಿಜೆಪಿ ಪೋಸ್ಟ್ ಮಾಡಿದ್ದ ವಿಡಿಯೊದಲ್ಲಿ “3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ” ಎಂದಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...