Homeಚಳವಳಿಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ನಡುವೆಯೂ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಪ್ರಧಾನಿ ಇಂದು ಮತ್ತೊಮ್ಮೆ ಈ ಕಾಯ್ದೆಗಳು ರೈತರಿಗೆ ಅನುಕೂಲವಾಗಲೆಂದೇ ರೂಪಿಸಲಾಗಿದೆ ಎಂದು ಮತ್ತೆ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

‘ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರವು ಶಾಸನಬದ್ಧಗೊಳಿಸಿರುವ ಕೃಷಿ ಕಾನೂನುಗಳು, ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳ ನಡುವಿನ ಅಡೆತಡೆಗಳನ್ನು ತಗ್ಗಿಸಲು ಸಹಾಯ ಮಾಡುತ್ತದೆ. ರೈತರಿಗೆ ತಂತ್ರಜ್ಞಾನ ಲಭ್ಯವಾಗುವಂತೆ ಮಾಡಲಿವೆ. ರೈತರಿಗೆ ನೆರವಾಗುವಂತಹ ಹೂಡಿಕೆಗಳನ್ನು, ಮಾರುಕಟ್ಟೆಗಳನ್ನು ಸೃಷ್ಟಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (FICCI) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, “ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತಡೆಗೋಡೆಗಳು ಹೆಚ್ಚಾಗಿದ್ದವು. ಈಗ ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಸಂಗ್ರಹಣೆ, ಶೀಥಲೀಕರಣಗಳಿಗೆ ಇದ್ದ ತಡೆಗೋಡೆಗಳನ್ನು ತೆರವುಗೊಳಿಸಲಾಗಿದೆ’ ಎಂದರು. ಈ ಸುಧಾರಣೆಗಳು ರೈತರಿಗೆ ಹೊಸ ಮಾರುಕಟ್ಟೆಗಳು, ತಂತ್ರಜ್ಞಾನದ ಅನುಕೂಲಗಳು ಮತ್ತು ಹೂಡಿಕೆಗಳನ್ನು ತರಲು ಸಹಾಯ ಮಾಡುತ್ತದೆ. ನನ್ನ ದೇಶದ ರೈತರು ಈ ಎಲ್ಲದರಿಂದ ಹೆಚ್ಚಿನ ಲಾಭ ಪಡೆಯುತ್ತಾರೆ “ಎಂದು ಮೋದಿ ಕೃಷಿ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಸಾವಿರಾರು ರೈತರು, ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದವರು ಕಳೆದ 17 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪಟ್ಟು ರೈತರು ಹಿಡಿದಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗಿನ ಅನೇಕ ಸುತ್ತಿನ ಮಾತುಕತೆಗಳು ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ.

ಇಂತಹ ಸಂದರ್ಭದಲ್ಲಿ, ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿಯವರು ಮತ್ತೆ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲ ಮಾಡಿಕೊಡಲಿವೆ ಎಂದಿದ್ದಾರೆ. ರೈತರೇ ಈ ಕಾಯ್ದೆಗಳ ಬಗ್ಗೆ ಆತಂಕ ವ್ಯಕ್ತಿಪಡಿಸುತ್ತಿದ್ದರೂ ಸರ್ಕಾರ ಮಾತ್ರ ಕಾಯ್ದೆಯನ್ನು ಪದೇ ಪದೇ ಸಮರ್ಥನೆ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....