Homeಚಳವಳಿಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ನಡುವೆಯೂ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಪ್ರಧಾನಿ ಇಂದು ಮತ್ತೊಮ್ಮೆ ಈ ಕಾಯ್ದೆಗಳು ರೈತರಿಗೆ ಅನುಕೂಲವಾಗಲೆಂದೇ ರೂಪಿಸಲಾಗಿದೆ ಎಂದು ಮತ್ತೆ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

‘ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರವು ಶಾಸನಬದ್ಧಗೊಳಿಸಿರುವ ಕೃಷಿ ಕಾನೂನುಗಳು, ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳ ನಡುವಿನ ಅಡೆತಡೆಗಳನ್ನು ತಗ್ಗಿಸಲು ಸಹಾಯ ಮಾಡುತ್ತದೆ. ರೈತರಿಗೆ ತಂತ್ರಜ್ಞಾನ ಲಭ್ಯವಾಗುವಂತೆ ಮಾಡಲಿವೆ. ರೈತರಿಗೆ ನೆರವಾಗುವಂತಹ ಹೂಡಿಕೆಗಳನ್ನು, ಮಾರುಕಟ್ಟೆಗಳನ್ನು ಸೃಷ್ಟಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (FICCI) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, “ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತಡೆಗೋಡೆಗಳು ಹೆಚ್ಚಾಗಿದ್ದವು. ಈಗ ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಸಂಗ್ರಹಣೆ, ಶೀಥಲೀಕರಣಗಳಿಗೆ ಇದ್ದ ತಡೆಗೋಡೆಗಳನ್ನು ತೆರವುಗೊಳಿಸಲಾಗಿದೆ’ ಎಂದರು. ಈ ಸುಧಾರಣೆಗಳು ರೈತರಿಗೆ ಹೊಸ ಮಾರುಕಟ್ಟೆಗಳು, ತಂತ್ರಜ್ಞಾನದ ಅನುಕೂಲಗಳು ಮತ್ತು ಹೂಡಿಕೆಗಳನ್ನು ತರಲು ಸಹಾಯ ಮಾಡುತ್ತದೆ. ನನ್ನ ದೇಶದ ರೈತರು ಈ ಎಲ್ಲದರಿಂದ ಹೆಚ್ಚಿನ ಲಾಭ ಪಡೆಯುತ್ತಾರೆ “ಎಂದು ಮೋದಿ ಕೃಷಿ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಸಾವಿರಾರು ರೈತರು, ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದವರು ಕಳೆದ 17 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪಟ್ಟು ರೈತರು ಹಿಡಿದಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗಿನ ಅನೇಕ ಸುತ್ತಿನ ಮಾತುಕತೆಗಳು ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ.

ಇಂತಹ ಸಂದರ್ಭದಲ್ಲಿ, ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿಯವರು ಮತ್ತೆ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲ ಮಾಡಿಕೊಡಲಿವೆ ಎಂದಿದ್ದಾರೆ. ರೈತರೇ ಈ ಕಾಯ್ದೆಗಳ ಬಗ್ಗೆ ಆತಂಕ ವ್ಯಕ್ತಿಪಡಿಸುತ್ತಿದ್ದರೂ ಸರ್ಕಾರ ಮಾತ್ರ ಕಾಯ್ದೆಯನ್ನು ಪದೇ ಪದೇ ಸಮರ್ಥನೆ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...