Homeಚಳವಳಿಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ಅತ್ತ ರೈತರ ಪ್ರತಿಭಟನೆ, ಇತ್ತ ಪ್ರಧಾನಿಯಿಂದ ಕೃಷಿ ಕಾಯ್ದೆಗಳ ಗುಣಗಾನ!

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಪಟ್ಟು ಹಿಡಿದಿದ್ದಾರೆ.

- Advertisement -
- Advertisement -

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಪ್ರತಿಭಟನೆ ನಡುವೆಯೂ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಪ್ರಧಾನಿ ಇಂದು ಮತ್ತೊಮ್ಮೆ ಈ ಕಾಯ್ದೆಗಳು ರೈತರಿಗೆ ಅನುಕೂಲವಾಗಲೆಂದೇ ರೂಪಿಸಲಾಗಿದೆ ಎಂದು ಮತ್ತೆ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

‘ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರವು ಶಾಸನಬದ್ಧಗೊಳಿಸಿರುವ ಕೃಷಿ ಕಾನೂನುಗಳು, ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳ ನಡುವಿನ ಅಡೆತಡೆಗಳನ್ನು ತಗ್ಗಿಸಲು ಸಹಾಯ ಮಾಡುತ್ತದೆ. ರೈತರಿಗೆ ತಂತ್ರಜ್ಞಾನ ಲಭ್ಯವಾಗುವಂತೆ ಮಾಡಲಿವೆ. ರೈತರಿಗೆ ನೆರವಾಗುವಂತಹ ಹೂಡಿಕೆಗಳನ್ನು, ಮಾರುಕಟ್ಟೆಗಳನ್ನು ಸೃಷ್ಟಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (FICCI) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, “ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತಡೆಗೋಡೆಗಳು ಹೆಚ್ಚಾಗಿದ್ದವು. ಈಗ ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಸಂಗ್ರಹಣೆ, ಶೀಥಲೀಕರಣಗಳಿಗೆ ಇದ್ದ ತಡೆಗೋಡೆಗಳನ್ನು ತೆರವುಗೊಳಿಸಲಾಗಿದೆ’ ಎಂದರು. ಈ ಸುಧಾರಣೆಗಳು ರೈತರಿಗೆ ಹೊಸ ಮಾರುಕಟ್ಟೆಗಳು, ತಂತ್ರಜ್ಞಾನದ ಅನುಕೂಲಗಳು ಮತ್ತು ಹೂಡಿಕೆಗಳನ್ನು ತರಲು ಸಹಾಯ ಮಾಡುತ್ತದೆ. ನನ್ನ ದೇಶದ ರೈತರು ಈ ಎಲ್ಲದರಿಂದ ಹೆಚ್ಚಿನ ಲಾಭ ಪಡೆಯುತ್ತಾರೆ “ಎಂದು ಮೋದಿ ಕೃಷಿ ಕಾಯ್ದೆಗಳ ಗುಣಗಾನ ಮಾಡಿದ್ದಾರೆ.

ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದೇಶಾದ್ಯಂತ ಸಾವಿರಾರು ರೈತರು, ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದವರು ಕಳೆದ 17 ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತರ ಪ್ರತಿಭಟನೆಗೆ ಅನೇಕ ರಾಜಕೀಯ ಪಕ್ಷಗಳು ಬೆಂಬಲ ನೀಡಿವೆ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಪಟ್ಟು ರೈತರು ಹಿಡಿದಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರದೊಂದಿಗಿನ ಅನೇಕ ಸುತ್ತಿನ ಮಾತುಕತೆಗಳು ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ.

ಇಂತಹ ಸಂದರ್ಭದಲ್ಲಿ, ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿಯವರು ಮತ್ತೆ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲ ಮಾಡಿಕೊಡಲಿವೆ ಎಂದಿದ್ದಾರೆ. ರೈತರೇ ಈ ಕಾಯ್ದೆಗಳ ಬಗ್ಗೆ ಆತಂಕ ವ್ಯಕ್ತಿಪಡಿಸುತ್ತಿದ್ದರೂ ಸರ್ಕಾರ ಮಾತ್ರ ಕಾಯ್ದೆಯನ್ನು ಪದೇ ಪದೇ ಸಮರ್ಥನೆ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...