Homeಮುಖಪುಟಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

- Advertisement -
- Advertisement -

ಮಣಿಪುರ ಹಿಂಸಾಚಾರ ಮತ್ತು ಅಲ್ಲಿಯ ಬುಡುಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯದ ಬಗ್ಗೆ ದೇಶವ್ಯಾಪಿ ಕೋಲಾಹಲ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ  ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷದ ಮೈತ್ರಿ INDIA ಆಗ್ರಹಿಸಿದೆ. ಪ್ರಧಾನಿ ಮೋದಿಯವರ ಹೇಳಿಕೆಯ ನಂತರವೇ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ

ಲೋಕಸಭೆಯಲ್ಲಿ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸಂಸದರು ”ಇಂಡಿಯಾ ಫಾರ್ ಮಣಿಪುರ” ಮತ್ತು ”ಭಾರತ ಮಣಿಪುರ ಕುರಿತು ಪ್ರಧಾನಿ ಹೇಳಿಕೆ ನೀಡಲೇಬೇಕು” ಎಂಬ ಫಲಕಗಳನ್ನು ಹಿಡಿದುಕೊಂಡಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ”ನಾವು ಸಿದ್ಧರಿದ್ದೇವೆ…140 ಕೋಟಿ ಜನರ ನಾಯಕ(ಮೋದಿ) ಸಂಸತ್ತಿನ ಹೊರಗೆ ಹೇಳಿಕೆ ನೀಡಿದರೆ, ಜನಪ್ರತಿನಿಧಿಗಳು ಕುಳಿತುಕೊಳ್ಳುವ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು” ಎಂದು ರಾಜ್ಯಸಭೆ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ”ಸಂಸತ್ತಿನ 3ನೇ ದಿನದ ಮುಂಗಾರು ಅಧಿವೇಶನ ಇಂದು ಆರಂಭವಾಗಿದೆ. INDIAದ ಬೇಡಿಕೆ ನೇರವಾಗಿದೆ… ಮಣಿಪುರದಲ್ಲಿ ಮೇ 3ರ ನಂತರದ ಭೀಕರ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಸಮಗ್ರ ಹೇಳಿಕೆ ನೀಡಬೇಕು. ಆನಂತರ ನಮ್ಮ ಸಾಮೂಹಿಕ ನೋವು, ವೇದನೆ ಮತ್ತು ಸಾಮರಸ್ಯದ ಬಯಕೆಯನ್ನು ವ್ಯಕ್ತಪಡಿಸಲು ಚರ್ಚೆ ನಡೆಯಲಿದೆ” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

”ಇಂತಹ ಸಂದರ್ಭಗಳಲ್ಲಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಧಾನಮಂತ್ರಿ ಮಾಡುವ ಯಾವುದೇ 5D ನಾಟಕ: ಮೊದಲು ಆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ, ವಿಷಯವನ್ನು ತಿರುಚಲು ಯತ್ನಿಸುತ್ತಾರೆ, ವಿಷಯವನ್ನು ಬೇರೆಡೆಗೆ ತಿರುಗಿಸುತ್ತಾರೆ ಮತ್ತು ‘ಮಾನನಷ್ಟಗೊಳಿಸುತ್ತಾರೆ.” ಈ ವಿಚಾರದಲ್ಲೂ ಹಾಗೇ ಮಾಡುತ್ತಾರೆಯೇ? ಮಣಿಪುರ ಸೇರಿ ಇಡೀ ದೇಶ ಗಮನಿಸುತ್ತಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಎಎಪಿ ಸಂಸದ ರಾಘವ್ ಚಡ್ಡಾ ಮಾತನಾಡಿ, ”ದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಮಣಿಪುರದ ವಿಷಯದ ಬಗ್ಗೆ ಸರ್ಕಾರ ಮತ್ತು ಪ್ರಧಾನಿ ಮೋದಿ ಮಾತನಾಡಬೇಕು ಎಂದು ದೇಶವು ಒತ್ತಾಯಿಸುತ್ತದೆ” ಎಂದು ಹೇಳಿದ್ದಾರೆ.

”ನ್ಯಾಯಾಂಗ ಇದರಲ್ಲಿ ಮಧ್ಯಪ್ರವೇಶಿಸಬೇಕು, ಮಣಿಪುರದಲ್ಲಿ ಏನು ನಡೆಯುತ್ತಿದೆ ಮತ್ತು ದೇಶದ ಇತರ ಭಾಗಗಳಲ್ಲಿ ಏನು ನಡೆಯುತ್ತಿದೆ ಎಂಬುದರ ನಡುವೆ ವ್ಯತ್ಯಾಸವಿದೆ” ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ.

ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಹಲವಾರು ವಿರೋಧ ಪಕ್ಷದ ನಾಯಕರು ನೋಟಿಸ್ ನೀಡಿದ್ದಾರೆ. ಯಾವುದೇ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಬೇಕು ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಚಾರವಾಗಿ ಪ್ರತಿಭಟನೆಗಳು ನಡೆಸುತ್ತಿವೆ.

ಇದನ್ನೂ ಓದಿ: ಸರ್ಕಾರದ ಮನವಿ ಧಿಕ್ಕರಿಸಿ ಮಣಿಪುರಕ್ಕೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...