Homeಮುಖಪುಟಇಂದು ಮಂಗಳೂರಿಗೆ ಪ್ರಧಾನಿ ಮೋದಿ: ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್

ಇಂದು ಮಂಗಳೂರಿಗೆ ಪ್ರಧಾನಿ ಮೋದಿ: ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್

- Advertisement -
- Advertisement -

ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ಭೇಟಿಗೆ ವಿರೋಧ ವ್ಯಕ್ತಪಡಿಸಿ ಪ್ರಶ್ನೆಗಳ ಸುರಿಮಳೆಗೈದಿದೆ.

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್‌ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ? ಉತ್ತರಿಸಿ ಎಂದಿದ್ದಾರೆ.

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಅಲ್ಲದೆ ಬಜ್ಪೆ ವಿಮಾನ ನಿಲ್ದಾಣ, ಎನ್‌ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು ಅಥವಾ ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ? ಉತ್ತರಿಸಿ ಎಂದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ ಇದು ವಿಕಾಸನೋ? ವಿನಾಶನೋ? ಎಂದು ಅವರು ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ
ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ
ಇದು ವಿಕಾಸನೋ? ವಿನಾಶನೋ? ಎಂದು ಅವರು ಕೇಳಿದ್ದಾರೆ.

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್‌ಗಳಿಂದಾಗಿ ವಾಹನ ಸಂಚಾರಿಗಳ ಜೇಬು ಖಾಲಿಯಾಗಿದೆ. ಆದರೆ ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿಯಾಗಿದೆ ಇದು ವಿಕಾಸನೋ? ವಿನಾಶನೋ? ಮೋದಿಯವರೆ ಉತ್ತರಿಸಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಮುರುಘಾ ಶರಣರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...