Homeಅಂತರಾಷ್ಟ್ರೀಯಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

- Advertisement -
- Advertisement -

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

“ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ ಭಾಗವಹಿಸುವುತ್ತಿರಲಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬುದನ್ನು ಕೆನಡಾದ ಜಿ7 ವಕ್ತಾರರು ಭಾನುವಾರ ತಡರಾತ್ರಿವರೆಗೆ ದೃಢಪಡಿಸಲಿಲ್ಲ ಎಂದು ವರದಿ ತಿಳಿಸಿದೆ.

ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಂ (ಯುಕೆ) ಜಪಾನ್, ಯುನೈಟೆಡ್ ಸ್ಟೇಟ್ಸ್ (ಯುಎಸ್‌), ಯುರೋಪಿಯನ್ ಒಕ್ಕೂಟ (ಇಯು), ಐಎಮ್‌ಎಫ್‌, ವಿಶ್ವ ಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೂಡ ಕೆನಡಾದಿಂದ ಆಹ್ವಾನಗಳನ್ನು ಸ್ವೀಕರಿಸಿವೆ ಎಂದು ವರದಿಯಾಗಿದ್ದರೂ, ಪ್ರಧಾನಿ ಮೋದಿಯವರ ಭೇಟಿಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

ಕಳೆದ ತಿಂಗಳು, ವಿದೇಶಾಂಗ ಸಚಿವಾಲಯವು ಎರಡು ಸಂದರ್ಭಗಳಲ್ಲಿ, ಜಿ 7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ‘ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದೆ.

ಈ ನಡುವೆ, ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಆದರೆ, ಕೆನಡಾ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂದು ಅಂಕಿತಾ ಆನಂದ್ ಒಪ್ಪಿಕೊಂಡಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಆದರೆ, ಈ ವಿಚಾರ ಎರಡೂ ರಾಷ್ಟ್ರಗಳ ಸಂಬಂಧ ಹದೆಗೆಡಿಸಿದೆ.

ಪ್ಯಾಲೆಸ್ತೀನಿಯನ್ನರ ನೆರವು ವಿತರಣಾ ಸ್ಥಳದ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...