Homeಅಂತರಾಷ್ಟ್ರೀಯಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

- Advertisement -
- Advertisement -

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

“ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ ಭಾಗವಹಿಸುವುತ್ತಿರಲಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬುದನ್ನು ಕೆನಡಾದ ಜಿ7 ವಕ್ತಾರರು ಭಾನುವಾರ ತಡರಾತ್ರಿವರೆಗೆ ದೃಢಪಡಿಸಲಿಲ್ಲ ಎಂದು ವರದಿ ತಿಳಿಸಿದೆ.

ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಂ (ಯುಕೆ) ಜಪಾನ್, ಯುನೈಟೆಡ್ ಸ್ಟೇಟ್ಸ್ (ಯುಎಸ್‌), ಯುರೋಪಿಯನ್ ಒಕ್ಕೂಟ (ಇಯು), ಐಎಮ್‌ಎಫ್‌, ವಿಶ್ವ ಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೂಡ ಕೆನಡಾದಿಂದ ಆಹ್ವಾನಗಳನ್ನು ಸ್ವೀಕರಿಸಿವೆ ಎಂದು ವರದಿಯಾಗಿದ್ದರೂ, ಪ್ರಧಾನಿ ಮೋದಿಯವರ ಭೇಟಿಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

ಕಳೆದ ತಿಂಗಳು, ವಿದೇಶಾಂಗ ಸಚಿವಾಲಯವು ಎರಡು ಸಂದರ್ಭಗಳಲ್ಲಿ, ಜಿ 7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ‘ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದೆ.

ಈ ನಡುವೆ, ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಆದರೆ, ಕೆನಡಾ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂದು ಅಂಕಿತಾ ಆನಂದ್ ಒಪ್ಪಿಕೊಂಡಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಆದರೆ, ಈ ವಿಚಾರ ಎರಡೂ ರಾಷ್ಟ್ರಗಳ ಸಂಬಂಧ ಹದೆಗೆಡಿಸಿದೆ.

ಪ್ಯಾಲೆಸ್ತೀನಿಯನ್ನರ ನೆರವು ವಿತರಣಾ ಸ್ಥಳದ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...