Homeಅಂತರಾಷ್ಟ್ರೀಯಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

ಜಿ7 ಶೃಂಗಸಭೆ| ಪ್ರಧಾನಿ ಮೋದಿಗೆ ಆಹ್ವಾನ ನೀಡದ ಕೆನಡಾ; ವರದಿ

- Advertisement -
- Advertisement -

ಕೆನಡಾದಲ್ಲಿ ನಡೆಯಲಿರುವ ಈ ಬಾರಿಯ ಜಿ7 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದುವರೆಗೆ ಯಾವುದೇ ಅಧಿಕೃತ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಭಾಗವಹಿಸುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

“ಜೂನ್ 15ರಿಂದ 17ರವರೆಗೆ ಕೆನಡಾಡದ ಆಲ್ಬರ್ಟಾದಲ್ಲಿ ಈ ವರ್ಷದ ಜಿ7 ಶೃಂಗಸಭೆ ನಡೆಯಲಿದೆ. ಕಳೆದ 6 ವರ್ಷಗಳಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ಆಹ್ವಾನ ಬಂದಿಲ್ಲ. ಒಂದು ವೇಳೆ ಬಂದಿದ್ದರೂ ಖಲಿಸ್ತಾನಿ ವಿಚಾರದಲ್ಲಿ ಭಾರತದ ಕಳವಳಗಳಿಗೆ ಕೆನಡಾ ಸ್ಪಂದಿಸುತ್ತದೆಯೇ? ಎಂದು ಇನ್ನೂ ಖಚಿತವಾಗದ ಕಾರಣ ಮೋದಿ ಭಾಗವಹಿಸುವುತ್ತಿರಲಿಲ್ಲ” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮೋದಿ ಅವರನ್ನು ಆಹ್ವಾನಿಸಲಾಗುತ್ತದೆಯೇ ಎಂಬುದನ್ನು ಕೆನಡಾದ ಜಿ7 ವಕ್ತಾರರು ಭಾನುವಾರ ತಡರಾತ್ರಿವರೆಗೆ ದೃಢಪಡಿಸಲಿಲ್ಲ ಎಂದು ವರದಿ ತಿಳಿಸಿದೆ.

ಫ್ರಾನ್ಸ್, ಜರ್ಮನಿ, ಇಟಲಿ, ಯುನೈಟೆಡ್ ಕಿಂಗ್‌ಡಂ (ಯುಕೆ) ಜಪಾನ್, ಯುನೈಟೆಡ್ ಸ್ಟೇಟ್ಸ್ (ಯುಎಸ್‌), ಯುರೋಪಿಯನ್ ಒಕ್ಕೂಟ (ಇಯು), ಐಎಮ್‌ಎಫ್‌, ವಿಶ್ವ ಬ್ಯಾಂಕ್ ಮತ್ತು ವಿಶ್ವಸಂಸ್ಥೆಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ದಕ್ಷಿಣ ಆಫ್ರಿಕಾ, ಉಕ್ರೇನ್ ಮತ್ತು ಆಸ್ಟ್ರೇಲಿಯಾ ಕೂಡ ಕೆನಡಾದಿಂದ ಆಹ್ವಾನಗಳನ್ನು ಸ್ವೀಕರಿಸಿವೆ ಎಂದು ವರದಿಯಾಗಿದ್ದರೂ, ಪ್ರಧಾನಿ ಮೋದಿಯವರ ಭೇಟಿಯ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ.

ಕಳೆದ ತಿಂಗಳು, ವಿದೇಶಾಂಗ ಸಚಿವಾಲಯವು ಎರಡು ಸಂದರ್ಭಗಳಲ್ಲಿ, ಜಿ 7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾಕ್ಕೆ ಭೇಟಿ ನೀಡುವ ಬಗ್ಗೆ ‘ಯಾವುದೇ ಮಾಹಿತಿ ಇಲ್ಲ’ ಎಂದು ಹೇಳಿದೆ.

ಈ ನಡುವೆ, ಕೆನಡಾದ ವಿದೇಶಾಂಗ ಸಚಿವೆ ಅಂಕಿತಾ ಆನಂದ್, ಕೆನಡಾದ ಪತ್ರಿಕೆ ದಿ ಗ್ಲೋಬ್ ಅಂಡ್ ಮೇಲ್‌ಗೆ ನೀಡಿದ ಸಂದರ್ಶನದಲ್ಲಿ, ಹೊಸದಾಗಿ ಆಯ್ಕೆಯಾದ ಮಾರ್ಕ್ ಕಾರ್ನಿ ಸರ್ಕಾರವು ಭಾರತದೊಂದಿಗೆ ಸಂಬಂಧ ಸುಧಾರಿಸಲು ಆಸಕ್ತಿ ಹೊಂದಿದೆ ಎಂದು ಹೇಳಿದ್ದಾರೆ.

ಆದರೆ, ಕೆನಡಾ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹದಗೆಡಿಸಿದೆ ಎಂದು ಅಂಕಿತಾ ಆನಂದ್ ಒಪ್ಪಿಕೊಂಡಿದ್ದಾರೆ.

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ನರೇಂದ್ರ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಟ್ರುಡೊ ಅವರ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಆದರೆ, ಈ ವಿಚಾರ ಎರಡೂ ರಾಷ್ಟ್ರಗಳ ಸಂಬಂಧ ಹದೆಗೆಡಿಸಿದೆ.

ಪ್ಯಾಲೆಸ್ತೀನಿಯನ್ನರ ನೆರವು ವಿತರಣಾ ಸ್ಥಳದ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 30 ಜನ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...