Homeಮುಖಪುಟಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌...

ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

- Advertisement -
- Advertisement -

ಪ್ರಧಾನಿ ಮೋದಿ ಅವರು ಅದಾನಿಗೆ ಸಂಬಂಧಿಸಿದ 16 ಲಕ್ಷ ಕೋಟಿ ರೂಪಾಯಿಗಳನ್ನು ಮನ್ನಾ ಮಾಡಿದ್ದಾರೆ, ಇದು 20 ವರ್ಷಗಳ NREGA ನಿಧಿಗೆ ಸಮಾನವಾಗಿದೆ ಎಂದು ರಾಹುಲ್ ಗಾಂಧಿ ಗ್ವಾಲಿಯರ್‌ನಲ್ಲಿ ಮೋದಿ ಸರಕಾರದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆಯ 50ನೇ ದಿನದಲ್ಲಿ ರಾಹುಲ್ ಗಾಂಧಿ, ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಅಗ್ನಿವೀರರು ಮತ್ತು ಮಾಜಿ ಸೈನಿಕರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಮೊಬೈಲ್, ಲ್ಯಾಪ್‌ಟಾಪ್ ಇತ್ಯಾದಿಗಳಿಗೆ ಉತ್ತಮ ಬೆಲೆಯನ್ನು ನೀಡುವ ಭರವಸೆಯನ್ನು ಪ್ರಧಾನಿ ನೀಡುತ್ತಾರೆ.  ಆದರೆ, ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಕೇಳಿದಾಗ, ಮೋದಿ ರಸ್ತೆ ತಡೆಗಳನ್ನು ಮಾಡುತ್ತಾರೆ ಮತ್ತು ಪೊಲೀಸ್‌ ಬಲವನ್ನು ಬಳಸುತ್ತಾರೆ ಎಂದು ಹೇಳಿದ್ದಾರೆ.

ಕೆಲವು ಕೋಟ್ಯಾಧಿಪತಿ ಕಾರ್ಪೊರೇಟ್‌ಗಳ ಕೈಯಲ್ಲಿ ಮಾದ್ಯಮಗಳಿದೆ. ನೀವು ಮಾದ್ಯಮ ಮಾಲಕರು ಮತ್ತು ಕಾರ್ಪೊರೇಟ್ ಜನರ ಪಟ್ಟಿಯನ್ನು ತೆಗೆದುಕೊಂಡರೆ ನೀವು ಮೇಲ್ವರ್ಗದವರನ್ನು ಮಾತ್ರ ನೋಡುತ್ತೀರಿ, ಆದರೆ ರಸ್ತೆ ಮಾಡುವವರು, ನಿರ್ಮಾಣ ಕಾರ್ಮಿಕರ ಪಟ್ಟಿಯನ್ನು ತೆಗೆದುಕೊಂಡು ಅವರು ಯಾವ ಜಾತಿಯವರು ಎಂದು ಕೇಳುತ್ತೇನೆ ಎಂದು ರಾಹುಲ್ ಗ್ವಾಲಿಯರ್‌ನಲ್ಲಿ ಹೇಳಿದ್ದಾರೆ.

ಆರ್ಥಿಕ, ಸಾಮಾಜಿಕ ಅನ್ಯಾಯ ದ್ವೇಷವನ್ನು ಸೃಷ್ಟಿಸುತ್ತದೆ. ಅದಕ್ಕಾಗಿಯೇ ನಾವು ನಮ್ಮ ಯಾತ್ರೆಯಲ್ಲಿ ನ್ಯಾಯವನ್ನು ಸೇರಿಸಿದ್ದೇವೆ. ನಿರುದ್ಯೋಗವು 40 ವರ್ಷಗಳ ನಂತರ ಅತ್ಯಧಿಕವಾಗಿದೆ, ಇದು ಭೂತಾನ್ ಮತ್ತು ಬಾಂಗ್ಲಾದೇಶಕ್ಕಿಂತ ಹೆಚ್ಚಾಗಿದೆ. ದಲಿತರು, ಒಬಿಸಿಗಳು, ಆದಿವಾಸಿಗಳು ಶೇ.73ರಷ್ಟಿದ್ದು, ವಿವಿಧ ಕ್ಷೇತ್ರಗಳಲ್ಲಿ ಅವರ ಪ್ರಾತಿನಿಧ್ಯವನ್ನು ನೋಡಿದಾಗ ಸಾಮಾಜಿಕ ಅನ್ಯಾಯ ಗೋಚರವಾಗುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಭಾರತ್ ಮಾತೆಯ ಬಗ್ಗೆ ಮಾತನಾಡುತ್ತಾರೆ, ಆದರೆ ಭಾರತ್ ಮಾತಾ ಯಾರು? 73ರಷ್ಟು ಹಿಂದುಳಿದ ಜಾತಿಗಳು ಪ್ರಾತಿನಿಧ್ಯವನ್ನು ಪಡೆಯಬೇಕು ಮತ್ತು ಈ ಬಗ್ಗೆ ನಿಮಗೆ ಅರಿವು ಅತಿಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ರ್ಯಾಲಿಯಲ್ಲಿ ರಾಹುಲ್‌ ಗಾಂಧಿ ಭಾಗವಹಿಸಲಿರುವುದರಿಂದ ಭಾನುವಾರ ಯಾತ್ರೆ ಇರುವುದಿಲ್ಲ. ಪ್ರತಿಪಕ್ಷಗಳ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಗಾಂಧಿ ಪಾಟ್ನಾಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಮಾಧ್ಯಮ ಘಟಕದ ಮುಖ್ಯಸ್ಥ ಕೆಕೆ ಮಿಶ್ರಾ ತಿಳಿಸಿದ್ದರು. ಸೋಮವಾರ ಮಧ್ಯಪ್ರದೇಶದಲ್ಲಿ ಯಾತ್ರೆ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಮಣಿಪುರದಿಂದ ಆರಂಭವಾಗಿದ್ದು 15 ರಾಜ್ಯಗಳ ಮೂಲಕ 6,700 ಕಿಲೋಮೀಟರ್‌ಗಳಷ್ಟು ಸಾಗಿ ಮುಂಬೈನಲ್ಲಿ ಸಮಾಪ್ತಿಯಾಗಲಿದೆ.

ಇದನ್ನು ಓದಿ: 33 ಕ್ಷೇತ್ರಗಳಲ್ಲಿ ಹಾಲಿ ಸಂಸದರ ಬದಲಿಗೆ ಹೊಸ ಮುಖಗಳಿಗೆ ಮಣೆ ಹಾಕಿದ ಬಿಜೆಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...