Homeಮುಖಪುಟಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ, ಒಪ್ಪುವಂತದಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ ಪ್ರಧಾನಿ ಮೋದಿ ಹಾಗೂ ಒಕ್ಕೂಟ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಣಿಪುರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಕೆಲ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಮಣಿಪುರದ ಮಾಜಿ ರಾಜ್ಯಪಾಲೆ ಅನುಸೂಯಾ ಉಯಿಕೆ ಅವರು ಅಲ್ಲಿನ ಜನರ ಪರ ಧ್ವನಿ ಎತ್ತಿದ್ದಾರೆ. “ಸಂಘರ್ಷ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ” ಎಂದು ಹೇಳಿದ್ದಾರೆ ಎಂಬುವುದಾಗಿ ಖರ್ಗೆ ಬರೆದುಕೊಂಡಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದ್ದರೂ, ಮೋದಿ-ಶಾ ಸಹಭಾಗಿತ್ವದ ಪರಿಣಾಮಗಳನ್ನು ಜನರು ಅನುಭವಿಸುತ್ತಿದ್ದರೂ, ಕಳೆದ 16 ತಿಂಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಸೆಕೆಂಡ್ ಅನ್ನು ಕೂಡ ಮಣಿಪುರದಲ್ಲಿ ಕಳೆದಿಲ್ಲ. ಮಣಿಪುರದ ಬಿಜೆಪಿ ಸಿಎಂ ರಾಜ್ಯಕ್ಕೆ ಸೇನೆಯನ್ನು ಆಹ್ವಾನಿಸಿದ್ದಾರೆ. ಈ ಮೂಲಕ ತನ್ನ ಸ್ಥಾನದ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ತೋರ್ಪಡಿಸಿದ್ದಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ಏಕೀಕೃತ ಕಮಾಂಡ್ ಮಣಿಪುರದಲ್ಲಿ ಭದ್ರತಾ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಪ್ರಸ್ತುತ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ರಾಜ್ಯ ಭದ್ರತಾ ಸಲಹೆಗಾರರು ಮತ್ತು ಭಾರತೀಯ ಸೇನೆಯ ತಂಡವು ಅಲ್ಲಿನ ಭದ್ರತೆ ನೋಡಿಕೊಳ್ಳುತ್ತಿದೆ. ಪ್ರಧಾನಮಂತ್ರಿಯವರಂತೆಯೇ, ಕೇಂದ್ರ ಗೃಹ ಸಚಿವರೂ ಕೂಡ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ. ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಅವರು ನಿರತರಾಗಿದ್ದಾರೆ” ಎಂದು ಹೇಳಿದ್ದಾರೆ.

“ಡ್ರೋನ್ ಮತ್ತು ರಾಕೆಟ್-ಚಾಲಿತ ಗ್ರೆನೇಡ್ ದಾಳಿಗಳು ಪ್ರಾರಂಭವಾಗಿವೆ. ಇದು ಈಗ ರಾಷ್ಟ್ರೀಯ ಭದ್ರತೆಯ ಬೆದರಿಕೆಯಾಗಿ ಬದಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬಿಜೆಪಿ ರಾಜೀನಾಮೆ ನಾಟಕವಾಡುತ್ತಿದೆ” ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ನಾಲ್ಕು ಬೇಡಿಕೆಗಳನ್ನು ಮಲ್ಲಿಕಾರ್ಜುನ ಖರ್ಗೆ ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳು ಹೀಗಿವೆ…

1.ಮಣಿಪುರ ಸಿಎಂ ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು

2. ಕೇಂದ್ರ ಸರ್ಕಾರ ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಾಜ್ಯ ಪಡೆಗಳ ಸಹಾಯದಿಂದ ಎಲ್ಲಾ ರೀತಿಯ ದಂಗೆಕೋರ ಗುಂಪುಗಳನ್ನು ದಮನ ಮಾಡಬೇಕು.

3. ಜನಾಂಗೀಯ ಹಿಂಸಾಚಾರದ ತನಿಖೆಗೆ ಆಯೋಗ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ, ಎನ್‌ಐಎ ಮತ್ತು ಇತರ ಏಜೆನ್ಸಿಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳಬಾರದು.

4. ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಮತ್ತು ಸಮುದಾಯಗಳ ಸದಸ್ಯರ ಸಮಿತಿ ಮಂಡಳಿ ರಚಿಸಬೇಕು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ಸಹಜ ಸ್ಥಿತಿಯನ್ನು ಮರಳಿ ತರಬೇಕು. ಈ ಪ್ರಯತ್ನಗಳು ತಕ್ಷಣ ಪ್ರಾರಂಭಿಸಬೇಕು.

ರಾಜ್ಯದಲ್ಲಿ ಹಿಂಸಾಚಾರ ಕೊನೆಗೊಳಿಸಲು ಮೋದಿಯವರು ಏಕೆ ಮುಂದಾಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ದೇಶದ ರಾಜಕೀಯದಲ್ಲಿ ಪ್ರೀತಿ, ಗೌರವ, ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...