Homeಮುಖಪುಟಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ, ಒಪ್ಪುವಂತದಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ ಪ್ರಧಾನಿ ಮೋದಿ ಹಾಗೂ ಒಕ್ಕೂಟ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಣಿಪುರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಕೆಲ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಮಣಿಪುರದ ಮಾಜಿ ರಾಜ್ಯಪಾಲೆ ಅನುಸೂಯಾ ಉಯಿಕೆ ಅವರು ಅಲ್ಲಿನ ಜನರ ಪರ ಧ್ವನಿ ಎತ್ತಿದ್ದಾರೆ. “ಸಂಘರ್ಷ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ” ಎಂದು ಹೇಳಿದ್ದಾರೆ ಎಂಬುವುದಾಗಿ ಖರ್ಗೆ ಬರೆದುಕೊಂಡಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದ್ದರೂ, ಮೋದಿ-ಶಾ ಸಹಭಾಗಿತ್ವದ ಪರಿಣಾಮಗಳನ್ನು ಜನರು ಅನುಭವಿಸುತ್ತಿದ್ದರೂ, ಕಳೆದ 16 ತಿಂಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಸೆಕೆಂಡ್ ಅನ್ನು ಕೂಡ ಮಣಿಪುರದಲ್ಲಿ ಕಳೆದಿಲ್ಲ. ಮಣಿಪುರದ ಬಿಜೆಪಿ ಸಿಎಂ ರಾಜ್ಯಕ್ಕೆ ಸೇನೆಯನ್ನು ಆಹ್ವಾನಿಸಿದ್ದಾರೆ. ಈ ಮೂಲಕ ತನ್ನ ಸ್ಥಾನದ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ತೋರ್ಪಡಿಸಿದ್ದಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ಏಕೀಕೃತ ಕಮಾಂಡ್ ಮಣಿಪುರದಲ್ಲಿ ಭದ್ರತಾ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಪ್ರಸ್ತುತ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ರಾಜ್ಯ ಭದ್ರತಾ ಸಲಹೆಗಾರರು ಮತ್ತು ಭಾರತೀಯ ಸೇನೆಯ ತಂಡವು ಅಲ್ಲಿನ ಭದ್ರತೆ ನೋಡಿಕೊಳ್ಳುತ್ತಿದೆ. ಪ್ರಧಾನಮಂತ್ರಿಯವರಂತೆಯೇ, ಕೇಂದ್ರ ಗೃಹ ಸಚಿವರೂ ಕೂಡ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ. ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಅವರು ನಿರತರಾಗಿದ್ದಾರೆ” ಎಂದು ಹೇಳಿದ್ದಾರೆ.

“ಡ್ರೋನ್ ಮತ್ತು ರಾಕೆಟ್-ಚಾಲಿತ ಗ್ರೆನೇಡ್ ದಾಳಿಗಳು ಪ್ರಾರಂಭವಾಗಿವೆ. ಇದು ಈಗ ರಾಷ್ಟ್ರೀಯ ಭದ್ರತೆಯ ಬೆದರಿಕೆಯಾಗಿ ಬದಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬಿಜೆಪಿ ರಾಜೀನಾಮೆ ನಾಟಕವಾಡುತ್ತಿದೆ” ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ನಾಲ್ಕು ಬೇಡಿಕೆಗಳನ್ನು ಮಲ್ಲಿಕಾರ್ಜುನ ಖರ್ಗೆ ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳು ಹೀಗಿವೆ…

1.ಮಣಿಪುರ ಸಿಎಂ ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು

2. ಕೇಂದ್ರ ಸರ್ಕಾರ ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಾಜ್ಯ ಪಡೆಗಳ ಸಹಾಯದಿಂದ ಎಲ್ಲಾ ರೀತಿಯ ದಂಗೆಕೋರ ಗುಂಪುಗಳನ್ನು ದಮನ ಮಾಡಬೇಕು.

3. ಜನಾಂಗೀಯ ಹಿಂಸಾಚಾರದ ತನಿಖೆಗೆ ಆಯೋಗ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ, ಎನ್‌ಐಎ ಮತ್ತು ಇತರ ಏಜೆನ್ಸಿಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳಬಾರದು.

4. ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಮತ್ತು ಸಮುದಾಯಗಳ ಸದಸ್ಯರ ಸಮಿತಿ ಮಂಡಳಿ ರಚಿಸಬೇಕು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ಸಹಜ ಸ್ಥಿತಿಯನ್ನು ಮರಳಿ ತರಬೇಕು. ಈ ಪ್ರಯತ್ನಗಳು ತಕ್ಷಣ ಪ್ರಾರಂಭಿಸಬೇಕು.

ರಾಜ್ಯದಲ್ಲಿ ಹಿಂಸಾಚಾರ ಕೊನೆಗೊಳಿಸಲು ಮೋದಿಯವರು ಏಕೆ ಮುಂದಾಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ದೇಶದ ರಾಜಕೀಯದಲ್ಲಿ ಪ್ರೀತಿ, ಗೌರವ, ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...