Homeಮುಖಪುಟಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ : ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಮಣಿಪುರದ ವಿಚಾರದಲ್ಲಿ ಪ್ರಧಾನಿ ಮೋದಿಯವರ ವೈಫಲ್ಯ ಅಕ್ಷಮ್ಯ, ಒಪ್ಪುವಂತದಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ ಪ್ರಧಾನಿ ಮೋದಿ ಹಾಗೂ ಒಕ್ಕೂಟ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಣಿಪುರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷದ ಕೆಲ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಮಣಿಪುರದ ಮಾಜಿ ರಾಜ್ಯಪಾಲೆ ಅನುಸೂಯಾ ಉಯಿಕೆ ಅವರು ಅಲ್ಲಿನ ಜನರ ಪರ ಧ್ವನಿ ಎತ್ತಿದ್ದಾರೆ. “ಸಂಘರ್ಷ ಪೀಡಿತ ರಾಜ್ಯದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ದುಃಖಿತರಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ಭೇಟಿಯಾಗಬೇಕೆಂದು ಅವರು ಬಯಸಿದ್ದಾರೆ” ಎಂದು ಹೇಳಿದ್ದಾರೆ ಎಂಬುವುದಾಗಿ ಖರ್ಗೆ ಬರೆದುಕೊಂಡಿದ್ದಾರೆ.

“ಮಣಿಪುರದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದ್ದರೂ, ಮೋದಿ-ಶಾ ಸಹಭಾಗಿತ್ವದ ಪರಿಣಾಮಗಳನ್ನು ಜನರು ಅನುಭವಿಸುತ್ತಿದ್ದರೂ, ಕಳೆದ 16 ತಿಂಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಸೆಕೆಂಡ್ ಅನ್ನು ಕೂಡ ಮಣಿಪುರದಲ್ಲಿ ಕಳೆದಿಲ್ಲ. ಮಣಿಪುರದ ಬಿಜೆಪಿ ಸಿಎಂ ರಾಜ್ಯಕ್ಕೆ ಸೇನೆಯನ್ನು ಆಹ್ವಾನಿಸಿದ್ದಾರೆ. ಈ ಮೂಲಕ ತನ್ನ ಸ್ಥಾನದ ಅಸಮರ್ಥತೆಯನ್ನು ನಾಚಿಕೆಯಿಲ್ಲದೆ ತೋರ್ಪಡಿಸಿದ್ದಾರೆ” ಎಂದು ಖರ್ಗೆ ಕಿಡಿಕಾರಿದ್ದಾರೆ.

“ಏಕೀಕೃತ ಕಮಾಂಡ್ ಮಣಿಪುರದಲ್ಲಿ ಭದ್ರತಾ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದೆ. ಪ್ರಸ್ತುತ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ರಾಜ್ಯ ಭದ್ರತಾ ಸಲಹೆಗಾರರು ಮತ್ತು ಭಾರತೀಯ ಸೇನೆಯ ತಂಡವು ಅಲ್ಲಿನ ಭದ್ರತೆ ನೋಡಿಕೊಳ್ಳುತ್ತಿದೆ. ಪ್ರಧಾನಮಂತ್ರಿಯವರಂತೆಯೇ, ಕೇಂದ್ರ ಗೃಹ ಸಚಿವರೂ ಕೂಡ ಮಣಿಪುರದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಬಿಟ್ಟುಕೊಟ್ಟಿದ್ದಾರೆ. ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಅವರು ನಿರತರಾಗಿದ್ದಾರೆ” ಎಂದು ಹೇಳಿದ್ದಾರೆ.

“ಡ್ರೋನ್ ಮತ್ತು ರಾಕೆಟ್-ಚಾಲಿತ ಗ್ರೆನೇಡ್ ದಾಳಿಗಳು ಪ್ರಾರಂಭವಾಗಿವೆ. ಇದು ಈಗ ರಾಷ್ಟ್ರೀಯ ಭದ್ರತೆಯ ಬೆದರಿಕೆಯಾಗಿ ಬದಲಾಗಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಬಿಜೆಪಿ ರಾಜೀನಾಮೆ ನಾಟಕವಾಡುತ್ತಿದೆ” ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ವತಿಯಿಂದ ನಾಲ್ಕು ಬೇಡಿಕೆಗಳನ್ನು ಮಲ್ಲಿಕಾರ್ಜುನ ಖರ್ಗೆ ಒಕ್ಕೂಟ ಸರ್ಕಾರದ ಮುಂದಿಟ್ಟಿದ್ದಾರೆ. ಅವುಗಳು ಹೀಗಿವೆ…

1.ಮಣಿಪುರ ಸಿಎಂ ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು

2. ಕೇಂದ್ರ ಸರ್ಕಾರ ಸೂಕ್ಷ್ಮ ಭದ್ರತಾ ಪರಿಸ್ಥಿತಿಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಾಜ್ಯ ಪಡೆಗಳ ಸಹಾಯದಿಂದ ಎಲ್ಲಾ ರೀತಿಯ ದಂಗೆಕೋರ ಗುಂಪುಗಳನ್ನು ದಮನ ಮಾಡಬೇಕು.

3. ಜನಾಂಗೀಯ ಹಿಂಸಾಚಾರದ ತನಿಖೆಗೆ ಆಯೋಗ ರಚಿಸಬೇಕು ಮತ್ತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಮಾಡಬೇಕು. ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ, ಎನ್‌ಐಎ ಮತ್ತು ಇತರ ಏಜೆನ್ಸಿಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳಬಾರದು.

4. ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಮತ್ತು ಸಮುದಾಯಗಳ ಸದಸ್ಯರ ಸಮಿತಿ ಮಂಡಳಿ ರಚಿಸಬೇಕು. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ಸಹಜ ಸ್ಥಿತಿಯನ್ನು ಮರಳಿ ತರಬೇಕು. ಈ ಪ್ರಯತ್ನಗಳು ತಕ್ಷಣ ಪ್ರಾರಂಭಿಸಬೇಕು.

ರಾಜ್ಯದಲ್ಲಿ ಹಿಂಸಾಚಾರ ಕೊನೆಗೊಳಿಸಲು ಮೋದಿಯವರು ಏಕೆ ಮುಂದಾಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಳುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ದೇಶದ ರಾಜಕೀಯದಲ್ಲಿ ಪ್ರೀತಿ, ಗೌರವ, ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...