Homeಮುಖಪುಟ'ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ': ರಾಹುಲ್‌...

‘ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ’: ರಾಹುಲ್‌ ಗಾಂಧಿ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,  ಚುನಾವಣಾ ಬಾಂಡ್‌ ವಿಶ್ವದ ಅತಿದೊಡ್ಡ ಸುಲಿಗೆ ದಂಧೆ ಮತ್ತು ವಿಶ್ವದ ಅತಿದೊಡ್ಡ ಹಗರಣ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹಲ್‌ ಗಾಂಧಿ, ಮೋದಿ ಅವರು ಇತ್ತೀಚೆಗೆ ಸುದ್ದಿ ಸಂಸ್ಥೆ ANIಗೆ ನೀಡಿದ ಸಂದರ್ಶನವನ್ನು ಉಲ್ಲೇಖಿಸಿದ್ದಾರೆ, ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸುವಾಗ ಪ್ರಧಾನಿ ಹೆದರುತ್ತಿದ್ದರು, ಇದನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳು ವ್ಯಕ್ತಿಗಳು ಮತ್ತು ಕಂಪೆನಿಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ನೀಡಲು ಅವಕಾಶ ಮಾಡಿಕೊಟ್ಟವು ಎಂದು ಹೇಳಿದ್ದಾರೆ.

ಒಂದೂವರೆ ಗಂಟೆಗಳ ಸಂದರ್ಶನದಲ್ಲಿ ಅವರು ಚುನಾವಣಾ ಬಾಂಡ್‌ಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ಪ್ರಯತ್ನಿಸಿದರು. ಚುನಾವಣಾ ಬಾಂಡ್‌ಗಳ ಬಗ್ಗೆ ಮಾತನಾಡುವಾಗ ಅವರ ಕೈಗಳು ನಡುಗುತ್ತಿದ್ದವು. ಏಕೆಂದರೆ ಎಲೆಕ್ಟೋರಲ್ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ ಹಗರಣವಾಗಿದೆ ಎಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಪ್ರಚಾರ ನಡೆಸುತ್ತಿದ್ದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ಪರಿಚಯಿಸಿದಾಗ, ಇದು ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಬಿಜೆಪಿ ಸರ್ಕಾರವು ದಾನಿಗಳ ವಿವರಗಳನ್ನು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ದೇಣಿಗೆಗಳ ಸಂಖ್ಯೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೊದಲು ಮರೆಮಾಚಿತ್ತು. ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದಾಗ, ಕಂಪನಿಯೊಂದು ಸರ್ಕಾರಿ ಗುತ್ತಿಗೆಯನ್ನು ಪಡೆದುಕೊಂಡ ನಂತರ ಮರುದಿನವೇ ಚುನಾವಣಾ ಬಾಂಡ್‌ಗಳ ಮೂಲಕ (ಬಿಜೆಪಿಗೆ) ಕೋಟಿಗಳನ್ನು ನೀಡಿದೆ ಎಂದು ತೋರಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಜಾರಿ ಇಲಾಖೆ (ಇಡಿ) ತನಿಖೆಯನ್ನು ನಡೆಸುತ್ತಿರುವ ಆರೋಪಿತ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದರು ಮತ್ತು ಆ ಬಳಿಕ ತನಿಖೆ ನೆನೆಗುದಿಗೆ ಬಿದ್ದಿದೆ. ಸಣ್ಣ ಪುಂಡರು ಇಂತಹ ಕೆಲಸಗಳನ್ನು ಮಾಡುತ್ತಾರೆ, ಯಾರನ್ನಾದರೂ ಬೆದರಿಸಿ ಹಣ ಪಡೆಯುತ್ತಾರೆ. ಸರ್ಕಾರ ಕಂಪೆನಿಗಳಿಗೆ ಬೆದರಿಕೆ ಹಾಕಿ ಹಣ ಪಡೆದಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ಮಹಿಳೆಯರಿಗೆ ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದೇವೆ. ದಿನದ 24 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಮೋದಿ ಸರಕಾರ ಶ್ರೀಮಂತರ ಕೋಟ್ಯಂತರ ರೂ.ಸಾಲಮನ್ನಾ ಮಾಡಿದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವುದಿಲ್ಲ ಏಕೆ? ಎಂದು ಪ್ರಶ್ನಿಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...