Homeಮುಖಪುಟ'ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ': ರಾಹುಲ್‌...

‘ಚುನಾವಣಾ ಬಾಂಡ್‌ ಬಗ್ಗೆ ಮಾತನಾಡುವಾಗ ಮೋದಿಯ ಕೈ ನಡುಗುತ್ತಿತ್ತು, ಇದು ದೇಶದ ಅತಿದೊಡ್ಡ ಹಗರಣ’: ರಾಹುಲ್‌ ಗಾಂಧಿ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ,  ಚುನಾವಣಾ ಬಾಂಡ್‌ ವಿಶ್ವದ ಅತಿದೊಡ್ಡ ಸುಲಿಗೆ ದಂಧೆ ಮತ್ತು ವಿಶ್ವದ ಅತಿದೊಡ್ಡ ಹಗರಣ ಎಂದು ಹೇಳಿದ್ದಾರೆ.

ಮಂಡ್ಯದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹಲ್‌ ಗಾಂಧಿ, ಮೋದಿ ಅವರು ಇತ್ತೀಚೆಗೆ ಸುದ್ದಿ ಸಂಸ್ಥೆ ANIಗೆ ನೀಡಿದ ಸಂದರ್ಶನವನ್ನು ಉಲ್ಲೇಖಿಸಿದ್ದಾರೆ, ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸುವಾಗ ಪ್ರಧಾನಿ ಹೆದರುತ್ತಿದ್ದರು, ಇದನ್ನು ಸುಪ್ರೀಂಕೋರ್ಟ್ ಅಸಂವಿಧಾನಿಕ ಎಂದು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ಗಳು ವ್ಯಕ್ತಿಗಳು ಮತ್ತು ಕಂಪೆನಿಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ನೀಡಲು ಅವಕಾಶ ಮಾಡಿಕೊಟ್ಟವು ಎಂದು ಹೇಳಿದ್ದಾರೆ.

ಒಂದೂವರೆ ಗಂಟೆಗಳ ಸಂದರ್ಶನದಲ್ಲಿ ಅವರು ಚುನಾವಣಾ ಬಾಂಡ್‌ಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಲು ಪ್ರಯತ್ನಿಸಿದರು. ಚುನಾವಣಾ ಬಾಂಡ್‌ಗಳ ಬಗ್ಗೆ ಮಾತನಾಡುವಾಗ ಅವರ ಕೈಗಳು ನಡುಗುತ್ತಿದ್ದವು. ಏಕೆಂದರೆ ಎಲೆಕ್ಟೋರಲ್ ಬಾಂಡ್ ಯೋಜನೆಯು ವಿಶ್ವದ ಅತಿದೊಡ್ಡ ಹಗರಣವಾಗಿದೆ ಎಂದು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಪ್ರಚಾರ ನಡೆಸುತ್ತಿದ್ದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ಪರಿಚಯಿಸಿದಾಗ, ಇದು ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಬಿಜೆಪಿ ಸರ್ಕಾರವು ದಾನಿಗಳ ವಿವರಗಳನ್ನು ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ದೇಣಿಗೆಗಳ ಸಂಖ್ಯೆಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೊದಲು ಮರೆಮಾಚಿತ್ತು. ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದಾಗ, ಕಂಪನಿಯೊಂದು ಸರ್ಕಾರಿ ಗುತ್ತಿಗೆಯನ್ನು ಪಡೆದುಕೊಂಡ ನಂತರ ಮರುದಿನವೇ ಚುನಾವಣಾ ಬಾಂಡ್‌ಗಳ ಮೂಲಕ (ಬಿಜೆಪಿಗೆ) ಕೋಟಿಗಳನ್ನು ನೀಡಿದೆ ಎಂದು ತೋರಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಜಾರಿ ಇಲಾಖೆ (ಇಡಿ) ತನಿಖೆಯನ್ನು ನಡೆಸುತ್ತಿರುವ ಆರೋಪಿತ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದರು ಮತ್ತು ಆ ಬಳಿಕ ತನಿಖೆ ನೆನೆಗುದಿಗೆ ಬಿದ್ದಿದೆ. ಸಣ್ಣ ಪುಂಡರು ಇಂತಹ ಕೆಲಸಗಳನ್ನು ಮಾಡುತ್ತಾರೆ, ಯಾರನ್ನಾದರೂ ಬೆದರಿಸಿ ಹಣ ಪಡೆಯುತ್ತಾರೆ. ಸರ್ಕಾರ ಕಂಪೆನಿಗಳಿಗೆ ಬೆದರಿಕೆ ಹಾಕಿ ಹಣ ಪಡೆದಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ಮಹಿಳೆಯರಿಗೆ ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದೇವೆ. ದಿನದ 24 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಮೋದಿ ಸರಕಾರ ಶ್ರೀಮಂತರ ಕೋಟ್ಯಂತರ ರೂ.ಸಾಲಮನ್ನಾ ಮಾಡಿದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವುದಿಲ್ಲ ಏಕೆ? ಎಂದು ಪ್ರಶ್ನಿಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಯೋಜನೆಗೆ ಜನಸಾಮಾನ್ಯರ ತೆರಿಗೆಯ ’14 ಕೋಟಿ ರೂ.’ ವ್ಯಯಿಸಿದ್ದ ಮೋದಿ ಸರಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...