Homeಮುಖಪುಟಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ ನಿಧನ; ಗಣ್ಯರ ಸಂತಾಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು (ಡಿಸೆಂಬರ್ 30) ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

“ಈ ಅವಿಸ್ಮರಣೀಯ ಶತಮಾನವು ದೇವರ ಪಾದದ ಮೇಲೆ ನಿಂತಿದೆ” ಎಂದು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.

ತಮ್ಮ ಹೃದಯಸ್ಪರ್ಶಿ ಟಿಪ್ಪಣಿಯಲ್ಲಿ ಮೋದಿ, “ಅಮ್ಮನಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನ ತಪಸ್ವಿಯ ಪ್ರಯಾಣವಾಗಿತ್ತು. ಅವರು ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾಗಿ ಜೀವನ ನಡೆಸಿದವರು” ಎಂದು ಬಣ್ಣಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ಅವರ 100ನೇ ಹುಟ್ಟುಹಬ್ಬದಂದು ನಾನು ಅವರನ್ನು ಭೇಟಿಯಾದಾಗ, ಅವರು ಒಂದು ವಿಷಯವನ್ನು ಹೇಳಿದರು, ಅದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಬುದ್ಧಿವಂತಿಕೆಯಿಂದ ಕೆಲಸ ಮಾಡು, ಪರಿಶುದ್ಧವಾಗಿ ಬದುಕು ಎಂದು ತಿಳಿಸಿದ್ದರು” ಎಂದು ಬರೆದುಕೊಂಡಿದ್ದಾರೆ.

ಹೀರಾಬಾ ಎಂದೂ ಕರೆಯಲ್ಪಡುವ ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ಬಳಿಯ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರಧಾನಮಂತ್ರಿಯವರು ತಮ್ಮ ಗುಜರಾತ್ ಭೇಟಿಗಳ ಸಮಯದಲ್ಲಿ ಅವರೊಂದಿಗೆ ಸಮಯ ಕಳೆಯಲು ನಿಯಮಿತವಾಗಿ ರೈಸನ್‌ಗೆ ಭೇಟಿ ನೀಡುತ್ತಿದ್ದರು.

ಬುಧವಾರ ಬೆಳಗ್ಗೆ ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ, ಹೀರಾಬೆನ್ ಅವರನ್ನು ಸೂಪರ್ ಸ್ಪೆಷಾಲಿಟಿ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಗುರುವಾರ ತಿಳಿಸಿದ್ದರು. ಗುಜರಾತ್ ಮುಖ್ಯಮಂತ್ರಿ ಕಚೇರಿ (ಸಿಎಂಒ) ಕೂಡ ಹೇಳಿಕೆಯಲ್ಲಿ ಹೀರಾಬೆನ್ ಅವರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದಿತ್ತು.

ಗುರುವಾರ ಮುಂಜಾನೆ ಗುಜರಾತ್‌ನ ವಡೋದರಾದ ‘ಧರ್ಮಯಾತ್ರೆ ಮಹಾಸಂಘ’ದ ಜನರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಇದರ ನಡುವೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮೂಲಗಳ ಪ್ರಕಾರ ಪ್ರಧಾನಿ ಮೋದಿಯವರು ಅಹಮದಾಬಾದ್‌ಗೆ ತೆರಳಿದ್ದಾರೆ.

“ಪ್ರಧಾನಿ ಮೋದಿ ಅವರು ಅಹಮದಾಬಾದ್‌ಗೆ ತೆರಳಿದ್ದಾರೆ. ನಿಗದಿತವಾಗಿದ್ದ ಅಭಿವೃದ್ಧಿ ಕಾಮಗಾರಿಗಳು ನಮಾಮಿ ಗಂಗೆ ಮತ್ತು ರಾಷ್ಟ್ರೀಯ ಗಂಗಾ ಕೌನ್ಸಿಲ್‌ನ ಸಭೆಯ ಅಡಿಯಲ್ಲಿ ಯೋಜನೆಯ ಪ್ರಕಾರ ನಡೆಯಲಿದೆ. ಪ್ರಧಾನಿ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಸೇರಿಕೊಳ್ಳುವ ಸಾಧ್ಯತೆ ಇದೆ” ಎಂದಿದ್ದಾರೆ.

ಹೀರಾಬೆನ್ ಮೋದಿ ಅವರ ನಿಧನಕ್ಕೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್‌ನಲ್ಲಿ ಅವರು, “ಗೌರವಾನ್ವಿತ ಪ್ರಧಾನಮಂತ್ರಿಯವರ ತಾಯಿ ಪೂಜ್ಯಾ ಹೀರಾಬಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪೂಜ್ಯ ಹೀರಾಬಾ ಅವರು ಉದಾರತೆ, ಸರಳತೆ, ಕಠಿಣ ಪರಿಶ್ರಮ ಮತ್ತು ಉನ್ನತ ಜೀವನ ಮೌಲ್ಯಗಳ ಪ್ರತಿರೂಪವಾಗಿದ್ದರು. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, “ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಅವರ ನಿಧನದಿಂದ ನನಗೆ ತೀವ್ರ ನೋವಾಗಿದೆ. ತಾಯಿಯ ಸಾವಿನಿಂದಾಗಿ ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯ ಆವರಿಸುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ.

ಹೀರಾಬೆನ್ ಮೋದಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಗೃಹ ಸಚಿವ ಅಮಿತ್ ಶಾ, “ತಾಯಿಯನ್ನು ಕಳೆದುಕೊಂಡ ನೋವು ನಿಸ್ಸಂದೇಹವಾಗಿ ಜಗತ್ತಿನ ಅತೀ ದೊಡ್ಡ ನೋವು” ಎಂದು ಹೇಳಿದ್ದಾರೆ. “ಪ್ರಧಾನಿಯವರ ಗೌರವಾನ್ವಿತ ಮಾತಾಜಿ ಹೀರಾ ಬಾ ಅವರ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ತಾಯಿಯು ಒಬ್ಬ ವ್ಯಕ್ತಿಯ ಮೊದಲ ಸ್ನೇಹಿತ ಮತ್ತು ಶಿಕ್ಷಕಿ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...