Homeಮುಖಪುಟರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

- Advertisement -
- Advertisement -

ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದಕ್ಕೆ 1.62 ಕೋಟಿ ರೂ.ಖರ್ಚು ಆಗಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಇಲಾಖೆ ಉತ್ತರವನ್ನು ನೀಡಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರಕ್ಕೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಮೊದಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ದೇಶಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ವಿವಾದವನ್ನು ಸೃಷ್ಟಿಸಿತ್ತು. ಇದೀಗ ಮೋದಿ ಚಿತ್ರವಿರುವ 3D ಸೆಲ್ಫಿ ಬೂತ್‌ಗಳ ನಿರ್ಮಾಣ ಕಾರ್ಯ ದೇಶದ ಹಲವು ರೈಲ್ವೇ ನಿಲ್ಧಾಣದಲ್ಲಿ ನಡೆಯುತ್ತಿದೆ ಎನ್ನುವುದು ಬಹಿರಂಗವಾಗಿದೆ.

ಮೋದಿ ಅವರ ಚಿತ್ರವಿರುವ ಶಾಶ್ವತ 3D ಸೆಲ್ಫಿ ಬೂತ್‌ಗೆ 6.25 ಲಕ್ಷದವರೆಗೆ ಮತ್ತು ತಾತ್ಕಾಲಿಕ ಸೆಲ್ಫಿ ಬೂತ್‌ಗೆ 1.25 ಲಕ್ಷಗಳವರೆಗೆ ವೆಚ್ಚ ಮಾಡಲಾಗುತ್ತದೆ ಎಂದು ಆರ್‌ಟಿಐ ನೀಡಿರುವ ಮಾಹಿತಿಯು ಬಹಿರಂಗಪಡಿಸಿದೆ.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳುತ್ತದೆ.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಈ ಕುರಿತ ಆರ್‌ಟಿಐ ಅರ್ಜಿಗೆ ಉತ್ತರಿಸಿದ ಉತ್ತರ ರೈಲ್ವೇ ಇಲಾಖೆ, ಪ್ರಧಾನಿಯವರ ಸೆಲ್ಫಿ ಫೋಟೋ ಬೂತ್‌ಗಳನ್ನು ರೈಲ್ವೆ ನಿಲ್ದಾಣಗಳಾದ್ಯಂತ 100 ವಿವಿಧ ಪಾಯಿಂಟ್‌ಗಳಲ್ಲಿ ಸ್ಥಾಪಿಸಲಾಗುವುದು. ಕೆಲವು ನಿಲ್ದಾಣಗಳಲ್ಲಿ ಒಂದಕ್ಕಿಂತ ಹೆಚ್ಚು ಬೂತ್‌ಗಳನ್ನು ಸ್ಥಾಪಿಸಲಾಗುವುದು. ಉದಾಹರಣೆಗೆ ಡೆಹ್ರಾಡೂನ್, ಅಂಬಾಲಾ, ನವದೆಹಲಿ, ಅಮೃತಸರ, ಅಯೋಧ್ಯೆ, ಚಂಡೀಗಢಗಳು ಪ್ರತಿ ನಿಲ್ದಾಣದಲ್ಲಿ 3 ಬೂತ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದೆ.

ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯು ಈ ಬಗ್ಗೆ 8 ಏಜೆನ್ಸಿಗಳಿಗೆ ಸಮಾನವಾಗಿ ಗುತ್ತಿಗೆ ಕೆಲಸವನ್ನು ಹಂಚಲಾಗಿದೆ ಎಂದು ಹೇಳಿದರೆ, ಅಧಿಕಾರಿಗಳು ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಏಜೆನ್ಸಿಗಳ ಹೆಸರು ಅಥವಾ ಒಟ್ಟು ವೆಚ್ಚವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ತಿರುಚ್ಚಿರಾಪಳ್ಳಿ ಜಂಕ್ಷನ್, ತಂಜಾವೂರು ಮತ್ತು ವೆಲ್ಲೂರ್ ಕಂಟೋನ್ಮೆಂಟ್ ಸೇರಿ  11 ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿಯವರ 3D ಸೆಲ್ಫಿ ಫೋಟೋ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ತಿರುಚ್ಚಿರಾಪಳ್ಳಿ ವಿಭಾಗವು RTI ಪ್ರಶ್ನೆಗೆ ಉತ್ತರಿಸಿ ಹೇಳಿದೆ.

ಸೆಲ್ಫಿ ಬೂತ್‌ಗಳ ಸ್ಥಾಪನೆಗೆ ಖರ್ಗೆ ಆಕ್ರೋಶ:

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಿವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸುವುದು ತೆರಿಗೆದಾರರ ಹಣದ ದುರ್ಬಳಕೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ರೈಲ್ವೆ ನಿಲ್ದಾಣಗಳಲ್ಲಿ ಮೋದಿಜಿಯವರ 3D ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಮೂಲಕ ತೆರಿಗೆದಾರರ ಹಣವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರ ಪ್ರಮುಖ ಕಟೌಟ್‌ಗಳಿರುವ 822 ಸೆಲ್ಫಿ ಪಾಯಿಂಟ್‌ಗಳನ್ನು ಅಳವಡಿಸುವಂತೆ ಸಶಸ್ತ್ರ ಪಡೆಗಳಿಗೆ ಆದೇಶ ನೀಡುವ ಮೂಲಕ ದೇಶದ ವೀರ ಸೈನಿಕರ ರಕ್ತ ಮತ್ತು ತ್ಯಾಗವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪೋಸ್ಟ್‌ನಲ್ಲಿ ಆರ್‌ಟಿಐ ಅಡಿಯಲ್ಲಿ ಪಡೆದ ಉತ್ತರದ ಪ್ರತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಅದರಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಅಡಿಯಲ್ಲಿ ತಾತ್ಕಾಲಿಕ ಮತ್ತು ಶಾಶ್ವತ ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸಿರುವ ನಿಲ್ದಾಣಗಳನ್ನು ಪಟ್ಟಿ ಮಾಡಲಾಗಿತ್ತು.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...