Homeಮುಖಪುಟರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ ಸೆಲ್ಫಿ ಬೂತ್‌ ನಿರ್ಮಾಣ: ಸಾರ್ವಜನಿಕ ನಿಧಿ ಬಳಕೆ

- Advertisement -
- Advertisement -

ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಮೋದಿ ಪೋಟೋ ಇರುವ  3D ಸೆಲ್ಫಿ ಬೂತ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದಕ್ಕೆ 1.62 ಕೋಟಿ ರೂ.ಖರ್ಚು ಆಗಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಗೆ ಕೇಂದ್ರ ರೈಲ್ವೆ ಇಲಾಖೆ ಉತ್ತರವನ್ನು ನೀಡಿದ್ದು, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರಕ್ಕೆ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಮೊದಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ದೇಶಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದು ವಿವಾದವನ್ನು ಸೃಷ್ಟಿಸಿತ್ತು. ಇದೀಗ ಮೋದಿ ಚಿತ್ರವಿರುವ 3D ಸೆಲ್ಫಿ ಬೂತ್‌ಗಳ ನಿರ್ಮಾಣ ಕಾರ್ಯ ದೇಶದ ಹಲವು ರೈಲ್ವೇ ನಿಲ್ಧಾಣದಲ್ಲಿ ನಡೆಯುತ್ತಿದೆ ಎನ್ನುವುದು ಬಹಿರಂಗವಾಗಿದೆ.

ಮೋದಿ ಅವರ ಚಿತ್ರವಿರುವ ಶಾಶ್ವತ 3D ಸೆಲ್ಫಿ ಬೂತ್‌ಗೆ 6.25 ಲಕ್ಷದವರೆಗೆ ಮತ್ತು ತಾತ್ಕಾಲಿಕ ಸೆಲ್ಫಿ ಬೂತ್‌ಗೆ 1.25 ಲಕ್ಷಗಳವರೆಗೆ ವೆಚ್ಚ ಮಾಡಲಾಗುತ್ತದೆ ಎಂದು ಆರ್‌ಟಿಐ ನೀಡಿರುವ ಮಾಹಿತಿಯು ಬಹಿರಂಗಪಡಿಸಿದೆ.

ನಿವೃತ್ತ ರೈಲ್ವೇ ಅಧಿಕಾರಿ ಅಜಯ್ ಬೋಸ್ ಅವರು ಆರ್‌ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಸೆಂಟ್ರಲ್ ರೈಲ್ವೇ ಡೆಪ್ಯುಟಿ ಜನರಲ್ ಮ್ಯಾನೇಜರ್ ಅಭಯ್ ಮಿಶ್ರಾ ಅವರು ಪ್ರತಿಕ್ರಿಯಿಸಿದ್ದು, ಮೋದಿ ಅವರ 3ಡಿ ಸೆಲ್ಫಿ ಬೂತ್‌ಗಳನ್ನು ಮುಂಬೈ, ಭೂಸಾವಲ್, ನಾಗಪುರ, ಪುಣೆ ಮತ್ತು ಸೊಲ್ಲಾಪುರಗಳ 50 ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಕಲ್ಯಾಣ್, ನಾಗ್ಪುರ ಮತ್ತು ಬೇತುಲ್ ಸೇರಿದಂತೆ 30 ಕೆಟಗರಿ ಎ ಸ್ಟೇಷನ್‌ಗಳಲ್ಲಿ ತಾತ್ಕಾಲಿಕ ಬೂತ್‌ಗಳನ್ನು ಸ್ಥಾಪಿಸಿದರೆ, ಕರ್ಜತ್, ಲಾತೂರ್ ಮತ್ತು ಕೋಪರ್‌ಗಾಂವ್ ಸೇರಿದಂತೆ 20 ನಿಲ್ದಾಣಗಳಲ್ಲಿ ಶಾಶ್ವತ ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ.

ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ 3D ಸೆಲ್ಫಿ ಬೂತ್‌ಗಳ ತಾತ್ಕಾಲಿಕ ಸ್ಥಾಪನೆಗೆ 1.25 ಲಕ್ಷ ಮತ್ತು  ಶಾಶ್ವತ ಸ್ಥಾಪನೆಗೆ 6.25 ಲಕ್ಷ ದರಗಳನ್ನು ಅನುಮೋದಿಸಿದೆ ಎಂದು RTI ಮಾಹಿತಿಯು ಹೇಳುತ್ತದೆ.

ಕೇಂದ್ರ ರೈಲ್ವೇಯಲ್ಲಿನ ತಾತ್ಕಾಲಿಕ ಮತ್ತು ಶಾಶ್ವತ ಮೋದಿ ಪೋಟೋ ಇರುವ ಬೂತ್‌ಗಳ ನಿರ್ಮಾಣಕ್ಕೆ ಒಟ್ಟು ವೆಚ್ಚ 1.62 ಕೋಟಿ ಆಗಲಿದೆ. ಇದರಲ್ಲಿ ಶಾಶ್ವತ ಪೋಟೋ ಬೂತ್‌ಗಳಿಗೆ 1.25 ಕೋಟಿ ಮತ್ತು ತಾತ್ಕಾಲಿಕವಾಗಿ ಸ್ಥಾಪಿಸಲು 37.5 ಲಕ್ಷ ರೂ.ಆಗಲಿದೆ ಎಂದು ಆರ್‌ಟಿಐ ಮಾಹಿತಿ ಬಹಿರಂಗಪಡಿಸಿದೆ.

ಈ ಕುರಿತ ಆರ್‌ಟಿಐ ಅರ್ಜಿಗೆ ಉತ್ತರಿಸಿದ ಉತ್ತರ ರೈಲ್ವೇ ಇಲಾಖೆ, ಪ್ರಧಾನಿಯವರ ಸೆಲ್ಫಿ ಫೋಟೋ ಬೂತ್‌ಗಳನ್ನು ರೈಲ್ವೆ ನಿಲ್ದಾಣಗಳಾದ್ಯಂತ 100 ವಿವಿಧ ಪಾಯಿಂಟ್‌ಗಳಲ್ಲಿ ಸ್ಥಾಪಿಸಲಾಗುವುದು. ಕೆಲವು ನಿಲ್ದಾಣಗಳಲ್ಲಿ ಒಂದಕ್ಕಿಂತ ಹೆಚ್ಚು ಬೂತ್‌ಗಳನ್ನು ಸ್ಥಾಪಿಸಲಾಗುವುದು. ಉದಾಹರಣೆಗೆ ಡೆಹ್ರಾಡೂನ್, ಅಂಬಾಲಾ, ನವದೆಹಲಿ, ಅಮೃತಸರ, ಅಯೋಧ್ಯೆ, ಚಂಡೀಗಢಗಳು ಪ್ರತಿ ನಿಲ್ದಾಣದಲ್ಲಿ 3 ಬೂತ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದೆ.

ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯು ಈ ಬಗ್ಗೆ 8 ಏಜೆನ್ಸಿಗಳಿಗೆ ಸಮಾನವಾಗಿ ಗುತ್ತಿಗೆ ಕೆಲಸವನ್ನು ಹಂಚಲಾಗಿದೆ ಎಂದು ಹೇಳಿದರೆ, ಅಧಿಕಾರಿಗಳು ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಏಜೆನ್ಸಿಗಳ ಹೆಸರು ಅಥವಾ ಒಟ್ಟು ವೆಚ್ಚವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ತಿರುಚ್ಚಿರಾಪಳ್ಳಿ ಜಂಕ್ಷನ್, ತಂಜಾವೂರು ಮತ್ತು ವೆಲ್ಲೂರ್ ಕಂಟೋನ್ಮೆಂಟ್ ಸೇರಿ  11 ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿಯವರ 3D ಸೆಲ್ಫಿ ಫೋಟೋ ಬೂತ್‌ಗಳನ್ನು ಸ್ಥಾಪಿಸಲಾಗುವುದು ಎಂದು ದಕ್ಷಿಣ ರೈಲ್ವೆಯ ತಿರುಚ್ಚಿರಾಪಳ್ಳಿ ವಿಭಾಗವು RTI ಪ್ರಶ್ನೆಗೆ ಉತ್ತರಿಸಿ ಹೇಳಿದೆ.

ಸೆಲ್ಫಿ ಬೂತ್‌ಗಳ ಸ್ಥಾಪನೆಗೆ ಖರ್ಗೆ ಆಕ್ರೋಶ:

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ಸೆಲ್ಫಿ ಬೂತ್‌ಗಳನ್ನು ರೈಲು ನಿಲ್ದಾಣಗಳಲ್ಲಿ ಸ್ಥಾಪಿಸಿವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸುವುದು ತೆರಿಗೆದಾರರ ಹಣದ ದುರ್ಬಳಕೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರದ ಸ್ವಯಂ ಗೀಳಿನ ಪ್ರಚಾರಕ್ಕೆ ಯಾವುದೇ ಮಿತಿಯಿಲ್ಲ. ರೈಲ್ವೆ ನಿಲ್ದಾಣಗಳಲ್ಲಿ ಮೋದಿಜಿಯವರ 3D ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಮೂಲಕ ತೆರಿಗೆದಾರರ ಹಣವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರ ಪ್ರಮುಖ ಕಟೌಟ್‌ಗಳಿರುವ 822 ಸೆಲ್ಫಿ ಪಾಯಿಂಟ್‌ಗಳನ್ನು ಅಳವಡಿಸುವಂತೆ ಸಶಸ್ತ್ರ ಪಡೆಗಳಿಗೆ ಆದೇಶ ನೀಡುವ ಮೂಲಕ ದೇಶದ ವೀರ ಸೈನಿಕರ ರಕ್ತ ಮತ್ತು ತ್ಯಾಗವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗಿದೆ. ಮೋದಿ ಸರ್ಕಾರವು ರಾಜ್ಯಗಳಿಗೆ ಬರ ಮತ್ತು ಪ್ರವಾಹ ಪರಿಹಾರವನ್ನು ಒದಗಿಸಿಲ್ಲ. ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ MGNREGA ಯೋಜನೆಯ ಹಣದ ಪಾವತಿ ಬಾಕಿ ಉಳಿದಿವೆ. ಆದರೆ ಈ ಕೀಳು ಮಟ್ಟದ ಚುನಾವಣಾ ಪ್ರಚಾರಕ್ಕೆ ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪೋಸ್ಟ್‌ನಲ್ಲಿ ಆರ್‌ಟಿಐ ಅಡಿಯಲ್ಲಿ ಪಡೆದ ಉತ್ತರದ ಪ್ರತಿಯನ್ನು ಕೂಡ ಹಂಚಿಕೊಂಡಿದ್ದಾರೆ. ಅದರಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಅಡಿಯಲ್ಲಿ ತಾತ್ಕಾಲಿಕ ಮತ್ತು ಶಾಶ್ವತ ಸೆಲ್ಫಿ ಬೂತ್‌ಗಳನ್ನು ಸ್ಥಾಪಿಸಿರುವ ನಿಲ್ದಾಣಗಳನ್ನು ಪಟ್ಟಿ ಮಾಡಲಾಗಿತ್ತು.

ಇದನ್ನು ಓದಿ: ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...