Homeಮುಖಪುಟಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ ಎಂದ...

ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ ಎಂದ ಟ್ವಿಟರ್ ವಕ್ತಾರ

@Narendramodi_in ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳ ಕುರಿತು ಮೋದಿಯವರ ಕಚೇರಿ ತಕ್ಷಣ ಸ್ಪಂದಿಸಲಿಲ್ಲ.

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೊದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆಯನ್ನು ಇಂದು ಬೆಳಗಿನ ಜಾವ ಹ್ಯಾಕ್ ಮಾಡಲಾಗಿದೆ. ಈ ಖಾತೆಯ ಭದ್ರತೆಗಾಗಿ ಕ್ರಮತೆಗೆದುಕೊಂಡು, ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಟ್ವಿಟರ್ ವಕ್ತಾರರು ಖಚಿತಪಡಿಸಿದ್ದಾರೆ.

“ಈ ಘಟನೆಯ ಬಗ್ಗೆ ನಮಗೆ ಅರಿವಿದೆ. ಹ್ಯಾಕ್ ಮಾಡಲಾದ ಖಾತೆಯನ್ನು ಭದ್ರಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಂಡಿದ್ದೇವೆ. ಪ್ರಸ್ತುತ ಪರಿಸ್ಥಿತಿಯನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದೇವೆ. ಆದರೆ ಇದು ಹೆಚ್ಚುವರಿ ಖಾತೆಗಳ ಮೇಲೆ ಪರಿಣಾಮ ಬೀರಿದೆಯೇ ಎಂಬುದು ನಮಗೆ ತಿಳಿದುಬಂದಿಲ್ಲ” ಎಂದು ಟ್ವಿಟರ್ ನ ವಕ್ತಾರರೊಬ್ಬರು ಹೇಳಿದ್ದಾರೆಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಜುಲೈ ತಿಂಗಳಿನಲ್ಲಿ, ಹಲವಾರು ಪ್ರಮುಖ ವ್ಯಕ್ತಿಗಳ  ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು. ಇದಾದ ಒಂದು ತಿಂಗಳ ನಂತರ ಈ ಘಟನೆ ಸಂಭವಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ವೆಬ್‌ಸೈಟ್‌ನ ಖಾತೆಯನ್ನು, ಕ್ರಿಪ್ಟೋಕರೆನ್ಸಿಯ ಮೂಲಕ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮೋದಿ ತನ್ನ ಅನುಯಾಯಿಗಳನ್ನು ಕೇಳುವ ಸರಣಿ ಟ್ವೀಟ್‌ಗಳೊಂದಿಗೆ ಹ್ಯಾಕ್ ಮಾಡಲಾಗಿದೆ ಎಂದು ಟ್ವಿಟರ್ ಗುರುವಾರ ದೃಢಪಡಿಸಿದೆ.

ಇದನ್ನೂ ಓದಿ: ವಿಶ್ವ ಹಿಂದೂ ಪರಿಷತ್‌ ವೆಬ್ ಸೈಟ್ ಹ್ಯಾಕ್ ಮಾಡಿ ಮೋದಿ ವಿರುದ್ದ ಹೋರಾಡಲು ಕರೆಕೊಟ್ಟ ಹ್ಯಾಕರ್

@Narendramodi_in ಖಾತೆಯಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳ ಕುರಿತು ಮೋದಿಯವರ ಕಚೇರಿ ತಕ್ಷಣ ಸ್ಪಂದಿಸಲಿಲ್ಲ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಈ ಖಾತೆಯು, ಮೋದಿಯವರ ವೈಯಕ್ತಿಕ ವೆಬ್‌ಸೈಟ್ (https://www.narendramodi.in/) ಮತ್ತು ನರೇಂದ್ರ ಮೋದಿ ಮೊಬೈಲ್ ಅಪ್ಲಿಕೇಶನ್‌, 2.5 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಅಧಿಕೃತ ಟ್ವಿಟರ್ ಹ್ಯಾಂಡಲ್ ಆಗಿದೆ.

ಈ ಘಟನೆಯಿಂದ, ಪ್ರಧಾನಿ ಮೋದಿಯವರ ವೈಯಕ್ತಿಕ ಟ್ವಿಟ್ಟರ್ ಖಾತೆಯಲ್ಲಿ ಯಾವುದೇ ಕೆಟ್ಟ ಪರಿಣಾಮ ಬೀರಿಲ್ಲ. ಈ ಖಾತೆಗೆ ಸುಮಾರು  61 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳಿದ್ದಾರೆ.

ಅಮೇರಿಕಾ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್, ಮಾಜಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮ ಮತ್ತು ಬಿಲಿಯನೇರ್ ಎಲೋನ್ ಮಸ್ಕ್ ಸೇರಿದಂತೆ ಟ್ವಿಟರ್ ನ ಕೆಲವು ಉನ್ನತ ಧ್ವನಿಗಳನ್ನು ಅಪಹರಿಸಲು, ಹ್ಯಾಕರ್ಸ್ ಜುಲೈನಲ್ಲಿ ಟ್ವಿಟ್ಟರ್ ನ ಆಂತರಿಕ ವ್ಯವಸ್ಥೆಗಳನ್ನು ಹ್ಯಾಕ್ ಮಾಡಿ, ಡಿಜಿಟಲ್ ಕರೆನ್ಸಿಯನ್ನು ಕೋರಲು ಅವುಗಳನ್ನು ಬಳಸಿದ್ದರು.


ಇದನ್ನೂ ಓದಿ: ಹ್ಯಾಕರ್ಸ್‍ಗಳ ಕಾಟ : ನಟಿಯರ ಗೋಳಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...