Homeಮುಖಪುಟವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ: ಮಸೀದಿಗೆ ಕೇಸರಿ ಬಣ್ಣ ಬಳಿದ ಅಧಿಕಾರಿಗಳು!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 13 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಲಿದ್ದು, ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮಸೀದಿಗೆ ಸ್ಥಳೀಯ ಅಧಿಕಾರಿಗಳು “ಕೇಸರಿ” ಬಣ್ಣ ಬಳಿದಿದ್ದಾರೆ ಎಂದು ಮಸೀದಿ ಸಮಿತಿಯ ಸದಸ್ಯರು ಹೇಳಿದ್ದಾರೆ.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವ ಆರೋಪಕ್ಕೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡಿಲ್ಲ. ರಸ್ತೆಯಲ್ಲಿರುವ ಎಲ್ಲಾ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತಿದೆ. ಅದು “ತಿಳಿ ಗುಲಾಬಿ” ಬಣ್ಣವಾಗಿದೆ ಎಂದು ಅಧಿಕಾರಿಯೊಬ್ಬರು ಈ ಹಿಂದೆ ಹೇಳಿದ್ದರು.

ಮಸೀದಿಗೆ ಕೇಸರಿ ಬಣ್ಣ ಬಳಿದಿರುವುದಕ್ಕೆ ಮುಸ್ಲಿಂ ಸಮುದಾಯದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ನಂತರ, ಬುಲನಾಳ ಪ್ರದೇಶದಲ್ಲಿ ಇರುವ ಮಸೀದಿಗೆ ಮತ್ತೆ ಬಿಳಿ ಬಣ್ಣ ಬಳಿಯಲಾಗುತ್ತಿದೆ ಎಂದು ವರದಿಯಾಗಿದೆ.

 “ಮಸೀದಿಯು ಮೊದಲು ಬಿಳಿ ಬಣ್ಣದ್ದಾಗಿತ್ತು. ಅದಕ್ಕೆ ಅಧಿಕಾರಿಗಳು ಕೇಸರಿ ಬಣ್ಣ ಬಳಿಸಿದ್ದರು. ಈ ವೇಳೆ ಅವರು ಮಸೀದಿ ಸಮಿತಿಯ ಸಲಹೆಯನ್ನೂ ಪಡೆದಿಲ್ಲ” ಎಂದು ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿಯ ಮೊಹಮ್ಮದ್ ಎಜಾಜ್ ಇಸ್ಲಾಹಿ ಹೇಳಿದ್ದಾರೆ.

ನಮ್ಮ ಅನುಮತಿಯಿಲ್ಲದೆ ಈ ಕೇಸರಿ ಬಣ್ಣ ಬಳಿಯುವ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಿರುವ ಅವರು, ಕಾಶಿ ವಿಶ್ವನಾಥ ದೇವಸ್ಥಾನದ ಕಚೇರಿಗೆ ತಮ್ಮ ಆಕ್ಷೇಪಣೆ ಸಲ್ಲಿಸಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಆಕ್ಷೇಪಣೆಯನ್ನು ಎತ್ತಲು ಪ್ರಯತ್ನಿಸಿದ್ದೆವು. ಆದರೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಇಸ್ಲಾಹಿ ಹೇಳಿದ್ದಾರೆ.

“ನಂತರ, ಸ್ಥಳೀಯ ಆಡಳಿತವು ಇದನ್ನು ಅರ್ಥಮಾಡಿಕೊಂಡಿದೆ. ಈಗ ಮಸೀದಿಗೆ ಬಿಳಿ ಬಣ್ಣ ಬಳಿಯಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ವಾರಣಾಸಿ ಅಭಿವೃದ್ಧಿ ಪ್ರಾಧಿಕಾರದ (ವಿಡಿಎ) ಕಾರ್ಯದರ್ಶಿ ಮತ್ತು ಕಾಶಿ ವಿಶ್ವನಾಥ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ವರ್ಮಾ ಅವರು ಈ ಹಿಂದೆ ದೇಗುಲಕ್ಕೆ ಹೋಗುವ ರಸ್ತೆಯಲ್ಲಿರುವ ಕಟ್ಟಡಗಳಿಗೆ ಏಕರೂಪದ ಬಣ್ಣವನ್ನು ಬಳಿಯಲಾಗುತ್ತದೆ ಎಂದು ಹೇಳಿದ್ದರು ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿನ ಹೆಚ್ಚಿನ ಕಟ್ಟಡಗಳು ಮರಳುಗಲ್ಲಿನಿಂದ ಮಾಡಲ್ಪಟ್ಟಿದೆ. ಇವುಗಳಿಗೆ ಬಳಿದಿರುವ ಬಣ್ಣ “ತಿಳಿ ಗುಲಾಬಿ” ಬಣ್ಣದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕಳೆದ ವರ್ಷ ಸಹ ಪ್ರಯಾಗ್‌ರಾಜ್‌ನ ಸ್ಥಳೀಯ ಅಧಿಕಾರಿಗಳು ಬಿಜೆಪಿ ಪ್ರಚಾರಕ್ಕಾಗಿ ಹಲವಾರು ಮನೆಗಳಿಗೆ ಕೇಸರಿ ಬಣ್ಣ ಬಳಿದಿದ್ದರು. ಇದರಿಂದ ಆಕ್ರೋಶಿತಗೊಂಡ ಸ್ಥಳೀಯರು ಪೊಲೀಸ್ ದೂರು ನೀಡಿದ್ದರು. ನಂತರ ಕೇಸರಿ ಬಣ್ಣದ ಮೇಲೆ ಬೇರೆ ಬಣ್ಣಗಳನ್ನು ಬಳಿಯಲಾಗಿತ್ತು.


ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ವಿರೋಧ ಪಕ್ಷಗಳ ಒಕ್ಕೂಟವಿಲ್ಲ: ಶಿವಸೇನೆ ಮುಖಂಡ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...