Homeಮುಖಪುಟಮೋದಿಯವರ ಮೌನ - ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ.

- Advertisement -
- Advertisement -

ಹತ್ರಾಸ್ ದಲಿತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕುಟುಂಬಕ್ಕೆ ಶವ ಕೊಡದೇ ಇರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಭೀಮ್ ಆರ್ಮಿ ಮುಖ್ಯಸ್ಥರಾದ ಚಂದ್ರಶೇಖರ್ ಆಜಾದ್ ಒತ್ತಾಯಿಸಿದ್ದಾರೆ. ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಆಜಾದ್, ಭಾವನಾತ್ಮಕವಾಗಿ ಮಾತನಾಡಿ, “ಪ್ರಧಾನಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿದ್ದಾರೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಹತ್ರಾಸ್ ಯುವತಿ ಸಾವನ್ನಪ್ಪಿದ ನಂತರ, ಆಜಾದ್ ಮುಂದಾಳತ್ವದಲ್ಲಿ ಭೀಮ್ ಆರ್ಮಿ ಪ್ರತಿಭಟಿಸಿತ್ತು.

“ಮೋದಿಯವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಿದ (ವಾರಣಾಸಿ) ಅದೇ ಉತ್ತರಪ್ರದೇಶದಲ್ಲಿ ಹತ್ರಾಸ್ ಮೂಲದ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಅವಳ ಮೂಳೆಗಳನ್ನು ಮುರಿದು, ಮೃತದೇಹವನ್ನು ಕಸದಂತೆ ಸುಡಲಾಗಿದೆ. ಉತ್ತರಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಾಗ ಪ್ರಧಾನಿ ಒಂದು ಮಾತನ್ನೂ ಆಡುವುದಿಲ್ಲವೇಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

“ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ. ನಿಮ್ಮ ಮೌನ ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಇಂಡಿಯಾ ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಗುಂಪು ಸೇರುವಿಕೆಯನ್ನು ನಿಷೇದಿಸಿರುವುದರಿಂದ ಪ್ರತಿಭಟನೆಯು ಜಂತರ್ ಮಂತರ್‌ಗೆ ಸ್ಥಳಾಂತರಗೊಂಡಿದೆ ಎಂದು ಹೇಳಿದರು.

ಭೀಮ್ ಆರ್ಮಿಯ ಪ್ರತಿಭಟನಾಕಾರರೊಂದಿಗೆ ನೂರಾರು ಕಾರ್ಯಕರ್ತರು ಮತ್ತು ನಾಗರೀಕರು ಸೇರಿಕೊಳ್ಳುವ ನಿರೀಕ್ಷೆಯಿದೆ. ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿತ್ತು. ಇದು ಇಂಡಿಯಾ ಗೇಟ್ ಬಳಿ ಗುಂಪು ಸೇರುವಿಕೆಯ ನಿಷೇದಕ್ಕೆ ಕಾರಣವಾಯಿತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್ ದುರಂತದ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದ ಪ್ರಧಾನ ಮಂತ್ರಿಯನ್ನು ಗುರಿಯಾಗಿಸಿಕೊಂಡು ಆಜಾದ್ ಎರಡು ಬಾರಿ ವಾಗ್ದಾಳಿ ನಡೆಸಿದ್ದರು. “ಪ್ರಧಾನಿ ಯಾಕೆ ಪ್ರತಿಕ್ರಿಯಿಸಲಿಲ್ಲ? ಇನ್ನು ಉತ್ತರಪ್ರದೇಶದಲ್ಲಂತೂ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಆದಿತ್ಯನಾಥ್ ಸರ್ಕಾರವನ್ನು ಟೀಕಿಸಿದರು.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು. ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಿರಲಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...