Homeಮುಖಪುಟಮೋದಿಯವರ ಮೌನ - ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ.

- Advertisement -
- Advertisement -

ಹತ್ರಾಸ್ ದಲಿತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕುಟುಂಬಕ್ಕೆ ಶವ ಕೊಡದೇ ಇರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಭೀಮ್ ಆರ್ಮಿ ಮುಖ್ಯಸ್ಥರಾದ ಚಂದ್ರಶೇಖರ್ ಆಜಾದ್ ಒತ್ತಾಯಿಸಿದ್ದಾರೆ. ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಆಜಾದ್, ಭಾವನಾತ್ಮಕವಾಗಿ ಮಾತನಾಡಿ, “ಪ್ರಧಾನಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿದ್ದಾರೆ. ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಹತ್ರಾಸ್ ಯುವತಿ ಸಾವನ್ನಪ್ಪಿದ ನಂತರ, ಆಜಾದ್ ಮುಂದಾಳತ್ವದಲ್ಲಿ ಭೀಮ್ ಆರ್ಮಿ ಪ್ರತಿಭಟಿಸಿತ್ತು.

“ಮೋದಿಯವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸಿದ (ವಾರಣಾಸಿ) ಅದೇ ಉತ್ತರಪ್ರದೇಶದಲ್ಲಿ ಹತ್ರಾಸ್ ಮೂಲದ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಅವಳ ಮೂಳೆಗಳನ್ನು ಮುರಿದು, ಮೃತದೇಹವನ್ನು ಕಸದಂತೆ ಸುಡಲಾಗಿದೆ. ಉತ್ತರಪ್ರದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಾಗ ಪ್ರಧಾನಿ ಒಂದು ಮಾತನ್ನೂ ಆಡುವುದಿಲ್ಲವೇಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

“ಪ್ರಧಾನಮಂತ್ರಿಗಳೇ, ಅತ್ಯಾಚಾರಕ್ಕೊಳಗಾದ ಯುವತಿಯ ರೋಧನೆ ನಿಮಗೆ ಕೇಳಲಿಲ್ಲವೇ ಅಥವಾ ಆಕೆಯ ಕುಟುಂಬದವರ ರೋಧನೆ ನಿಮಗೆ ತಲುಪಲಿಲ್ಲವೇ? ನೀವು ಇನ್ನೂ ಎಷ್ಟು ದಿನ ಮೌನವಾಗಿರುತ್ತೀರಿ? ನೀವು ಉತ್ತರವನ್ನು ನೀಡಲೇಬೇಕು. ಉತ್ತರ ಕೇಳಲು ಇಂದು ಸಂಜೆ 5 ಗಂಟೆಗೆ ನಾವು ಬರುತ್ತಿದ್ದೇವೆ. ನಿಮ್ಮ ಮೌನ ನಮ್ಮ ಹೆಣ್ಣುಮಕ್ಕಳಿಗೆ ಅಪಾಯ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಆಜಾದ್ ಇಂದು ಸಂಜೆ 5 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆಗೆ ಕರೆ ನೀಡಿದ್ದರು. ಆದರೆ ಇಂಡಿಯಾ ಗೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೊಡ್ಡ ಗುಂಪು ಸೇರುವಿಕೆಯನ್ನು ನಿಷೇದಿಸಿರುವುದರಿಂದ ಪ್ರತಿಭಟನೆಯು ಜಂತರ್ ಮಂತರ್‌ಗೆ ಸ್ಥಳಾಂತರಗೊಂಡಿದೆ ಎಂದು ಹೇಳಿದರು.

ಭೀಮ್ ಆರ್ಮಿಯ ಪ್ರತಿಭಟನಾಕಾರರೊಂದಿಗೆ ನೂರಾರು ಕಾರ್ಯಕರ್ತರು ಮತ್ತು ನಾಗರೀಕರು ಸೇರಿಕೊಳ್ಳುವ ನಿರೀಕ್ಷೆಯಿದೆ. ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿತ್ತು. ಇದು ಇಂಡಿಯಾ ಗೇಟ್ ಬಳಿ ಗುಂಪು ಸೇರುವಿಕೆಯ ನಿಷೇದಕ್ಕೆ ಕಾರಣವಾಯಿತು.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್ ದುರಂತದ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದ ಪ್ರಧಾನ ಮಂತ್ರಿಯನ್ನು ಗುರಿಯಾಗಿಸಿಕೊಂಡು ಆಜಾದ್ ಎರಡು ಬಾರಿ ವಾಗ್ದಾಳಿ ನಡೆಸಿದ್ದರು. “ಪ್ರಧಾನಿ ಯಾಕೆ ಪ್ರತಿಕ್ರಿಯಿಸಲಿಲ್ಲ? ಇನ್ನು ಉತ್ತರಪ್ರದೇಶದಲ್ಲಂತೂ ನ್ಯಾಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ” ಎಂದು ಆದಿತ್ಯನಾಥ್ ಸರ್ಕಾರವನ್ನು ಟೀಕಿಸಿದರು.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಈ ಪ್ರಕರಣದ ನಾಲ್ವರು ಅತ್ಯಾಚಾರ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಲ್ವರು ಆರೋಪಿಗಳಾದ ಸಂದೀಪ್, ರಾಮು, ಲವ ಕುಶ್ ಮತ್ತು ರವಿ ಮೇಲೆ ಸಾಮೂಹಿಕ ಅತ್ಯಾಚಾರ, ಸೆಕ್ಷನ್ 302 (ಕೊಲೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಆರಂಭದಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಿದ್ದ ಪೊಲೀಸರು, ಯುವತಿಯ ಔಪಚಾರಿಕ ಹೇಳಿಕೆಯ ನಂತರವೇ ಅತ್ಯಾಚಾರ ಆರೋಪಗಳನ್ನು ಸೇರಿಸಿದ್ದರು. ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಂತ್ರಸ್ತರ ಮನವಿಗೆ ಸ್ಪಂದಿಸಿರಲಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...