Homeಕರ್ನಾಟಕಪ್ರವಾಹ: ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕು...

ಪ್ರವಾಹ: ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕು – ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದ ಒಂದು ಲಕ್ಷ ಕೋಟಿಗೂ ಅಧಿಕ ಮೌಲ್ಯದ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ರಸ್ತೆ, ಸೇತುವೆ, ರೈಲ್ವೆ ಹಳಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಆಗಿರುವ ಹಾನಿಯನ್ನು ಸರಿಪರಿಸಲು ಹಲವಾರು ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಪ್ರವಾಹದ ಭೀಕರತೆಯನ್ನು ಕಂಡೂ ಕೇಂದ್ರ ಸರ್ಕಾರ ಇನ್ನೂ ಕಣ್ಣುಮುಚ್ಚಿ ಕುಳಿತಿದೆ. ಕೂಡಲೇ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಹಾರ ಕಾರ್ಯಗಳಿಗೆ ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪರಿಹಾರ ಕಾರ್ಯಗಳಿಗೆ ಈಗ ಬಿಡುಗಡೆ ಮಾಡಿರುವ ಮೊತ್ತ ಏನೇನೂ ಸಾಲದು. ಪರಿಹಾರ ಕೊಡಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲು ನಾವೇನೂ ಭಿಕ್ಷುಕರಲ್ಲ ಅಥವಾ ಕೇಂದ್ರ ಸರ್ಕಾರ ನಮಗೆ ದಾನವನ್ನೇನೂ ಕೊಡುತ್ತಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಏನೇನೂ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿಚಾರದಲ್ಲಿ ಅದರಲ್ಲಿಯೂ ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಮಲತಾಯಿ ಧೋರಣೆ ಸಲ್ಲದು. ಇದನ್ನು ಯಾರೂ ಮೆಚ್ಚುವುದಿಲ್ಲ. ರಾಜ್ಯದ ಜನತೆ ಮಾಡಿರುವ ಅನ್ಯಾಯವಾದರೂ ಏನು? 26 ಸಂಸದರನ್ನು ಬಿಜೆಪಿಯಿಂದ ಆಯ್ಕೆ ಮಾಡಿ ಕಳುಹಿಸಿದ್ದು ತಪ್ಪೇ? ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದ ಅವಧಿಯಲ್ಲಿ ಅಂದಿನ ಪ್ರಧಾನಿ ಮನಮೋಹನ ಸಿಂಗ್ ಅವರು ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಭೇಟಿ ಕೊಟ್ಟು, ವೈಮಾನಿಕ ಸಮೀಕ್ಷೆ ನಡೆಸಿ ರೂ.1600 ಕೋಟಿ ಪರಿಹಾರ ಘೋಷಣೆ ಮಾಡಿದ್ದರು ಎಂದಿದ್ದಾರೆ.

ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಮೊದಲೇ ದಿನವೇ ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಆಗ್ರಹಿಸಿದ ರೈತರ ಮೇಲೆ ಗೋಲಿಬಾರ್ ಮಾಡಲಾಗಿತ್ತು. ಮೊನ್ನೆ ಗದಗದಲ್ಲಿ ಕಷ್ಟ ಹೇಳಿಕೊಳ್ಳಲು ಹೋದ ಪ್ರವಾಹ ಸಂತ್ರಸ್ತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಇದಕ್ಕಾಗಿ ಯಡಿಯೂರಪ್ಪ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರವಾಹದಿಂದಾಗಿ ರಾಜ್ಯ ಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಯಾವುದೇ ವಿಷಯದಲ್ಲಿಯೂ ರಾಜಕೀಯ ಬೆರೆಸಿ ಮಾತನಾಡುವುದು ಸರಿಯಲ್ಲ. ಯಡಿಯೂರಪ್ಪ ಅವರು ಏಕ ಪಾತ್ರಾಭಿನಯದ ಮೂಲಕ ಪರಿಸ್ಥಿತಿ ಎದುರಿಸುವುದು ಸುಲಭವಲ್ಲ. ಅದು ಅವರಿಂದ ಸಾಧ್ಯವೂ ಆಗುತ್ತಿಲ್ಲ. ಅವರು ಕೂಡಲೇ ಸಂಪುಟ ವಿಸ್ತರಣೆ ಮಾಡಿ, 20 ಮಂದಿಗೆ ಸಚಿವ ಸ್ಥಾನವನ್ನು ಕೊಟ್ಟು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಬೇಕು. ಇದರಿಂದ ಪರಿಹಾರ ಕಾರ್ಯಕ್ರಮಗಳು ಚುರುಕಾಗುತ್ತವೆ. ಸಚಿವರಿಲ್ಲದ ಕಾರಣ ಈಗ ಪರಿಹಾರ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಎಂದಿದ್ದಾರೆ.

ಪ್ರವಾಹಪೀಡಿತ ಪ್ರದೇಶಗಳಲ್ಲಿ ಮರು ವಸತಿ ಕೇಂದ್ರಗಳನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ರಕ್ಷಣೆ ಮಾಡಿ ಮೇವು ಒದಗಿಸುವ ಕೆಲಸವೂ ತ್ವರಿತಗತಿಯಲ್ಲಿ ಆಗಬೇಕು. ಸಂತ್ರಸ್ತತರಿಗೆ ಮರು ವಸತಿ ಸೌಕರ್ಯದ ಜೊತೆಗೆ ಆಹಾರ, ಔಷಧ ಸಾಮಾಗ್ರಿಗಳನ್ನು ವಿತರಿಸಬೇಕು. ಪರಿಹಾರ ಕಾರ್ಯಕ್ಕೆ ಸೇನೆಯನ್ನೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಿಯೋಜನೆ ಮಾಡುವುದು ಸೂಕ್ತ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ರಾಜ್ಯ ಸರ್ಕಾರದ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸಲಿ.
ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಪಕ್ಷದ ವತಿಯಿಂದಲೂ ಈ ಕೆಲಸ ನಡೆದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾದಾಮಿ ವಿಧಾನಸಭೆ ಕ್ಷೇತ್ರದ ಮಲಪ್ರಭಾ ನದಿ ದಡದ 32 ಗ್ರಾಮಗಳು ಪ್ರವಾಹಕ್ಕೆ ಒಳಪಟ್ಟಿವೆ. ಈ ಪೈಕಿ 10 ಗ್ರಾಮಗಳು ಸಂಪೂರ್ಣವಾಗಿ ಜಲವಾವೃತವಾಗಿವೆ. ಸಂತ್ರಸ್ತರಿಗೆ ತಾಲೂಕಿನ ಶಾಲೆ, ಮಠ ಹಾಗೂ ಸಾರ್ವಜನಿಕ ಸಮುದಾಯ ಭವನಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಜಾನುವಾರುಗಳಿಗೂ ಆಶ್ರಯ ನೀಡಿದ್ದು, ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈವರೆಗೆ 5,764 ಕುಟುಂಬಗಳನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ. 5,962 ಜಾನುವಾರುಗಳನ್ನು ರಕ್ಷಿಸಲಾಗಿದೆ. ಮರು ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದವರಿಗೆ ಊಟ, ನೀರು, ಔಷಧ ಸಾಮಾಗ್ರಿಗಳನ್ನು ವಿತರಿಸಲಾಗಿದೆ. ಇದಕ್ಕಾಗಿ 39 ಪರಿಹಾರ ಕೇಂದ್ರಗಳು ಹಾಗೂ 20 ಒಪಿಡಿಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎನ್‍ಡಿಆರ್‌ಎಫ್, ಎಸ್‍ಡಿಆರ್‌ಏಫ್ ಹಾಗೂ ಸೇನೆಯ ವಿವಿಧ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಪಟ್ಟದಕಲ್ಲು ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 271 ಮಂದಿಯನ್ನು ನಿನ್ನೆ ರಕ್ಷಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿದ್ದು, ಆರೋಗ್ಯ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿವೆ. 4-5 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿದು ಹೋಗಿದೆ. ಆ ಗ್ರಾಮಸ್ಥರಿಗೂ ಆಹಾರ ಪೂರೈಕೆ ಮಾಡಲಾಗುತ್ತಿದ್ದು, ಅವರು ಸುರಕ್ಷಿತವಾಗಿದ್ದಾರೆ.

ಗುಳೇದಗುಡ್ಡದಲ್ಲಿ 10 ಗ್ರಾಮಗಳು ಜಲಾವೃತವಾಗಿವೆ. 551 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಪ್ರವಾಹ ಪರಿಸ್ಥಿತಿ ಕೊಂಚ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಚುರುಕಿನಿಂದ ಸಾಗಿದೆ. ಮರು ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಭೀಮಪ್ಪ ಎಂಬುವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ಪರಿಹಾರ ಕಾರ್ಯದಲ್ಲಿ ನಿರತವಾಗಿದ್ದು, ಸಂತ್ರಸ್ತರಿಗೆ ನೆರವಾಗಲು ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ನಿರಂತರ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದೇನೆ. ರಾಜಕಾರಣಿಗಳಿರುವುದು ಜನಗಳ ಸೇವೆ ಮಾಡಲು ಎಂಬುದನ್ನು ಮರೆಯಬಾರದು. ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯ ಮರೆತು ಮಾನವೀಯತೆಯ ನೆಲೆಯಲ್ಲಿ ಒಂದಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...