Homeಕರ್ನಾಟಕಪ್ರವಾಹ: ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕು...

ಪ್ರವಾಹ: ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕು – ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದ ಒಂದು ಲಕ್ಷ ಕೋಟಿಗೂ ಅಧಿಕ ಮೌಲ್ಯದ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ರಸ್ತೆ, ಸೇತುವೆ, ರೈಲ್ವೆ ಹಳಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಆಗಿರುವ ಹಾನಿಯನ್ನು ಸರಿಪರಿಸಲು ಹಲವಾರು ವರ್ಷಗಳೇ ಬೇಕಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಪ್ರವಾಹದ ಭೀಕರತೆಯನ್ನು ಕಂಡೂ ಕೇಂದ್ರ ಸರ್ಕಾರ ಇನ್ನೂ ಕಣ್ಣುಮುಚ್ಚಿ ಕುಳಿತಿದೆ. ಕೂಡಲೇ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಪ್ರಧಾನಿಯವರು ಕೂಡಲೇ ರಾಜ್ಯಕ್ಕೆ ಭೇಟಿ ನೀಡಿ, ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಹಾರ ಕಾರ್ಯಗಳಿಗೆ ತಕ್ಷಣವೇ ರೂ.5 ಸಾವಿರ ಕೋಟಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪರಿಹಾರ ಕಾರ್ಯಗಳಿಗೆ ಈಗ ಬಿಡುಗಡೆ ಮಾಡಿರುವ ಮೊತ್ತ ಏನೇನೂ ಸಾಲದು. ಪರಿಹಾರ ಕೊಡಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳಲು ನಾವೇನೂ ಭಿಕ್ಷುಕರಲ್ಲ ಅಥವಾ ಕೇಂದ್ರ ಸರ್ಕಾರ ನಮಗೆ ದಾನವನ್ನೇನೂ ಕೊಡುತ್ತಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಏನೇನೂ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿಚಾರದಲ್ಲಿ ಅದರಲ್ಲಿಯೂ ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಮಲತಾಯಿ ಧೋರಣೆ ಸಲ್ಲದು. ಇದನ್ನು ಯಾರೂ ಮೆಚ್ಚುವುದಿಲ್ಲ. ರಾಜ್ಯದ ಜನತೆ ಮಾಡಿರುವ ಅನ್ಯಾಯವಾದರೂ ಏನು? 26 ಸಂಸದರನ್ನು ಬಿಜೆಪಿಯಿಂದ ಆಯ್ಕೆ ಮಾಡಿ ಕಳುಹಿಸಿದ್ದು ತಪ್ಪೇ? ಈ ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದ ಅವಧಿಯಲ್ಲಿ ಅಂದಿನ ಪ್ರಧಾನಿ ಮನಮೋಹನ ಸಿಂಗ್ ಅವರು ಹಾಗೂ ಎಐಸಿಸಿ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿಯವರು ರಾಜ್ಯಕ್ಕೆ ಭೇಟಿ ಕೊಟ್ಟು, ವೈಮಾನಿಕ ಸಮೀಕ್ಷೆ ನಡೆಸಿ ರೂ.1600 ಕೋಟಿ ಪರಿಹಾರ ಘೋಷಣೆ ಮಾಡಿದ್ದರು ಎಂದಿದ್ದಾರೆ.

ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಮೊದಲೇ ದಿನವೇ ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಆಗ್ರಹಿಸಿದ ರೈತರ ಮೇಲೆ ಗೋಲಿಬಾರ್ ಮಾಡಲಾಗಿತ್ತು. ಮೊನ್ನೆ ಗದಗದಲ್ಲಿ ಕಷ್ಟ ಹೇಳಿಕೊಳ್ಳಲು ಹೋದ ಪ್ರವಾಹ ಸಂತ್ರಸ್ತರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಇದಕ್ಕಾಗಿ ಯಡಿಯೂರಪ್ಪ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರವಾಹದಿಂದಾಗಿ ರಾಜ್ಯ ಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಯಾವುದೇ ವಿಷಯದಲ್ಲಿಯೂ ರಾಜಕೀಯ ಬೆರೆಸಿ ಮಾತನಾಡುವುದು ಸರಿಯಲ್ಲ. ಯಡಿಯೂರಪ್ಪ ಅವರು ಏಕ ಪಾತ್ರಾಭಿನಯದ ಮೂಲಕ ಪರಿಸ್ಥಿತಿ ಎದುರಿಸುವುದು ಸುಲಭವಲ್ಲ. ಅದು ಅವರಿಂದ ಸಾಧ್ಯವೂ ಆಗುತ್ತಿಲ್ಲ. ಅವರು ಕೂಡಲೇ ಸಂಪುಟ ವಿಸ್ತರಣೆ ಮಾಡಿ, 20 ಮಂದಿಗೆ ಸಚಿವ ಸ್ಥಾನವನ್ನು ಕೊಟ್ಟು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಬೇಕು. ಇದರಿಂದ ಪರಿಹಾರ ಕಾರ್ಯಕ್ರಮಗಳು ಚುರುಕಾಗುತ್ತವೆ. ಸಚಿವರಿಲ್ಲದ ಕಾರಣ ಈಗ ಪರಿಹಾರ ಕಾರ್ಯ ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ ಎಂದಿದ್ದಾರೆ.

ಪ್ರವಾಹಪೀಡಿತ ಪ್ರದೇಶಗಳಲ್ಲಿ ಮರು ವಸತಿ ಕೇಂದ್ರಗಳನ್ನು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಜಾನುವಾರುಗಳನ್ನು ರಕ್ಷಣೆ ಮಾಡಿ ಮೇವು ಒದಗಿಸುವ ಕೆಲಸವೂ ತ್ವರಿತಗತಿಯಲ್ಲಿ ಆಗಬೇಕು. ಸಂತ್ರಸ್ತತರಿಗೆ ಮರು ವಸತಿ ಸೌಕರ್ಯದ ಜೊತೆಗೆ ಆಹಾರ, ಔಷಧ ಸಾಮಾಗ್ರಿಗಳನ್ನು ವಿತರಿಸಬೇಕು. ಪರಿಹಾರ ಕಾರ್ಯಕ್ಕೆ ಸೇನೆಯನ್ನೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಿಯೋಜನೆ ಮಾಡುವುದು ಸೂಕ್ತ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಬಿಟ್ಟು ರಾಜ್ಯ ಸರ್ಕಾರದ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸಲಿ.
ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಪಕ್ಷದ ವತಿಯಿಂದಲೂ ಈ ಕೆಲಸ ನಡೆದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾದಾಮಿ ವಿಧಾನಸಭೆ ಕ್ಷೇತ್ರದ ಮಲಪ್ರಭಾ ನದಿ ದಡದ 32 ಗ್ರಾಮಗಳು ಪ್ರವಾಹಕ್ಕೆ ಒಳಪಟ್ಟಿವೆ. ಈ ಪೈಕಿ 10 ಗ್ರಾಮಗಳು ಸಂಪೂರ್ಣವಾಗಿ ಜಲವಾವೃತವಾಗಿವೆ. ಸಂತ್ರಸ್ತರಿಗೆ ತಾಲೂಕಿನ ಶಾಲೆ, ಮಠ ಹಾಗೂ ಸಾರ್ವಜನಿಕ ಸಮುದಾಯ ಭವನಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಜಾನುವಾರುಗಳಿಗೂ ಆಶ್ರಯ ನೀಡಿದ್ದು, ಮೇವು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈವರೆಗೆ 5,764 ಕುಟುಂಬಗಳನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸಲಾಗಿದೆ. 5,962 ಜಾನುವಾರುಗಳನ್ನು ರಕ್ಷಿಸಲಾಗಿದೆ. ಮರು ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದವರಿಗೆ ಊಟ, ನೀರು, ಔಷಧ ಸಾಮಾಗ್ರಿಗಳನ್ನು ವಿತರಿಸಲಾಗಿದೆ. ಇದಕ್ಕಾಗಿ 39 ಪರಿಹಾರ ಕೇಂದ್ರಗಳು ಹಾಗೂ 20 ಒಪಿಡಿಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಎನ್‍ಡಿಆರ್‌ಎಫ್, ಎಸ್‍ಡಿಆರ್‌ಏಫ್ ಹಾಗೂ ಸೇನೆಯ ವಿವಿಧ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಪಟ್ಟದಕಲ್ಲು ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 271 ಮಂದಿಯನ್ನು ನಿನ್ನೆ ರಕ್ಷಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿದ್ದು, ಆರೋಗ್ಯ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿವೆ. 4-5 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿದು ಹೋಗಿದೆ. ಆ ಗ್ರಾಮಸ್ಥರಿಗೂ ಆಹಾರ ಪೂರೈಕೆ ಮಾಡಲಾಗುತ್ತಿದ್ದು, ಅವರು ಸುರಕ್ಷಿತವಾಗಿದ್ದಾರೆ.

ಗುಳೇದಗುಡ್ಡದಲ್ಲಿ 10 ಗ್ರಾಮಗಳು ಜಲಾವೃತವಾಗಿವೆ. 551 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಪ್ರವಾಹ ಪರಿಸ್ಥಿತಿ ಕೊಂಚ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಚುರುಕಿನಿಂದ ಸಾಗಿದೆ. ಮರು ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಭೀಮಪ್ಪ ಎಂಬುವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಆಡಳಿತ ಪರಿಹಾರ ಕಾರ್ಯದಲ್ಲಿ ನಿರತವಾಗಿದ್ದು, ಸಂತ್ರಸ್ತರಿಗೆ ನೆರವಾಗಲು ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ನಿರಂತರ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದೇನೆ. ರಾಜಕಾರಣಿಗಳಿರುವುದು ಜನಗಳ ಸೇವೆ ಮಾಡಲು ಎಂಬುದನ್ನು ಮರೆಯಬಾರದು. ಇಂತಹ ಸಂಕಷ್ಟದ ಸಮಯದಲ್ಲಿ ಎಲ್ಲ ಪಕ್ಷಗಳು ರಾಜಕೀಯ ಭಿನ್ನಾಭಿಪ್ರಾಯ ಮರೆತು ಮಾನವೀಯತೆಯ ನೆಲೆಯಲ್ಲಿ ಒಂದಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...