Homeಕೊರೊನಾಕೊರೊನಾ ಆತಂಕ: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ಕೊರೊನಾ ಆತಂಕ: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಮತ್ತು ಓಮಿಕ್ರಾನ್ ರೂಪಂತರದ ಪರಿಸ್ಥಿತಿ ಬಗ್ಗೆ ಗುರುವಾರ (ಜ.13) ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಗುರುವಾರ ಸಂಜೆ 4:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೋವಿಡ್-ಸಂಬಂಧಿತ ಪರಿಸ್ಥಿತಿಯ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.

ಭಾನುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ್ದ ಪ್ರಧಾನಿ, ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನುಸಜ್ಜುಗೊಳಿಸಲು ಮತ್ತು 18 ರಿಂದ 15 ವರ್ಷ ಒಳಗಿನವರ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಕರೆ ನೀಡಿದ್ದರು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಇತರ ಖಾಯಿಲೆ ಇರದ 60 ವರ್ಷಕ್ಕಿಂತ ಮೇಲ್ಪಟ್ಟವರನ್ನು ಹೊರತುಪಡಿಸಿ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕೆ ಅಭಿಯಾನವನ್ನು ಕೂಡಾ ಪ್ರಾರಂಭಿಸಲಾಗಿದೆ.

ಆಯಾ ರಾಜ್ಯಗಳ ನಿರ್ದಿಷ್ಟ ಪರಿಸ್ಥಿತಿಗಳು ಮತ್ತು ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಚರ್ಚಿಸಲು ಸಿಎಂಗಳೊಂದಿಗೆ ಸಭೆ ಕರೆಯಲಾಗುವುದು ಎಂದು ಪ್ರಧಾನಿ ಈ ಹಿಂದೆ ಹೇಳಿದ್ದರು.

ದೇಶದಲ್ಲಿ ಇಂದು 2.47 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಇದು ಮೂರನೇ ಅಲೆಯಲ್ಲಿ ವರದಿಯಾದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಇದರಿಂದ ಒಟ್ಟು ಕೊರೊನ ಆಪ್ರಕರಣಗಳ ಸಂಖ್ಯೆ 3.63 ಕೋಟಿಗೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಓಮಿಕ್ರಾನ್ ರೂಪಾಂತರದ ಪ್ರಕರಣಗಳು 5,488 ದಾಖಲಾಗಿವೆ.

ಕೋವಿಡ್ ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಮಟೆಗಳಲ್ಲಿ 46,723 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 70 ಲಕ್ಷ ಗಡಿ ದಾಟಿದೆ. ದೆಹಲಿಯಲ್ಲಿ 27,561 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 21,390 ಹೊಸ ಕೊರೊನಾ ಕೇಸ್‌ಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೆ 15,617 ಸೋಂಕಿತರು ಪತ್ತೆಯಾಗಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...