Homeಮುಖಪುಟಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ...

ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ…

- Advertisement -
- Advertisement -

ಏಕಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವ ಪ್ರಧಾನ ಮಂತ್ರಿಯ ಕ್ರಮವನ್ನು ಶ್ಲಾಘಿಸಿದ್ದ ನಟ ಅಮೀರ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ತಿಳಿಸಿದ್ದಾರೆ

ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ್ದ ಪ್ರಧಾನಿಯವರು, ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯಾದ ಅಕ್ಟೋಬರ್ 2 ರಿಂದ ಪ್ಲಾಸ್ಟಿಕ್ ವಿರುದ್ಧ ಹೊಸ ಕ್ರಾಂತಿಯನ್ನು ಪ್ರಾರಂಭಿಸಬೇಕೆಂದು ಜನರನ್ನು ಕೋರಿದ್ದರು. ಈ ತಿಂಗಳ ಆರಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಪ್ಲಾಸ್ಟಿಕ್ ಮುಕ್ತ ಭಾರತದ ಮನವಿಯ ಮುಂದುವರಿಕೆಯಾಗಿತ್ತು.

“ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಏಕ ಬಳಕೆಯ ಪ್ಲಾಸ್ಟಿಕ್ ’ಅನ್ನು ನಿಗ್ರಹಿಸುವ ಪ್ರಯತ್ನವನ್ನು ನಾವೆಲ್ಲರೂ ಬಲವಾಗಿ ಬೆಂಬಲಿಸಬೇಕಾಗಿದೆ. ನಾವು ‘ಏಕ ಬಳಕೆಯ ಪ್ಲಾಸ್ಟಿಕ್’ ಬಳಕೆಯನ್ನು ನಿಲ್ಲಿಸುತ್ತೇವೆ ಎಂದು ಖಚಿತಪಡಿಸಿವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಟ ಅಮೀರ್ ಖಾನ್ ಟ್ವೀಟ್ ಮಾಡಿದ್ದರು.

ಇದಕ್ಕಿ ಪ್ರತಿಕ್ರಿಯಿಸಿರುವ ಪ್ರಧಾನಿಯವರು “ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತೆಗೆದುಹಾಕುವ ಆಂದೋಲನಕ್ಕೆ ಅಮೂಲ್ಯವಾದ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳು ಅಮೀರ್ ಖಾನ್. ನಿಮ್ಮ ಉತ್ತೇಜಕ ಮಾತುಗಳು ಚಳುವಳಿಯನ್ನು ಬಲಪಡಿಸಲು ಇತರರಿಗೆ ಪ್ರೇರಣೆ ನೀಡುತ್ತದೆ ”ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಪ್ರತಿದಿನ 15,000 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ 9,000 ಟನ್ ನಷ್ಟನ್ನು ಸಂಗ್ರಹಿಸಿ ಮರುಬಳಕೆ ಮಾಡಲಾಗುತ್ತದೆ. ಆದರೆ 6,000 ಟನ್ ಪ್ಲಾಸ್ಟಿಕ್ ತ್ಯಾಜ್ಯವು ಕಸವಾಗಿ ಹಾಗೆಯೇ ಉಳಿಯುತ್ತಿದೆ ಎಂದು 2018 ರಲ್ಲಿ ಅಂದಿನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ರವರು ಹೇಳಿದ್ದರು.

ಈ ಕಸದ ಪ್ಲಾಸ್ಟಿಕ್ ನದಿಗಳು, ಸಾಗರಗಳು ಮತ್ತು ನೆಲದ ಮಣ್ಣಿನಲ್ಲಿ ಉಳಿದು ಪರಿಸರವನ್ನು ಕಲುಷಿತಗೊಳಿಸುತ್ತದೆ. ಸಸ್ಯಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ, ಚರಂಡಿಗಳು ಮತ್ತು ಕಾಲುವೆಗಳನ್ನು ನಿರ್ಬಂಧಿಸುತ್ತದೆ ಮತ್ತು ಪರಿಸರ ವ್ಯವಸ್ಥೆಗಳನ್ನು ಏರು ಪೇರು ಮಾಡುತ್ತಿವೆ.

12 ಹಿಮಾಲಯನ್ ರಾಜ್ಯಗಳಾದ ಸಿಕ್ಕಿಂ, ಮೇಘಾಲಯ, ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್, ಉತ್ತರಾಖಂಡ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಅಸ್ಸಾಂ ಮತ್ತು ಹಿಮಾಚಲ ಪ್ರದೇಶದಾದ್ಯಂತ ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧದ ಯುದ್ಧದಲ್ಲಿ 2018 ರ ಮೇ 26 ರಂದು ನಡೆದ ಎರಡು ಗಂಟೆಗಳ ಕಾರ್ಯಾಚರಣೆಯಲ್ಲಿ ಸ್ವಯಂಸೇವಕರು ಸುಮಾರು ನಾಲ್ಕು ಲಕ್ಷ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದರು.

2.50 ಲಕ್ಷಕ್ಕೂ ಹೆಚ್ಚು (62.67%) ತ್ಯಾಜ್ಯ ವಸ್ತುಗಳು ಚಿಪ್ಸ್, ಮಿಠಾಯಿಗಳು, ಚೂಯಿಂಗ್ ಮತ್ತು ತಂಬಾಕು ಉತ್ಪನ್ನಗಳ ಹೊದಿಕೆಗಳನ್ನು ಒಳಗೊಂಡಿವೆ. ಮಲ್ಟಿ-ಲೇಯರ್ಡ್ ಪ್ಲಾಸ್ಟಿಕ್ ಎಂದು ವರ್ಗೀಕರಿಸಲಾದ ಇಂತಹ ಹೊದಿಕೆಗಳನ್ನು ಮರುಬಳಕೆ ಮಾಡಲಾಗುವುದಿಲ್ಲ ಮತ್ತು ಜೈವಿಕ ವಿಘಟನೀಯವಲ್ಲ ಎಂದು ತಜ್ಞರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನಗಿದು ಇಷ್ಟವಾಗಲಿಲ್ಲ. ಜನಪರ ಕಾಳಜಿ ತೋರಿಸುತ್ತಲೇ ಬಂದಿರುವ ಅಮೀರ್ ಖಾನ್ ಹೇಳಿದ್ದು ನಿಜವಾದ ಸುದ್ದಿ. ಅದನ್ನು ಈ ಪ್ರಚಾರ ಪ್ರಿಯ ಪ್ರಧಾನಿ ಶ್ಲಾಘಿಸಿದ್ದು ಯಾವ ಸೀಮೆಯ ಸುದ್ದಿ!? ಆತನಿಗೆ ಇನ್ನಷ್ಟು ಪ್ರಚಾರ ಸಿಕ್ಕಿತು ಅಷ್ಟೇ. ಆತನಿಗೆ ನಿಜವಾದ ಕಾಳಜಿ ಇದ್ದರೆ ಏಕ ಬಳಕೆಯ ಪ್ಲಾಸ್ಟಿಕನ್ನು ಮೂಲದಲ್ಲೇ ನಿಷೇಧಿಸಲಿ. Lip serviceಗಳಿಗೆ ಏಕೆ ಪ್ರಚಾರ ಕೊಡುತ್ತೀರಿ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...