Homeಮುಖಪುಟಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ...

ಥ್ಯಾಂಕ್ಯೂ ಅಮೀರ್ ಖಾನ್ ಎಂದ ಪ್ರಧಾನಿ ನರೇಂದ್ರ ಮೋದಿ…

- Advertisement -
- Advertisement -

ಏಕಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸುವ ಪ್ರಧಾನ ಮಂತ್ರಿಯ ಕ್ರಮವನ್ನು ಶ್ಲಾಘಿಸಿದ್ದ ನಟ ಅಮೀರ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದ ತಿಳಿಸಿದ್ದಾರೆ

ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ್ದ ಪ್ರಧಾನಿಯವರು, ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆಯಾದ ಅಕ್ಟೋಬರ್ 2 ರಿಂದ ಪ್ಲಾಸ್ಟಿಕ್ ವಿರುದ್ಧ ಹೊಸ ಕ್ರಾಂತಿಯನ್ನು ಪ್ರಾರಂಭಿಸಬೇಕೆಂದು ಜನರನ್ನು ಕೋರಿದ್ದರು. ಈ ತಿಂಗಳ ಆರಂಭದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ ಪ್ಲಾಸ್ಟಿಕ್ ಮುಕ್ತ ಭಾರತದ ಮನವಿಯ ಮುಂದುವರಿಕೆಯಾಗಿತ್ತು.

“ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ‘ಏಕ ಬಳಕೆಯ ಪ್ಲಾಸ್ಟಿಕ್ ’ಅನ್ನು ನಿಗ್ರಹಿಸುವ ಪ್ರಯತ್ನವನ್ನು ನಾವೆಲ್ಲರೂ ಬಲವಾಗಿ ಬೆಂಬಲಿಸಬೇಕಾಗಿದೆ. ನಾವು ‘ಏಕ ಬಳಕೆಯ ಪ್ಲಾಸ್ಟಿಕ್’ ಬಳಕೆಯನ್ನು ನಿಲ್ಲಿಸುತ್ತೇವೆ ಎಂದು ಖಚಿತಪಡಿಸಿವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ನಟ ಅಮೀರ್ ಖಾನ್ ಟ್ವೀಟ್ ಮಾಡಿದ್ದರು.

ಇದಕ್ಕಿ ಪ್ರತಿಕ್ರಿಯಿಸಿರುವ ಪ್ರಧಾನಿಯವರು “ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತೆಗೆದುಹಾಕುವ ಆಂದೋಲನಕ್ಕೆ ಅಮೂಲ್ಯವಾದ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದಗಳು ಅಮೀರ್ ಖಾನ್. ನಿಮ್ಮ ಉತ್ತೇಜಕ ಮಾತುಗಳು ಚಳುವಳಿಯನ್ನು ಬಲಪಡಿಸಲು ಇತರರಿಗೆ ಪ್ರೇರಣೆ ನೀಡುತ್ತದೆ ”ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಪ್ರತಿದಿನ 15,000 ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ 9,000 ಟನ್ ನಷ್ಟನ್ನು ಸಂಗ್ರಹಿಸಿ ಮರುಬಳಕೆ ಮಾಡಲಾಗುತ್ತದೆ. ಆದರೆ 6,000 ಟನ್ ಪ್ಲಾಸ್ಟಿಕ್ ತ್ಯಾಜ್ಯವು ಕಸವಾಗಿ ಹಾಗೆಯೇ ಉಳಿಯುತ್ತಿದೆ ಎಂದು 2018 ರಲ್ಲಿ ಅಂದಿನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ರವರು ಹೇಳಿದ್ದರು.

ಈ ಕಸದ ಪ್ಲಾಸ್ಟಿಕ್ ನದಿಗಳು, ಸಾಗರಗಳು ಮತ್ತು ನೆಲದ ಮಣ್ಣಿನಲ್ಲಿ ಉಳಿದು ಪರಿಸರವನ್ನು ಕಲುಷಿತಗೊಳಿಸುತ್ತದೆ. ಸಸ್ಯಗಳ ಬೆಳವಣಿಗೆಗೆ ಅಡ್ಡಿಯಾಗುತ್ತದೆ, ಚರಂಡಿಗಳು ಮತ್ತು ಕಾಲುವೆಗಳನ್ನು ನಿರ್ಬಂಧಿಸುತ್ತದೆ ಮತ್ತು ಪರಿಸರ ವ್ಯವಸ್ಥೆಗಳನ್ನು ಏರು ಪೇರು ಮಾಡುತ್ತಿವೆ.

12 ಹಿಮಾಲಯನ್ ರಾಜ್ಯಗಳಾದ ಸಿಕ್ಕಿಂ, ಮೇಘಾಲಯ, ತ್ರಿಪುರ, ಮಿಜೋರಾಂ, ನಾಗಾಲ್ಯಾಂಡ್, ಉತ್ತರಾಖಂಡ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಅಸ್ಸಾಂ ಮತ್ತು ಹಿಮಾಚಲ ಪ್ರದೇಶದಾದ್ಯಂತ ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧದ ಯುದ್ಧದಲ್ಲಿ 2018 ರ ಮೇ 26 ರಂದು ನಡೆದ ಎರಡು ಗಂಟೆಗಳ ಕಾರ್ಯಾಚರಣೆಯಲ್ಲಿ ಸ್ವಯಂಸೇವಕರು ಸುಮಾರು ನಾಲ್ಕು ಲಕ್ಷ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದರು.

2.50 ಲಕ್ಷಕ್ಕೂ ಹೆಚ್ಚು (62.67%) ತ್ಯಾಜ್ಯ ವಸ್ತುಗಳು ಚಿಪ್ಸ್, ಮಿಠಾಯಿಗಳು, ಚೂಯಿಂಗ್ ಮತ್ತು ತಂಬಾಕು ಉತ್ಪನ್ನಗಳ ಹೊದಿಕೆಗಳನ್ನು ಒಳಗೊಂಡಿವೆ. ಮಲ್ಟಿ-ಲೇಯರ್ಡ್ ಪ್ಲಾಸ್ಟಿಕ್ ಎಂದು ವರ್ಗೀಕರಿಸಲಾದ ಇಂತಹ ಹೊದಿಕೆಗಳನ್ನು ಮರುಬಳಕೆ ಮಾಡಲಾಗುವುದಿಲ್ಲ ಮತ್ತು ಜೈವಿಕ ವಿಘಟನೀಯವಲ್ಲ ಎಂದು ತಜ್ಞರು ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನನಗಿದು ಇಷ್ಟವಾಗಲಿಲ್ಲ. ಜನಪರ ಕಾಳಜಿ ತೋರಿಸುತ್ತಲೇ ಬಂದಿರುವ ಅಮೀರ್ ಖಾನ್ ಹೇಳಿದ್ದು ನಿಜವಾದ ಸುದ್ದಿ. ಅದನ್ನು ಈ ಪ್ರಚಾರ ಪ್ರಿಯ ಪ್ರಧಾನಿ ಶ್ಲಾಘಿಸಿದ್ದು ಯಾವ ಸೀಮೆಯ ಸುದ್ದಿ!? ಆತನಿಗೆ ಇನ್ನಷ್ಟು ಪ್ರಚಾರ ಸಿಕ್ಕಿತು ಅಷ್ಟೇ. ಆತನಿಗೆ ನಿಜವಾದ ಕಾಳಜಿ ಇದ್ದರೆ ಏಕ ಬಳಕೆಯ ಪ್ಲಾಸ್ಟಿಕನ್ನು ಮೂಲದಲ್ಲೇ ನಿಷೇಧಿಸಲಿ. Lip serviceಗಳಿಗೆ ಏಕೆ ಪ್ರಚಾರ ಕೊಡುತ್ತೀರಿ?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...